ಕೇಂದ್ರ ಕೃಷಿ ಸಚಿವರನ್ನು ಭೇಟಿಯಾದ ಕ್ಯಾಂಪ್ಕೋ ನಿಯೋಗ – ಅಡಿಕೆ ಹಾನಿಕಾರಕ ಕುರಿತ ಸಂಶೋಧನೆ, ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಚರ್ಚೆ

June 10, 2026
2:56 PM
ಅಡಿಕೆಯ ಆರೋಗ್ಯ ಸುರಕ್ಷತೆ ಮತ್ತು ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಕ್ಯಾಂಪ್ಕೋ ನಿಯೋಗವು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿತು. ಅಡಿಕೆ ಕುರಿತ ವೈಜ್ಞಾನಿಕ ಸಂಶೋಧನೆಗಳಿಗೆ ಸರ್ಕಾರದಿಂದ ಬೆಂಬಲದ ಭರವಸೆ ದೊರೆತಿದೆ.

ಅಡಿಕೆ ಬೆಳೆಯ ಆರೋಗ್ಯ ಸುರಕ್ಷತೆ ಹಾಗೂ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತಂತೆ ನಡೆಯುತ್ತಿರುವ ಸಂಶೋಧನಾ ಕಾರ್ಯಗಳ ಬಗ್ಗೆ ಕ್ಯಾಂಪ್ಕೊ  ನಿಯೋಗವು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿತು.‌

ಭೇಟಿಯ ವೇಳೆ ಅಡಿಕೆಯ ಹಾನಿಕಾರಕ ಆರೋಪ ಹಾಗೂ ಅಡಿಕೆಯ ಆರೋಗ್ಯ ಸುರಕ್ಷತೆ ಕುರಿತು ಕೈಗೊಳ್ಳಲಾಗುತ್ತಿರುವ ವೈಜ್ಞಾನಿಕ ಅಧ್ಯಯನಗಳು, ಅಡಿಕೆ ಬೆಳೆಗಾರರಿಗೆ ತೊಂದರೆಯಾಗುತ್ತಿರುವ ಎಲೆಚುಕ್ಕೆ ರೋಗದ ನಿಯಂತ್ರಣ ಕ್ರಮಗಳು ಹಾಗೂ ಅಡಿಕೆ ಕೃಷಿಯ ಪ್ರಸ್ತುತ ಸವಾಲುಗಳ ಬಗ್ಗೆ ಸಚಿವರಿಗೆ ವಿವರಿಸಲಾಯಿತು.

Advertisement

ಈ ಸಂದರ್ಭದಲ್ಲಿ ಭಾರತ ಸರ್ಕಾರದ ತೋಟಗಾರಿಕಾ ಆಯುಕ್ತರು ಸಂಶೋಧನೆಗಾಗಿ ಅಗತ್ಯವಿರುವ ಮಾದರಿಗಳು ಮತ್ತು ಮಾಹಿತಿಯನ್ನು ಸಂಗ್ರಹಿಸುವಲ್ಲಿ ಕ್ಯಾಂಪ್ಕೋ ವಹಿಸಿರುವ ಪಾತ್ರವನ್ನು ಶ್ಲಾಘಿಸಿದರು. ಅಡಿಕೆ ಕುರಿತ ಸಂಶೋಧನೆಗಳ ಪ್ರಗತಿ ಕುರಿತು ಮಾಹಿತಿ ನೀಡಿದ ಅವರು, ಅಡಿಕೆ ನಿಷೇಧಕ್ಕೆ ಸಂಬಂಧಿಸಿದಂತೆ ವಿಶ್ವ ಆರೋಗ್ಯ ಸಂಸ್ಥೆ (WHO) ಮಟ್ಟದಲ್ಲಿ ಉಂಟಾಗಿರುವ ಆತಂಕಗಳಿಗೆ ವೈಜ್ಞಾನಿಕ ಆಧಾರಿತ ಸಂಶೋಧನೆಗಳ ಮೂಲಕ ಸಮರ್ಪಕ ಉತ್ತರ ನೀಡುವ ಭರವಸೆಯನ್ನೂ ವ್ಯಕ್ತಪಡಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ನಿಯೋಗದಲ್ಲಿ ಕ್ಯಾಂಪ್ಕೋ ಅಧ್ಯಕ್ಷ ಸತೀಶ್ಚಂದ್ರ,‌ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕ್ಯಾಂಪ್ಕೋ ವ್ಯವಸ್ಥಾಪಕ ನಿರ್ದೇಶಕ ಡಾ. ಬಿ.ವಿ. ಸತ್ಯನಾರಾಯಣ, ತೀರ್ಥಹಳ್ಳಿ ಶಾಸಕ ಹಾಗೂ ಅಡಿಕೆ ಮಹಾಮಂಡಳದ ಅಧ್ಯಕ್ಷ ಆರಗ ಜ್ಞಾನೇಂದ್ರ, ತುಮ್ಕೋಸ್  ಅಧ್ಯಕ್ಷ ಶಿವಕುಮಾರ್, ಕ್ಯಾಂಪ್ಕೋ ದೆಹಲಿ ಶಾಖಾ ವ್ಯವಸ್ಥಾಪಕ ಬಿಪಿನ್ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

Advertisement

A CAMPCO delegation led by President Sathishchandra met Union Agriculture Minister Shivraj Singh Chouhan in New Delhi and discussed ongoing research on arecanut health safety and leaf spot disease control. Government officials appreciated CAMPCO’s efforts in collecting research samples and assured scientific support to address concerns related to arecanut.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಮಲೆನಾಡು ಸೇರಿದಂತೆ ಹಲವೆಡೆ ಮುಂಗಾರು ಮಳೆ ಚುರುಕು-ಕೃಷಿಗೆ ಹೊಸ ಚೈತನ್ಯ, ರೈತರಲ್ಲಿ ಖುಷಿ
June 30, 2026
2:40 PM
by: ದ ರೂರಲ್ ಮಿರರ್.ಕಾಂ
ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ
June 28, 2026
10:21 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ
June 28, 2026
7:21 AM
by: ಪ್ರಬಂಧ ಅಂಬುತೀರ್ಥ
ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ
June 28, 2026
6:57 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror