ವಿದೇಶಗಳಿಂದ ಅಕ್ರಮವಾಗಿ ಅಡಿಕೆ ಆಮದಾಗುತ್ತಿದ್ದು, ಇದರ ತಡೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕ್ಯಾಂಪ್ಕೋ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ. ಅಡಿಕೆ ಆಮದು ತಡೆಗೆ ಕೇಂದ್ರ ಸರ್ಕಾರದ ನೆರವು ಅಗತ್ಯ ಇದೆ ಎಂದು ಪತ್ರದಲ್ಲಿ ಕ್ಯಾಂಪ್ಕೋ ತಿಳಿಸಿದೆ.
ಕಳೆದ ಕೆಲವು ಸಮಯಗಳಿಂದ ಅಡಿಕೆಯು ಈಶಾನ್ಯ ರಾಜ್ಯಗಳ ಮೂಲಕ ಆಗಮನವಾಗುತ್ತಿದ್ದರೆ, ಅಲ್ಲಿ ಬಿಗು ಕ್ರಮವಾಗುತ್ತಿದ್ದಂತೆಯೇ ಶ್ರೀಲಂಕಾ ಸೇರಿದಂತೆ ಇತರೆಡೆಗಳಿಂದ ಹಡಗಿನ ಮೂಲಕವೂ ಆಗಮನವಾಯಿತು. ಇಲ್ಲೂ ತೆರಿಗೆ ಇಲಾಖೆ ಚುರುಕಾಗದಂತೆ ವಿಮಾನದ ಮೂಲಕ ಅಡಿಕೆ ಆಮದಾಗುತ್ತದೆ. ವಿಮಾನದ ಮೂಲಕ ಬರುವ ಅಡಿಕೆಯು ಮಹಾರಾಷ್ಟ್ರದ ಮಾರುಕಟ್ಟೆಗೆ ಬಂದು ದೇಶದ ವಿವಿದೆಡೆಗೆ ರವಾನೆಯಾಗುತ್ತದೆ. ಹೀಗಾಗಿ ಅಡಿಕೆ ಆಮದು ತಡೆ ಬಹುದೊಡ್ಡ ಸವಾಲಾಗಿದೆ. ಇದಕ್ಕಾಗಿ ಸರ್ಕಾರದ ನೆರವು ಅಗತ್ಯ ಇದೆ.
ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಅವರು ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಅಡಿಕೆ ಬೆಳೆಗಾರರ ಹಿತರಕ್ಷಣೆಗೆ ಕ್ಯಾಂಪ್ಕೋ ಸದಾ ಬದ್ಧವಾಗಿದ್ದು, ಕೇಂದ್ರ ಸರ್ಕಾರವೂ ಅಡಿಕೆ ಬೆಳೆಗಾರರ ಪರವಾಗಿರುವ ಕಾರಣದಿಂದ ಬೆಳೆಗಾರರ ಹಿತಕಾಯಲು ಅಡಿಕೆ ಆಮದು ತಡೆಗೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಅಡಿಕೆ ಆಮದು ದೇಶೀಯ ಅಡಿಕೆ ಮಾರುಕಟ್ಟೆಯ ಮೇಲೆ ಗಂಭೀರವಾದ ಪರಿಣಾಮ ಉಂಟು ಮಾಡುತ್ತದೆ ಮತ್ತು ರೈತರಿಗೆ ಗಣನೀಯ ನಷ್ಟವನ್ನು ಉಂಟುಮಾಡುತ್ತದೆ. ಆರಂಭದಲ್ಲಿ ವಿವಿಧ ಬಂದರುಗಳ ಮೂಲಕ ಅಡಿಕೆ ಆಮದು ಆಗುತ್ತಿತ್ತು, ನಂತರ ದೇಶದ ಗಡಿಭಾಗಗಳಾದ ಸಿಲ್ಚಾರ್ ಸೇರಿದಂತೆ ವಿವಿಧ ಕಡೆಗಳಿಂದ ಅಸ್ಸಾಂ ಮೂಲಕ ಅಡಿಕೆ ಬರುತ್ತಿತ್ತು.ನಂತರ ಇಂಫಾಲ್ನಂತಹ ವಿಮಾನ ನಿಲ್ದಾಣಗಳಿಂದ ಕೋಲ್ಕತ್ತಾ, ಬೆಂಗಳೂರು, ಹೈದರಾಬಾದ್, ನಾಗ್ಪುರ ಮತ್ತು ಅಹಮದಾಬಾದ್ ಗಳಿಗೆ ಬರುತ್ತವೆ. ಪ್ರತೀ ಬ್ಯಾಗ್ ನಲ್ಲಿ 30 ಕೆಜಿಯಂತೆ ರವಾನೆಯಾಗುತ್ತದೆ ಎಂದು ಕ್ಯಾಂಪ್ಕೋ ಅಧ್ಯಕ್ಷರು ವಿವರವಾಗಿ ಪ್ರಧಾನಿಗಳಿಗೆ ಪತ್ರ ಬರೆದಿದ್ದಾರೆ.
ಈಚೆಗೆ ಡ್ರೈಫ್ರುಟ್, ಹುರಿದ ಅಡಿಕೆ , ಮೀನಿನ ಉತ್ಪನ್ನದ ಹೆಸರಿನಲ್ಲಿಯೂ ಅಡಿಕೆ ಆಮದು ಆರಂಭವಾಗಿದೆ. ಇದು ಅಪಾಯಕಾರಿಯಾದ ಬೆಳವಣಿಗೆಯಾಗಿದೆ. ಹೀಗಾಗಿ ಅಡಿಕೆ ಆಮದು ತಡೆಗೆ ತಕ್ಷಣ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಕ್ಯಾಂಪ್ಕೋ ಅಧ್ಯಕ್ಷರು ಪ್ರಧಾನಿಗಳಿಗೆ ಮನವಿ ಮಾಡಿದ್ದಾರೆ.
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…