MIRROR FOCUS

ಅಡಿಕೆ-ಕಾಳುಮೆಣಸು ಅಕ್ರಮ ಆಮದು ತಡೆಗೆ ಒತ್ತಾಯ | ಅಡಿಕೆ ಮೇಲಿನ ಜಿಎಸ್‌ಟಿ ಇಳಿಕೆಗೆ ಕೇಂದ್ರ ಹಣಕಾಸು ಸಚಿವರಿಗೆ ಕ್ಯಾಂಪ್ಕೋ ಅಧ್ಯಕ್ಷರಿಂದ ಮನವಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಡಿಕೆಯ ಮೇಲಿನ ಜಿಎಸ್ಟಿ ಯನ್ನು5% ನಿಂದ 2 % ಗೆ ಇಳಿಕೆ ಮಾಡಬೇಕು, ಅಡಿಕೆ ಮತ್ತು ಕಾಳುಮೆಣಸಿನ ಅಕ್ರಮ ಆಮದುಗಳನ್ನು ತಡೆಯಲು ಕ್ರಮಗಳನ್ನು ಬಲಪಡಿಸಬೇಕು ಸೇರಿದಂತೆ ವಿವಿಧ ರೈತ ಪರವಾದ ಬೇಡಿಕೆಯ ಮನವಿಯನ್ನು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಮಾಡಿದ್ದಾರೆ.

Advertisement

ಅಡಿಕೆ ಮೇಲಿನ ಜಿಎಸ್ಟಿ ಕಡಿತ ಮಾಡುವುದರಿಂದ ರೈತರು ಸಹಕಾರಿ ಸಂಸ್ಥೆಗಳಲ್ಲಿ ವ್ಯವಹರಿಸಲು ಉತ್ತೇಜನ ಸಿಗುವುದು, ತೆರಿಗೆ ಕಳ್ಳತನಕ್ಕೆ ಕಡಿವಾಣ ಬೀಳಲಿದ್ದು ಸರಕಾರಕ್ಕೆ ತೆರಿಗೆಯ ಆದಾಯ ಹೆಚ್ಚಾಗಲಿದೆ. ಸಹಕಾರಿ ಸಂಸ್ಥೆಗಳು ಮಾರುಕಟ್ಟೆಯಲ್ಲಿ ಹೆಚ್ಚು ಸ್ಪರ್ಧಾತ್ಮಕವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗಲಿದೆ ಎಂದು ಅವರು ಮನವಿಯಲ್ಲಿ ತಿಳಿಸಿದ್ದಾರೆ. ಇದೇ ರೀತಿ ಮೈಲುತುತ್ತದ ಮೇಲಿನ ಜಿಎಸ್ಟಿಯನ್ನು 18% ನಿಂದ 5%ಗೆ ಇಳಿಸಲು ಮನವಿ, ಕಾರ್ಬನ್‌ ಫೈಬರ್‌ ದೋಟಿಯ ಆಮದು ಸುಂಕ ಇಳಿಕೆಗೆ ಕ್ರಮ,  ವಿದೇಶಿ ಅಡಿಕೆಗೆ ಕನಿಷ್ಠ ಆಮದು ಬೆಲೆ ಘೋಷಣೆ ಮಾಡಿದರೂ, ಅಧಿಕಾರಿಗಳು ವಶಪಡಿಸಿಕೊಂಡ ಅಕ್ರಮ ಆಮದು ಅಡಿಕೆಯನ್ನು ಸ್ಥಳೀಯ ಮಾರುಕಟ್ಟೆಯಲ್ಲಿ ಮರುಹರಾಜು ಹಾಕಲಾಗುತ್ತಿದೆ.ಇದು ದೇಶೀ ಮಾರುಕಟ್ಟೆಗೆ ಹೊಡೆತ ಬೀಳಲಿದೆ.ವಶಪಡಿಸಿಕೊಂಡ ಅಡಿಕೆಯನ್ನು ಮರುಹರಾಜಿಗೆ ಅನುವು ಮಾಡಿಕೊಡದೆ ಅದನ್ನು ನಾಶಪಡಿಸುವ ಕೆಲಸ ಮಾಡಬೇಕು ಎಂದು ಒತ್ತಾಯಿಸಿದೆ.

ಅಡಿಕೆಯು ಹಲವಾರು ಔಷಧೀಯ ಗುಣಗಳನ್ನು ಹೊಂದಿದ್ದು, ನಮ್ಮ ದೇಶದಲ್ಲಿ ಸಾಂಸ್ಕೃತಿಕವಾಗಿ ಮತ್ತು ಧಾರ್ಮಿಕವಾಗಿ ಜನರ ಜನಹೀವನದಲ್ಲಿ ಹಾಸುಹೊಕ್ಕಾಗಿದೆ. ಹಾಗಾಗಿ ಅಡಿಕೆಯ ನಾನಾ ಉಪಯೋಗಗಳ ಅನ್ವೇಷಣೆಗಾಗಿ ಮತ್ತು ಅಡಿಕೆಗೆ ಬಾಧಿಸುತ್ತಿರುವ ರೋಗಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಂಶೋಧನೆ ನಡೆಸಲು ಸಾಕಷ್ಟು ಹಣ ಬಿಡುಗಡೆ ಮಾಡುವಂತೆ ಕೇಂದ್ರ ಸರಕಾರವನ್ನು ಕ್ಯಾಂಪ್ಕೊ ಅಧ್ಯಕ್ಷರು ಎಲ್ಲಾ ರೈತರ ಪರವಾಗಿ ಮನವಿ ಮಾಡಿದ್ದಾರೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಒತ್ತಾಯಿಸಿದ್ದಾರೆ ಎಂದು ವ್ಯವಸ್ಥಾಪಕ ನಿರ್ದೇಶಕ ಡಾ.ಬಿ.ವಿ.ಸತ್ಯನಾರಾಯಣ ತಿಳಿಸಿದ್ದಾರೆ.

CAMPCO President A. Kishore Kumar Kodgi has submitted a detailed letter to Union Finance Minister Nirmala Sitharaman, congratulating her on her reappointment and seeking her intervention to support farmers and ensure fair practices in the agricultural sector.

  1. Reducing GST on Arecanut from 5% to 2% and on Copper Sulphate used as pesticide
    in farming from 18% to 5%.
  2. To make advanced agricultural tools more affordable reducing Customs Duty on
    Carbon Fibre Poles.
  3. Strengthening measures to curb illegal imports of Arecanut and Pepper, with a call to
    incinerate illegal imports to prevent health risks.

President Mr.Kodgi emphasized the urgent need for these measures to protect farmers ; livelihoods, ensure market integrity, and promote sustainable agriculture. Illegal imports compromise our Market and endanger public health, stated President Mr.Kodgi, We must burn these illegal imported goods to prevent them from re-entering the market. Additional proposals include setting a minimum auction price for seized Arecanut, simplifying the GST structure, and funding research on the medicinal benefits of Arecanut and combating Yellow Leaf Disease.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿಕರ ಪರವಾದ ಬರಹಗಾರರ ಮುಂದಿರುವ ಸವಾಲುಗಳು

ಕೃಷಿಯಲ್ಲಿ ಯಾವುದೇ ಬಲವಾದ ಸಂಘಟನೆ ಇಲ್ಲ. ನಮ್ಮ ಧ್ವನಿ ಎತ್ತಲು ಯಾರೂ ಇಲ್ಲ.ಇಂತಹ…

6 hours ago

ಮೇ 13 ರಿಂದ 25 ರವರೆಗೆ ಈ ರಾಶಿಗಳಿಗೆ ಅದೃಷ್ಟ!, ಕೆಲವು ರಾಶಿಗಳಿಗೆ ಕಠಿಣ ಕಾಲ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದು ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

7 hours ago

ಅಪರೇಷನ್ ಸಿಂಧೂರ | ಭಾರತೀಯ ಸೇನೆಯ ಕಾರ್ಯಾಚರಣೆಗೆ ರಾಜ್ಯದೆಲ್ಲೆಡೆ ಸಂಭ್ರಮಾಚರಣೆ

ಭಾರತೀಯ ಸೇನಾಪಡೆಯು, ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ…

16 hours ago

ಹವಾಮಾನ ವರದಿ | 07-05-2025 | ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆ | ಮೇ 11 ರಿಂದ ಮಳೆ ಪುನರಾರಂಭಗೊಳ್ಳುವ ಲಕ್ಷಣ

ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿಯಲ್ಲಿ…

23 hours ago

ಹೊಸರುಚಿ | ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಚಟ್ಟಂಬಡೆ

ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಚಟ್ಟಂಬಡೆ..

1 day ago