ಭೂತಾನ್‌ ಮೂಲಕ ಅಡಿಕೆ ಆಮದಿಗೆ ಅನುಮತಿಯಿಂದ ದೇಶದ ಅಡಿಕೆ ಬೆಳೆಗಾರರು ಆತಂಕಪಡಬೇಕಾಗಿಲ್ಲ | ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ |

September 29, 2022
7:38 PM

ಕೇಂದ್ರ ಸರ್ಕಾರವು ಸೆ.28 ರಂದು DGFT ಮೂಲಕ ಹೊರಡಿಸಿರುವ ಅಧಿಸೂಚನೆಯಂತೆ ಭೂತಾನ್‌ ನಿಂದ 17000 ಟನ್‌ ಅಡಿಕೆ ಆಮದಿಗೆ ಅನುಮತಿ ಇರುತ್ತದೆ. ಇದರಿಂದ ಭಾರತದ ಅದರಲ್ಲೂ ವಿಶೇಷವಾಗಿ ಕರ್ನಾಟಕ ಮತ್ತು ಕೇರಳ ರಾಜ್ಯದ ಅಡಿಕೆ ಬೆಳೆಗಾರರು ಆತಂಕ ಪಡುವ ಅಗತ್ಯ ಇಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಹೇಳಿದ್ದಾರೆ.

Advertisement
Advertisement

ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ನೀಡಿದ ಕಿಶೋರ್‌ ಕುಮಾರ್‌ ಕೊಡ್ಗಿ ಅವರು, ಭೂತಾನ್‌ ಅಡಿಕೆ ಆಮದು ಕಾರಣದಿಂದ ಇಲ್ಲಿನ ಅಡಿಕೆಯ ದರದ ಸ್ಥಿರತೆಗೆ ಯಾವುದೇ ಪರಿಣಾಮ ಉಂಟು ಮಾಡುವುದಿಲ್ಲ. ಇದರಿಂದ ದೇಶೀಯ ಗುಣಮಟ್ಟದ ಚಾಲಿಗೆ ಯಾವುದೇ ತೊಂದರೆ ಇಲ್ಲ ಎಂದು ಅವರು ಹೇಳಿದ್ದಾರೆ. ಹಾಗಿದ್ದರೂ  ಕೇಂದ್ರ ಸರ್ಕಾರ ಹೊರಡಿಸಿರುವ ಅಧಿಸೂಚನೆಗೆ ಕ್ಯಾಂಪ್ಕೊ ತೀವ್ರ ವಿರೋಧ ವ್ಯಕ್ತಪಡಿಸಿದೆ ಎಂದು ಅವರು ಹೇಳಿದ್ದಾರೆ.

Advertisement

ಕೇಂದ್ರ ವಾಣಿಜ್ಯ ಸಚಿವರಾದ  ಪಿಯೂಷ್ ಗೋಯಲ್‌ ಹಾಗೂ  ಇತರ ಸಂಬಂಧಪಟ್ಟ ಅಧಿಕಾರಿಗಳಿಗೆ ಕ್ಯಾಂಪ್ಕೊ ಪತ್ರದ ಮೂಲಕ ವಿರೋಧ ವ್ಯಕ್ತಪಡಿಸಿದೆ.  ಆಮದು ಆಗುವ ಚಾಲಿ ಅಡಿಕೆಗೆ ಕೆಜಿಗೆ 360/- ರೂಪಾಯಿ ಕನಿಷ್ಠ ಆಮದು ಬೆಲೆ ನಿಗದಿಪಡಿಸುವಂತೆ ಕ್ಯಾಂಪ್ಕೊ ದೆಹಲಿ ನಿಯೋಗದ ಮೂಲಕ ಈಗಾಗಲೇ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ ಎಂದು ಅವರು ಹೇಳಿದ್ದಾರೆ.

ಈ ಅಧಿಸೂಚನೆಯ ಅನುಷ್ಠಾನದಿಂದ ದೇಶೀಯ ಮಾರುಕಟ್ಟೆಗೆ ಯಾವುದೇ ತೊಂದರೆ ಇಲ್ಲದಿದ್ದರೂ , ಪ್ರಧಾನಮಂತ್ರಿಗಳ ಮಹತ್ವಾಕಾಂಕ್ಷೆಯಂತೆ ರೈತರ ಆದಾಯ ದ್ವಿಗುಣಗೊಳಿಸುವ ಕೇಂದ್ರದ ಸಮಗ್ರ ನೀತಿಗೆ ವ್ಯತಿರಿಕ್ತ ಪರಿಣಾಮ ಬೀರುವ ಕುರಿತು ವಾಣಿಜ್ಯ ಸಚಿವರಿಗೆ ಕ್ಯಾಂಪ್ಕೋ ತನ್ನಆತಂಕ ವ್ಯಕ್ತಪಡಿಸಿದೆ. ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರವು ರೈತ ರಹಿತ ಕಾಪಾಡಲು ಸಕರಾತ್ಮಕ ನಿರ್ಧಾರ ತೆಗೆದುಕೊಳ್ಳುವ ಬಗ್ಗೆ ಕ್ಯಾಂಪ್ಕೊ ಆಶಾಭಾವನೆ ಹೊಂದಿದೆ ಎಂದು ಕಿಶೋರ್‌ ಕುಮಾರ್‌ ಕೊಡ್ಗಿಯವರು ಹೇಳಿದ್ದಾರೆ.

Advertisement

 

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಮುಕ್ತಾಯ | ರಾಜ್ಯದಲ್ಲಿ 70.03% ಮತದಾನ
May 8, 2024
9:54 PM
by: The Rural Mirror ಸುದ್ದಿಜಾಲ
ಕೊಕ್ಕೋ ಧಾರಣೆ ಇಳಿಕೆ | ವಾರದಲ್ಲಿ 100 ರೂಪಾಯಿ ಕುಸಿತ ಕಂಡ ಕೊಕ್ಕೋ ಧಾರಣೆ |
May 8, 2024
1:55 PM
by: ದ ರೂರಲ್ ಮಿರರ್.ಕಾಂ
Karnataka Weather | 08-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ |
May 8, 2024
11:07 AM
by: ಸಾಯಿಶೇಖರ್ ಕರಿಕಳ
ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |
May 7, 2024
3:13 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror