Advertisement
ಸುದ್ದಿಗಳು

ಅಡಿಕೆ ಕನಿಷ್ಟ ಆಮದು ದರ ಹೆಚ್ಚಿಸಿದ ಕೇಂದ್ರ | ಕ್ಯಾಂಪ್ಕೊ ಶ್ಲಾಘನೆ |

Share

ಅಡಿಕೆಯ ಉತ್ಪಾದನಾ ವೆಚ್ಚಕ್ಕೆ ಅನುಗುಣವಾಗಿ ಕೇಂದ್ರ  ಸರ್ಕಾರವು ಅಡಿಕೆಯ ಕನಿಷ್ಠ ಆಮದು ಬೆಲೆ ಯನ್ನುಈಗ ಇರುವ ಕೆಜಿಗೆ 251ರೂ.ಗಳಿಂದ  351 ರೂಪಾಯಿಗಳಿಗೆ ಪರಿಷ್ಕರಿಸಿ ಆದೇಶ ಹೊರಡಿಸಿದೆ. ಈ ನಿರ್ಧಾರವನ್ನು ಕ್ಯಾಂಪ್ಕೋ ಸ್ವಾಗತಿಸಿದೆ ಹಾಗೂ ಕೇಂದ್ರ ಸರ್ಕಾರದ ಕ್ರಮವನ್ನು ಶ್ಲಾಘಿಸಿದೆ.

ಅಡಿಕೆ ಆಮದು ರದ ಏರಿಕೆಯ ಕಾರಣದಿಂದ ಅಡಿಕೆ ಮಾರುಕಟ್ಟೆ ಮೇಲೂ ಪರಿಣಾಮ ಬೀರಲಿದೆ. ಕಳೆದ ಕೆಲವು ತಿಂಗಳುಗಳಿಂದ ಏರಿಳಿತದ ಮೂಲಕ ಮಾರುಕಟ್ಟೆಯಲ್ಲಿ ಅಡಿಕೆಯದರ ಅನಿಶ್ಚಿತತೆಯಿಂದ ಕೂಡಿತ್ತು ಮತ್ತು ರೈತರಲ್ಲಿ ಹತಾಶೆಯ ಭಾವನೆಯನ್ನು ಮೂಡಿಸಿತ್ತು. ಕೇಂದ್ರದ ಕ್ರಮದಿಂದಾಗಿ ಕಳಪೆ ಗುಣಮಟ್ಟದ ವಿದೇಶಿ ಅಡಿಕೆಯ ಆಮದಿನ ಮೇಲೆ ಭಾರಿ ಹೊಡೆತ ಬೀಳಲಿದ್ದು, ಉತ್ತಮ ಗುಣಮಟ್ಟದ ದೇಶೀ ಅಡಿಕೆಗೆ ಬೇಡಿಕೆ ಬರಲಿದೆ ಮತ್ತು ದರದಲ್ಲಿ ಸ್ಥಿರತೆ ಕಾಣಲಿದ್ದುಅಡಿಕೆ ಮಾರುಕಟ್ಟೆ ಚೇತರಿಕೆಯಾಗಲಿದೆ. ಅಡಿಕೆಬೆಳೆಗಾರರ ಹಿತರಕ್ಷಕ ಕ್ಯಾಂಪ್ಕೊ ಸಂಸ್ಥೆಯ ಆಡಳಿತ ಮಂಡಳಿ ಕೇಂದ್ರ ಸರಕಾರದ ಕ್ರಮಕ್ಕೆ ಕೃತಜ್ಞತೆ ಸಲ್ಲಿಸುತ್ತಿದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ತಿಳಿಸಿದ್ದಾರೆ.

ರಾಜ್ಯ ಗೃಹಸಚಿವರಾದ ಆರಗ  ಜ್ಞಾನೇಂದ್ರ ನೇತೃತ್ವದಲ್ಲಿ ಕ್ಯಾಂಪ್ಕೊ, ಮ್ಯಾಮ್ಕೊಸ್, ಟಿಎಸ್ಎಸ್, ತುಮ್ಕೋಸ್ ,ಅಡಿಕೆ ಮಾರಾಟ ಮಹಾಮಂಡಳಿ ಮತ್ತು ಸಹಕಾರಿ ರಂಗದ ಹಿರಿಯರಾದ ಮಂಜಪ್ಪ ಹೊಸಬಾಳೆ ಹಾಗೂ ಸಹಕಾರ ಭಾರತೀಯ ರಾಷ್ಟ್ರೀಯ ನಾಯಕರಾದ ಮಾನ್ಯ ರಮೇಶ್‌ ವೈದ್ಯ  ಮುಂತಾದ ಸದಸ್ಯರನ್ನೊಳಗೊಂಡ ನಿಯೋಗವು ದೆಹಲಿಗೆ ತೆರಳಿ ಆಮದು ಕನಿಷ್ಠ ಬೆಲೆಯನ್ನು ಹೆಚ್ಚಿಸುವಂತೆ ಕೃಷಿ ಮತ್ತು ವಾಣಿಜ್ಯ ಸಚಿವರಲ್ಲಿ ಮನವಿಯನ್ನು ಮಾಡಿತ್ತು. ನಂತರದ ದಿನಗಳಲ್ಲಿ ಕ್ಯಾಂಪ್ಕೊದ ನಿರಂತರ ಸಂಪರ್ಕ ಮತ್ತು ಒತ್ತಡದ ಪರಿಣಾಮ ಕೇಂದ್ರ ಸರಕಾರ ಸ್ಪಂದಿಸಿ ಆದೇಶ ಹೊರಡಿಸಿದೆ. ಕನಿಷ್ಠ ಆಮದು ಬೆಲೆಯನ್ನು ಹೆಚ್ಚಿಸುವ ಬಗ್ಗೆ ಕೇಂದ್ರ ಕೃಷಿ ಇಲಾಖೆಯ ರಾಜ್ಯ ಸಚಿವೆ ಶೋಭ ಕರಂದ್ಲಾಜೆಯವರು ಪುತ್ತೂರಿನಲ್ಲಿ ಕ್ಯಾಂಪ್ಕೊದ ಕೃಷಿಯಂತ್ರ ಮೇಳ ಉದ್ಘಾಟನಾ ಸಮಾರಂಭದಲ್ಲಿ ಘೋಷಣೆ ಮಾಡಿದ್ದರು ಎಂದು ಕ್ಯಾಂಪ್ಕೋ ನೆನಪಿಸಿದೆ.

ಅಡಿಕೆಯ ಕನಿಷ್ಠ ಆಮದು ಬೆಲೆಯ ಹೆಚ್ಚಳದಿಂದ ಅಡಿಕೆ ಮಾರುಕಟ್ಟೆ ಚೇತರಿಕೆಯಾಗಲಿದ್ದು ರೈತರು ಸುಳ್ಳು ಸುದ್ಧಿಗಳಿಗೆ ಕಿವಿಗೊಡದೆ ಅಗತ್ಯಕ್ಕೆ ತಕ್ಕಂತೆ ಮಾರಾಟ ಮಾಡಿ ಅಡಿಕೆ ಧಾರಣೆಯ ಸ್ಥಿರತೆಗೆ ಸಹಕಾರ ನೀಡುವಂತೆ ಕ್ಯಾಂಪ್ಕೊ ಆಡಳಿತ ಮಂಡಳಿ ಮನವಿ ಮಾಡುತ್ತದೆ ಎಂದು ಕಿಶೋರ್‌ ಕುಮಾರ್‌ ಕೊಡ್ಗಿ ಹೇಳಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

10 hours ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

11 hours ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

15 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

24 hours ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

1 day ago

ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ

ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…

1 day ago