Advertisement
ಸುದ್ದಿಗಳು

ಅಡಿಕೆ ಕನಿಷ್ಟ ಆಮದು ದರ ಹೆಚ್ಚಿಸಿದ ಕೇಂದ್ರ | ಕ್ಯಾಂಪ್ಕೊ ಶ್ಲಾಘನೆ |

Share

ಅಡಿಕೆಯ ಉತ್ಪಾದನಾ ವೆಚ್ಚಕ್ಕೆ ಅನುಗುಣವಾಗಿ ಕೇಂದ್ರ  ಸರ್ಕಾರವು ಅಡಿಕೆಯ ಕನಿಷ್ಠ ಆಮದು ಬೆಲೆ ಯನ್ನುಈಗ ಇರುವ ಕೆಜಿಗೆ 251ರೂ.ಗಳಿಂದ  351 ರೂಪಾಯಿಗಳಿಗೆ ಪರಿಷ್ಕರಿಸಿ ಆದೇಶ ಹೊರಡಿಸಿದೆ. ಈ ನಿರ್ಧಾರವನ್ನು ಕ್ಯಾಂಪ್ಕೋ ಸ್ವಾಗತಿಸಿದೆ ಹಾಗೂ ಕೇಂದ್ರ ಸರ್ಕಾರದ ಕ್ರಮವನ್ನು ಶ್ಲಾಘಿಸಿದೆ.

ಅಡಿಕೆ ಆಮದು ರದ ಏರಿಕೆಯ ಕಾರಣದಿಂದ ಅಡಿಕೆ ಮಾರುಕಟ್ಟೆ ಮೇಲೂ ಪರಿಣಾಮ ಬೀರಲಿದೆ. ಕಳೆದ ಕೆಲವು ತಿಂಗಳುಗಳಿಂದ ಏರಿಳಿತದ ಮೂಲಕ ಮಾರುಕಟ್ಟೆಯಲ್ಲಿ ಅಡಿಕೆಯದರ ಅನಿಶ್ಚಿತತೆಯಿಂದ ಕೂಡಿತ್ತು ಮತ್ತು ರೈತರಲ್ಲಿ ಹತಾಶೆಯ ಭಾವನೆಯನ್ನು ಮೂಡಿಸಿತ್ತು. ಕೇಂದ್ರದ ಕ್ರಮದಿಂದಾಗಿ ಕಳಪೆ ಗುಣಮಟ್ಟದ ವಿದೇಶಿ ಅಡಿಕೆಯ ಆಮದಿನ ಮೇಲೆ ಭಾರಿ ಹೊಡೆತ ಬೀಳಲಿದ್ದು, ಉತ್ತಮ ಗುಣಮಟ್ಟದ ದೇಶೀ ಅಡಿಕೆಗೆ ಬೇಡಿಕೆ ಬರಲಿದೆ ಮತ್ತು ದರದಲ್ಲಿ ಸ್ಥಿರತೆ ಕಾಣಲಿದ್ದುಅಡಿಕೆ ಮಾರುಕಟ್ಟೆ ಚೇತರಿಕೆಯಾಗಲಿದೆ. ಅಡಿಕೆಬೆಳೆಗಾರರ ಹಿತರಕ್ಷಕ ಕ್ಯಾಂಪ್ಕೊ ಸಂಸ್ಥೆಯ ಆಡಳಿತ ಮಂಡಳಿ ಕೇಂದ್ರ ಸರಕಾರದ ಕ್ರಮಕ್ಕೆ ಕೃತಜ್ಞತೆ ಸಲ್ಲಿಸುತ್ತಿದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ತಿಳಿಸಿದ್ದಾರೆ.

ರಾಜ್ಯ ಗೃಹಸಚಿವರಾದ ಆರಗ  ಜ್ಞಾನೇಂದ್ರ ನೇತೃತ್ವದಲ್ಲಿ ಕ್ಯಾಂಪ್ಕೊ, ಮ್ಯಾಮ್ಕೊಸ್, ಟಿಎಸ್ಎಸ್, ತುಮ್ಕೋಸ್ ,ಅಡಿಕೆ ಮಾರಾಟ ಮಹಾಮಂಡಳಿ ಮತ್ತು ಸಹಕಾರಿ ರಂಗದ ಹಿರಿಯರಾದ ಮಂಜಪ್ಪ ಹೊಸಬಾಳೆ ಹಾಗೂ ಸಹಕಾರ ಭಾರತೀಯ ರಾಷ್ಟ್ರೀಯ ನಾಯಕರಾದ ಮಾನ್ಯ ರಮೇಶ್‌ ವೈದ್ಯ  ಮುಂತಾದ ಸದಸ್ಯರನ್ನೊಳಗೊಂಡ ನಿಯೋಗವು ದೆಹಲಿಗೆ ತೆರಳಿ ಆಮದು ಕನಿಷ್ಠ ಬೆಲೆಯನ್ನು ಹೆಚ್ಚಿಸುವಂತೆ ಕೃಷಿ ಮತ್ತು ವಾಣಿಜ್ಯ ಸಚಿವರಲ್ಲಿ ಮನವಿಯನ್ನು ಮಾಡಿತ್ತು. ನಂತರದ ದಿನಗಳಲ್ಲಿ ಕ್ಯಾಂಪ್ಕೊದ ನಿರಂತರ ಸಂಪರ್ಕ ಮತ್ತು ಒತ್ತಡದ ಪರಿಣಾಮ ಕೇಂದ್ರ ಸರಕಾರ ಸ್ಪಂದಿಸಿ ಆದೇಶ ಹೊರಡಿಸಿದೆ. ಕನಿಷ್ಠ ಆಮದು ಬೆಲೆಯನ್ನು ಹೆಚ್ಚಿಸುವ ಬಗ್ಗೆ ಕೇಂದ್ರ ಕೃಷಿ ಇಲಾಖೆಯ ರಾಜ್ಯ ಸಚಿವೆ ಶೋಭ ಕರಂದ್ಲಾಜೆಯವರು ಪುತ್ತೂರಿನಲ್ಲಿ ಕ್ಯಾಂಪ್ಕೊದ ಕೃಷಿಯಂತ್ರ ಮೇಳ ಉದ್ಘಾಟನಾ ಸಮಾರಂಭದಲ್ಲಿ ಘೋಷಣೆ ಮಾಡಿದ್ದರು ಎಂದು ಕ್ಯಾಂಪ್ಕೋ ನೆನಪಿಸಿದೆ.

ಅಡಿಕೆಯ ಕನಿಷ್ಠ ಆಮದು ಬೆಲೆಯ ಹೆಚ್ಚಳದಿಂದ ಅಡಿಕೆ ಮಾರುಕಟ್ಟೆ ಚೇತರಿಕೆಯಾಗಲಿದ್ದು ರೈತರು ಸುಳ್ಳು ಸುದ್ಧಿಗಳಿಗೆ ಕಿವಿಗೊಡದೆ ಅಗತ್ಯಕ್ಕೆ ತಕ್ಕಂತೆ ಮಾರಾಟ ಮಾಡಿ ಅಡಿಕೆ ಧಾರಣೆಯ ಸ್ಥಿರತೆಗೆ ಸಹಕಾರ ನೀಡುವಂತೆ ಕ್ಯಾಂಪ್ಕೊ ಆಡಳಿತ ಮಂಡಳಿ ಮನವಿ ಮಾಡುತ್ತದೆ ಎಂದು ಕಿಶೋರ್‌ ಕುಮಾರ್‌ ಕೊಡ್ಗಿ ಹೇಳಿದ್ದಾರೆ.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

9 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

16 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

16 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

24 hours ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

1 day ago

ಹವಾಮಾನ ವರದಿ | 31-08-2026 | ಸೆ.3ರಿಂದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…

2 days ago