ಕೇಂದ್ರ ಕೃಷಿ ಸಚಿವರನ್ನು ಭೇಟಿಯಾದ ಕ್ಯಾಂಪ್ಕೋ ನಿಯೋಗ – ಅಡಿಕೆ ಹಾನಿಕಾರಕ ಕುರಿತ ಸಂಶೋಧನೆ, ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಚರ್ಚೆ

June 10, 2026
2:56 PM
ಅಡಿಕೆಯ ಆರೋಗ್ಯ ಸುರಕ್ಷತೆ ಮತ್ತು ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಕ್ಯಾಂಪ್ಕೋ ನಿಯೋಗವು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿತು. ಅಡಿಕೆ ಕುರಿತ ವೈಜ್ಞಾನಿಕ ಸಂಶೋಧನೆಗಳಿಗೆ ಸರ್ಕಾರದಿಂದ ಬೆಂಬಲದ ಭರವಸೆ ದೊರೆತಿದೆ.

ಅಡಿಕೆ ಬೆಳೆಯ ಆರೋಗ್ಯ ಸುರಕ್ಷತೆ ಹಾಗೂ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತಂತೆ ನಡೆಯುತ್ತಿರುವ ಸಂಶೋಧನಾ ಕಾರ್ಯಗಳ ಬಗ್ಗೆ ಕ್ಯಾಂಪ್ಕೊ  ನಿಯೋಗವು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿತು.‌

Advertisement

ಭೇಟಿಯ ವೇಳೆ ಅಡಿಕೆಯ ಹಾನಿಕಾರಕ ಆರೋಪ ಹಾಗೂ ಅಡಿಕೆಯ ಆರೋಗ್ಯ ಸುರಕ್ಷತೆ ಕುರಿತು ಕೈಗೊಳ್ಳಲಾಗುತ್ತಿರುವ ವೈಜ್ಞಾನಿಕ ಅಧ್ಯಯನಗಳು, ಅಡಿಕೆ ಬೆಳೆಗಾರರಿಗೆ ತೊಂದರೆಯಾಗುತ್ತಿರುವ ಎಲೆಚುಕ್ಕೆ ರೋಗದ ನಿಯಂತ್ರಣ ಕ್ರಮಗಳು ಹಾಗೂ ಅಡಿಕೆ ಕೃಷಿಯ ಪ್ರಸ್ತುತ ಸವಾಲುಗಳ ಬಗ್ಗೆ ಸಚಿವರಿಗೆ ವಿವರಿಸಲಾಯಿತು.

ಈ ಸಂದರ್ಭದಲ್ಲಿ ಭಾರತ ಸರ್ಕಾರದ ತೋಟಗಾರಿಕಾ ಆಯುಕ್ತರು ಸಂಶೋಧನೆಗಾಗಿ ಅಗತ್ಯವಿರುವ ಮಾದರಿಗಳು ಮತ್ತು ಮಾಹಿತಿಯನ್ನು ಸಂಗ್ರಹಿಸುವಲ್ಲಿ ಕ್ಯಾಂಪ್ಕೋ ವಹಿಸಿರುವ ಪಾತ್ರವನ್ನು ಶ್ಲಾಘಿಸಿದರು. ಅಡಿಕೆ ಕುರಿತ ಸಂಶೋಧನೆಗಳ ಪ್ರಗತಿ ಕುರಿತು ಮಾಹಿತಿ ನೀಡಿದ ಅವರು, ಅಡಿಕೆ ನಿಷೇಧಕ್ಕೆ ಸಂಬಂಧಿಸಿದಂತೆ ವಿಶ್ವ ಆರೋಗ್ಯ ಸಂಸ್ಥೆ (WHO) ಮಟ್ಟದಲ್ಲಿ ಉಂಟಾಗಿರುವ ಆತಂಕಗಳಿಗೆ ವೈಜ್ಞಾನಿಕ ಆಧಾರಿತ ಸಂಶೋಧನೆಗಳ ಮೂಲಕ ಸಮರ್ಪಕ ಉತ್ತರ ನೀಡುವ ಭರವಸೆಯನ್ನೂ ವ್ಯಕ್ತಪಡಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ನಿಯೋಗದಲ್ಲಿ ಕ್ಯಾಂಪ್ಕೋ ಅಧ್ಯಕ್ಷ ಸತೀಶ್ಚಂದ್ರ,‌ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕ್ಯಾಂಪ್ಕೋ ವ್ಯವಸ್ಥಾಪಕ ನಿರ್ದೇಶಕ ಡಾ. ಬಿ.ವಿ. ಸತ್ಯನಾರಾಯಣ, ತೀರ್ಥಹಳ್ಳಿ ಶಾಸಕ ಹಾಗೂ ಅಡಿಕೆ ಮಹಾಮಂಡಳದ ಅಧ್ಯಕ್ಷ ಆರಗ ಜ್ಞಾನೇಂದ್ರ, ತುಮ್ಕೋಸ್  ಅಧ್ಯಕ್ಷ ಶಿವಕುಮಾರ್, ಕ್ಯಾಂಪ್ಕೋ ದೆಹಲಿ ಶಾಖಾ ವ್ಯವಸ್ಥಾಪಕ ಬಿಪಿನ್ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

A CAMPCO delegation led by President Sathishchandra met Union Agriculture Minister Shivraj Singh Chouhan in New Delhi and discussed ongoing research on arecanut health safety and leaf spot disease control. Government officials appreciated CAMPCO’s efforts in collecting research samples and assured scientific support to address concerns related to arecanut.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ
August 10, 2026
3:32 PM
by: ಸಾಯಿಶೇಖರ್ ಕರಿಕಳ
ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ
August 10, 2026
6:20 AM
by: ದ ರೂರಲ್ ಮಿರರ್.ಕಾಂ
ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು
August 10, 2026
6:05 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ
August 9, 2026
12:36 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror