ಭೂತಾನ್‌ ಮೂಲಕ ಅಡಿಕೆ ಆಮದಿಗೆ ಅನುಮತಿಯಿಂದ ದೇಶದ ಅಡಿಕೆ ಬೆಳೆಗಾರರು ಆತಂಕಪಡಬೇಕಾಗಿಲ್ಲ | ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ |

September 29, 2022
7:38 PM

ಕೇಂದ್ರ ಸರ್ಕಾರವು ಸೆ.28 ರಂದು DGFT ಮೂಲಕ ಹೊರಡಿಸಿರುವ ಅಧಿಸೂಚನೆಯಂತೆ ಭೂತಾನ್‌ ನಿಂದ 17000 ಟನ್‌ ಅಡಿಕೆ ಆಮದಿಗೆ ಅನುಮತಿ ಇರುತ್ತದೆ. ಇದರಿಂದ ಭಾರತದ ಅದರಲ್ಲೂ ವಿಶೇಷವಾಗಿ ಕರ್ನಾಟಕ ಮತ್ತು ಕೇರಳ ರಾಜ್ಯದ ಅಡಿಕೆ ಬೆಳೆಗಾರರು ಆತಂಕ ಪಡುವ ಅಗತ್ಯ ಇಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಹೇಳಿದ್ದಾರೆ.

ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ನೀಡಿದ ಕಿಶೋರ್‌ ಕುಮಾರ್‌ ಕೊಡ್ಗಿ ಅವರು, ಭೂತಾನ್‌ ಅಡಿಕೆ ಆಮದು ಕಾರಣದಿಂದ ಇಲ್ಲಿನ ಅಡಿಕೆಯ ದರದ ಸ್ಥಿರತೆಗೆ ಯಾವುದೇ ಪರಿಣಾಮ ಉಂಟು ಮಾಡುವುದಿಲ್ಲ. ಇದರಿಂದ ದೇಶೀಯ ಗುಣಮಟ್ಟದ ಚಾಲಿಗೆ ಯಾವುದೇ ತೊಂದರೆ ಇಲ್ಲ ಎಂದು ಅವರು ಹೇಳಿದ್ದಾರೆ. ಹಾಗಿದ್ದರೂ  ಕೇಂದ್ರ ಸರ್ಕಾರ ಹೊರಡಿಸಿರುವ ಅಧಿಸೂಚನೆಗೆ ಕ್ಯಾಂಪ್ಕೊ ತೀವ್ರ ವಿರೋಧ ವ್ಯಕ್ತಪಡಿಸಿದೆ ಎಂದು ಅವರು ಹೇಳಿದ್ದಾರೆ.

ಕೇಂದ್ರ ವಾಣಿಜ್ಯ ಸಚಿವರಾದ  ಪಿಯೂಷ್ ಗೋಯಲ್‌ ಹಾಗೂ  ಇತರ ಸಂಬಂಧಪಟ್ಟ ಅಧಿಕಾರಿಗಳಿಗೆ ಕ್ಯಾಂಪ್ಕೊ ಪತ್ರದ ಮೂಲಕ ವಿರೋಧ ವ್ಯಕ್ತಪಡಿಸಿದೆ.  ಆಮದು ಆಗುವ ಚಾಲಿ ಅಡಿಕೆಗೆ ಕೆಜಿಗೆ 360/- ರೂಪಾಯಿ ಕನಿಷ್ಠ ಆಮದು ಬೆಲೆ ನಿಗದಿಪಡಿಸುವಂತೆ ಕ್ಯಾಂಪ್ಕೊ ದೆಹಲಿ ನಿಯೋಗದ ಮೂಲಕ ಈಗಾಗಲೇ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ ಎಂದು ಅವರು ಹೇಳಿದ್ದಾರೆ.

ಈ ಅಧಿಸೂಚನೆಯ ಅನುಷ್ಠಾನದಿಂದ ದೇಶೀಯ ಮಾರುಕಟ್ಟೆಗೆ ಯಾವುದೇ ತೊಂದರೆ ಇಲ್ಲದಿದ್ದರೂ , ಪ್ರಧಾನಮಂತ್ರಿಗಳ ಮಹತ್ವಾಕಾಂಕ್ಷೆಯಂತೆ ರೈತರ ಆದಾಯ ದ್ವಿಗುಣಗೊಳಿಸುವ ಕೇಂದ್ರದ ಸಮಗ್ರ ನೀತಿಗೆ ವ್ಯತಿರಿಕ್ತ ಪರಿಣಾಮ ಬೀರುವ ಕುರಿತು ವಾಣಿಜ್ಯ ಸಚಿವರಿಗೆ ಕ್ಯಾಂಪ್ಕೋ ತನ್ನಆತಂಕ ವ್ಯಕ್ತಪಡಿಸಿದೆ. ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರವು ರೈತ ರಹಿತ ಕಾಪಾಡಲು ಸಕರಾತ್ಮಕ ನಿರ್ಧಾರ ತೆಗೆದುಕೊಳ್ಳುವ ಬಗ್ಗೆ ಕ್ಯಾಂಪ್ಕೊ ಆಶಾಭಾವನೆ ಹೊಂದಿದೆ ಎಂದು ಕಿಶೋರ್‌ ಕುಮಾರ್‌ ಕೊಡ್ಗಿಯವರು ಹೇಳಿದ್ದಾರೆ.

 

Advertisement
Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶರಾವತಿ ಯೋಜನೆ | ಜೀವವೈವಿಧ್ಯಕ್ಕೆ ಆಪತ್ತು- ಮನುಕುಲಕ್ಕೆ ವಿಪತ್ತು
September 23, 2025
11:05 AM
by: ದ ರೂರಲ್ ಮಿರರ್.ಕಾಂ
ಮೂಲ ಮರೆತವರು ಅಸ್ತಿತ್ವ ಕಳೆದಕೊಳ್ಳುತ್ತಾರೆ : ರಾಘವೇಶ್ವರ ಶ್ರೀ
September 23, 2025
10:44 AM
by: The Rural Mirror ಸುದ್ದಿಜಾಲ
ಕಲಬುರ್ಗಿಯಲ್ಲಿ ಧಾರಾಕಾರ ಮಳೆ | ವಿವಿದೆಡೆ ಜನಜೀವನ ಅಸ್ತವ್ಯಸ್ಥ | ಮತ್ತೆ ಮಳೆಯಬ್ಬರ
September 23, 2025
7:46 AM
by: The Rural Mirror ಸುದ್ದಿಜಾಲ
ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳು | ಸೀಮಂತ್ ಕುಮಾರ್ ಸಿಂಗ್ ನೇತೃತ್ವದಲ್ಲಿ ನಗರ ಪರ್ಯಟನೆ
September 23, 2025
7:36 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group