Advertisement
ಕೃಷಿ

ಭೂತಾನ್‌ ಮೂಲಕ ಅಡಿಕೆ ಆಮದಿಗೆ ಅನುಮತಿಯಿಂದ ದೇಶದ ಅಡಿಕೆ ಬೆಳೆಗಾರರು ಆತಂಕಪಡಬೇಕಾಗಿಲ್ಲ | ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ |

Share

ಕೇಂದ್ರ ಸರ್ಕಾರವು ಸೆ.28 ರಂದು DGFT ಮೂಲಕ ಹೊರಡಿಸಿರುವ ಅಧಿಸೂಚನೆಯಂತೆ ಭೂತಾನ್‌ ನಿಂದ 17000 ಟನ್‌ ಅಡಿಕೆ ಆಮದಿಗೆ ಅನುಮತಿ ಇರುತ್ತದೆ. ಇದರಿಂದ ಭಾರತದ ಅದರಲ್ಲೂ ವಿಶೇಷವಾಗಿ ಕರ್ನಾಟಕ ಮತ್ತು ಕೇರಳ ರಾಜ್ಯದ ಅಡಿಕೆ ಬೆಳೆಗಾರರು ಆತಂಕ ಪಡುವ ಅಗತ್ಯ ಇಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಹೇಳಿದ್ದಾರೆ.

ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ನೀಡಿದ ಕಿಶೋರ್‌ ಕುಮಾರ್‌ ಕೊಡ್ಗಿ ಅವರು, ಭೂತಾನ್‌ ಅಡಿಕೆ ಆಮದು ಕಾರಣದಿಂದ ಇಲ್ಲಿನ ಅಡಿಕೆಯ ದರದ ಸ್ಥಿರತೆಗೆ ಯಾವುದೇ ಪರಿಣಾಮ ಉಂಟು ಮಾಡುವುದಿಲ್ಲ. ಇದರಿಂದ ದೇಶೀಯ ಗುಣಮಟ್ಟದ ಚಾಲಿಗೆ ಯಾವುದೇ ತೊಂದರೆ ಇಲ್ಲ ಎಂದು ಅವರು ಹೇಳಿದ್ದಾರೆ. ಹಾಗಿದ್ದರೂ  ಕೇಂದ್ರ ಸರ್ಕಾರ ಹೊರಡಿಸಿರುವ ಅಧಿಸೂಚನೆಗೆ ಕ್ಯಾಂಪ್ಕೊ ತೀವ್ರ ವಿರೋಧ ವ್ಯಕ್ತಪಡಿಸಿದೆ ಎಂದು ಅವರು ಹೇಳಿದ್ದಾರೆ.

ಕೇಂದ್ರ ವಾಣಿಜ್ಯ ಸಚಿವರಾದ  ಪಿಯೂಷ್ ಗೋಯಲ್‌ ಹಾಗೂ  ಇತರ ಸಂಬಂಧಪಟ್ಟ ಅಧಿಕಾರಿಗಳಿಗೆ ಕ್ಯಾಂಪ್ಕೊ ಪತ್ರದ ಮೂಲಕ ವಿರೋಧ ವ್ಯಕ್ತಪಡಿಸಿದೆ.  ಆಮದು ಆಗುವ ಚಾಲಿ ಅಡಿಕೆಗೆ ಕೆಜಿಗೆ 360/- ರೂಪಾಯಿ ಕನಿಷ್ಠ ಆಮದು ಬೆಲೆ ನಿಗದಿಪಡಿಸುವಂತೆ ಕ್ಯಾಂಪ್ಕೊ ದೆಹಲಿ ನಿಯೋಗದ ಮೂಲಕ ಈಗಾಗಲೇ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ ಎಂದು ಅವರು ಹೇಳಿದ್ದಾರೆ.

ಈ ಅಧಿಸೂಚನೆಯ ಅನುಷ್ಠಾನದಿಂದ ದೇಶೀಯ ಮಾರುಕಟ್ಟೆಗೆ ಯಾವುದೇ ತೊಂದರೆ ಇಲ್ಲದಿದ್ದರೂ , ಪ್ರಧಾನಮಂತ್ರಿಗಳ ಮಹತ್ವಾಕಾಂಕ್ಷೆಯಂತೆ ರೈತರ ಆದಾಯ ದ್ವಿಗುಣಗೊಳಿಸುವ ಕೇಂದ್ರದ ಸಮಗ್ರ ನೀತಿಗೆ ವ್ಯತಿರಿಕ್ತ ಪರಿಣಾಮ ಬೀರುವ ಕುರಿತು ವಾಣಿಜ್ಯ ಸಚಿವರಿಗೆ ಕ್ಯಾಂಪ್ಕೋ ತನ್ನಆತಂಕ ವ್ಯಕ್ತಪಡಿಸಿದೆ. ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರವು ರೈತ ರಹಿತ ಕಾಪಾಡಲು ಸಕರಾತ್ಮಕ ನಿರ್ಧಾರ ತೆಗೆದುಕೊಳ್ಳುವ ಬಗ್ಗೆ ಕ್ಯಾಂಪ್ಕೊ ಆಶಾಭಾವನೆ ಹೊಂದಿದೆ ಎಂದು ಕಿಶೋರ್‌ ಕುಮಾರ್‌ ಕೊಡ್ಗಿಯವರು ಹೇಳಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

3 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

7 hours ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

1 day ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

1 day ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

1 day ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago