Advertisement
MIRROR FOCUS

ಎಲ್ಲೆಲ್ಲಾ ಸಾಧ್ಯವೋ… ಹೇಗೆಲ್ಲಾ ಸಾಧ್ಯವೋ ಹಾಗೆ ಅಡಿಕೆ ಕಳ್ಳದಾರಿಯ ಮೂಲಕ ಆಗಮನ | ಅಡಿಕೆ ಆಮದು ತಡೆಗೆ ಕೇಂದ್ರದ ಸಹಕಾರ ಕೋರಿದ ಕ್ಯಾಂಪ್ಕೋ |

Share

ವಿದೇಶಗಳಿಂದ ಅಕ್ರಮವಾಗಿ ಅಡಿಕೆ ಆಮದಾಗುತ್ತಿದ್ದು, ಇದರ ತಡೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕ್ಯಾಂಪ್ಕೋ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ. ಅಡಿಕೆ ಆಮದು ತಡೆಗೆ ಕೇಂದ್ರ ಸರ್ಕಾರದ ನೆರವು ಅಗತ್ಯ ಇದೆ ಎಂದು ಪತ್ರದಲ್ಲಿ ಕ್ಯಾಂಪ್ಕೋ ತಿಳಿಸಿದೆ.

ಕಳೆದ ಕೆಲವು ಸಮಯಗಳಿಂದ ಅಡಿಕೆಯು ಈಶಾನ್ಯ ರಾಜ್ಯಗಳ ಮೂಲಕ ಆಗಮನವಾಗುತ್ತಿದ್ದರೆ, ಅಲ್ಲಿ ಬಿಗು ಕ್ರಮವಾಗುತ್ತಿದ್ದಂತೆಯೇ ಶ್ರೀಲಂಕಾ ಸೇರಿದಂತೆ ಇತರೆಡೆಗಳಿಂದ ಹಡಗಿನ ಮೂಲಕವೂ ಆಗಮನವಾಯಿತು. ಇಲ್ಲೂ ತೆರಿಗೆ ಇಲಾಖೆ ಚುರುಕಾಗದಂತೆ ವಿಮಾನದ ಮೂಲಕ ಅಡಿಕೆ ಆಮದಾಗುತ್ತದೆ. ವಿಮಾನದ ಮೂಲಕ ಬರುವ ಅಡಿಕೆಯು ಮಹಾರಾಷ್ಟ್ರದ ಮಾರುಕಟ್ಟೆಗೆ ಬಂದು ದೇಶದ ವಿವಿದೆಡೆಗೆ ರವಾನೆಯಾಗುತ್ತದೆ. ಹೀಗಾಗಿ ಅಡಿಕೆ ಆಮದು ತಡೆ ಬಹುದೊಡ್ಡ ಸವಾಲಾಗಿದೆ. ಇದಕ್ಕಾಗಿ ಸರ್ಕಾರದ ನೆರವು ಅಗತ್ಯ ಇದೆ.

ಕಿಶೋರ್‌ ಕುಮಾರ್‌ ಕೊಡ್ಗಿ

ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಅವರು ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಅಡಿಕೆ ಬೆಳೆಗಾರರ ಹಿತರಕ್ಷಣೆಗೆ ಕ್ಯಾಂಪ್ಕೋ ಸದಾ ಬದ್ಧವಾಗಿದ್ದು, ಕೇಂದ್ರ ಸರ್ಕಾರವೂ ಅಡಿಕೆ ಬೆಳೆಗಾರರ ಪರವಾಗಿರುವ ಕಾರಣದಿಂದ ಬೆಳೆಗಾರರ ಹಿತಕಾಯಲು ಅಡಿಕೆ ಆಮದು ತಡೆಗೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಅಡಿಕೆ ಆಮದು ದೇಶೀಯ ಅಡಿಕೆ ಮಾರುಕಟ್ಟೆಯ ಮೇಲೆ ಗಂಭೀರವಾದ ಪರಿಣಾಮ ಉಂಟು ಮಾಡುತ್ತದೆ ಮತ್ತು ರೈತರಿಗೆ ಗಣನೀಯ ನಷ್ಟವನ್ನು ಉಂಟುಮಾಡುತ್ತದೆ. ಆರಂಭದಲ್ಲಿ ವಿವಿಧ ಬಂದರುಗಳ ಮೂಲಕ ಅಡಿಕೆ ಆಮದು ಆಗುತ್ತಿತ್ತು, ನಂತರ ದೇಶದ ಗಡಿಭಾಗಗಳಾದ ಸಿಲ್ಚಾರ್‌ ಸೇರಿದಂತೆ ವಿವಿಧ ಕಡೆಗಳಿಂದ ಅಸ್ಸಾಂ ಮೂಲಕ ಅಡಿಕೆ ಬರುತ್ತಿತ್ತು.ನಂತರ ಇಂಫಾಲ್‌ನಂತಹ  ವಿಮಾನ ನಿಲ್ದಾಣಗಳಿಂದ ಕೋಲ್ಕತ್ತಾ,  ಬೆಂಗಳೂರು, ಹೈದರಾಬಾದ್, ನಾಗ್ಪುರ ಮತ್ತು ಅಹಮದಾಬಾದ್ ಗಳಿಗೆ ಬರುತ್ತವೆ. ಪ್ರತೀ ಬ್ಯಾಗ್‌ ನಲ್ಲಿ 30 ಕೆಜಿಯಂತೆ ರವಾನೆಯಾಗುತ್ತದೆ ಎಂದು ಕ್ಯಾಂಪ್ಕೋ ಅಧ್ಯಕ್ಷರು ವಿವರವಾಗಿ  ಪ್ರಧಾನಿಗಳಿಗೆ ಪತ್ರ ಬರೆದಿದ್ದಾರೆ.

ಈಚೆಗೆ ಡ್ರೈಫ್ರುಟ್‌, ಹುರಿದ ಅಡಿಕೆ , ಮೀನಿನ ಉತ್ಪನ್ನದ ಹೆಸರಿನಲ್ಲಿಯೂ ಅಡಿಕೆ ಆಮದು ಆರಂಭವಾಗಿದೆ. ಇದು ಅಪಾಯಕಾರಿಯಾದ ಬೆಳವಣಿಗೆಯಾಗಿದೆ. ಹೀಗಾಗಿ ಅಡಿಕೆ ಆಮದು ತಡೆಗೆ ತಕ್ಷಣ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಕ್ಯಾಂಪ್ಕೋ ಅಧ್ಯಕ್ಷರು ಪ್ರಧಾನಿಗಳಿಗೆ ಮನವಿ ಮಾಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

34 minutes ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

8 hours ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

1 day ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

1 day ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

1 day ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

1 day ago