Advertisement
ಸುದ್ದಿಗಳು

ಅಡಿಕೆ ಕನಿಷ್ಟ ಆಮದು ದರ ಹೆಚ್ಚಿಸಿದ ಕೇಂದ್ರ | ಕ್ಯಾಂಪ್ಕೊ ಶ್ಲಾಘನೆ |

Share

ಅಡಿಕೆಯ ಉತ್ಪಾದನಾ ವೆಚ್ಚಕ್ಕೆ ಅನುಗುಣವಾಗಿ ಕೇಂದ್ರ  ಸರ್ಕಾರವು ಅಡಿಕೆಯ ಕನಿಷ್ಠ ಆಮದು ಬೆಲೆ ಯನ್ನುಈಗ ಇರುವ ಕೆಜಿಗೆ 251ರೂ.ಗಳಿಂದ  351 ರೂಪಾಯಿಗಳಿಗೆ ಪರಿಷ್ಕರಿಸಿ ಆದೇಶ ಹೊರಡಿಸಿದೆ. ಈ ನಿರ್ಧಾರವನ್ನು ಕ್ಯಾಂಪ್ಕೋ ಸ್ವಾಗತಿಸಿದೆ ಹಾಗೂ ಕೇಂದ್ರ ಸರ್ಕಾರದ ಕ್ರಮವನ್ನು ಶ್ಲಾಘಿಸಿದೆ.

ಅಡಿಕೆ ಆಮದು ರದ ಏರಿಕೆಯ ಕಾರಣದಿಂದ ಅಡಿಕೆ ಮಾರುಕಟ್ಟೆ ಮೇಲೂ ಪರಿಣಾಮ ಬೀರಲಿದೆ. ಕಳೆದ ಕೆಲವು ತಿಂಗಳುಗಳಿಂದ ಏರಿಳಿತದ ಮೂಲಕ ಮಾರುಕಟ್ಟೆಯಲ್ಲಿ ಅಡಿಕೆಯದರ ಅನಿಶ್ಚಿತತೆಯಿಂದ ಕೂಡಿತ್ತು ಮತ್ತು ರೈತರಲ್ಲಿ ಹತಾಶೆಯ ಭಾವನೆಯನ್ನು ಮೂಡಿಸಿತ್ತು. ಕೇಂದ್ರದ ಕ್ರಮದಿಂದಾಗಿ ಕಳಪೆ ಗುಣಮಟ್ಟದ ವಿದೇಶಿ ಅಡಿಕೆಯ ಆಮದಿನ ಮೇಲೆ ಭಾರಿ ಹೊಡೆತ ಬೀಳಲಿದ್ದು, ಉತ್ತಮ ಗುಣಮಟ್ಟದ ದೇಶೀ ಅಡಿಕೆಗೆ ಬೇಡಿಕೆ ಬರಲಿದೆ ಮತ್ತು ದರದಲ್ಲಿ ಸ್ಥಿರತೆ ಕಾಣಲಿದ್ದುಅಡಿಕೆ ಮಾರುಕಟ್ಟೆ ಚೇತರಿಕೆಯಾಗಲಿದೆ. ಅಡಿಕೆಬೆಳೆಗಾರರ ಹಿತರಕ್ಷಕ ಕ್ಯಾಂಪ್ಕೊ ಸಂಸ್ಥೆಯ ಆಡಳಿತ ಮಂಡಳಿ ಕೇಂದ್ರ ಸರಕಾರದ ಕ್ರಮಕ್ಕೆ ಕೃತಜ್ಞತೆ ಸಲ್ಲಿಸುತ್ತಿದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ತಿಳಿಸಿದ್ದಾರೆ.

ರಾಜ್ಯ ಗೃಹಸಚಿವರಾದ ಆರಗ  ಜ್ಞಾನೇಂದ್ರ ನೇತೃತ್ವದಲ್ಲಿ ಕ್ಯಾಂಪ್ಕೊ, ಮ್ಯಾಮ್ಕೊಸ್, ಟಿಎಸ್ಎಸ್, ತುಮ್ಕೋಸ್ ,ಅಡಿಕೆ ಮಾರಾಟ ಮಹಾಮಂಡಳಿ ಮತ್ತು ಸಹಕಾರಿ ರಂಗದ ಹಿರಿಯರಾದ ಮಂಜಪ್ಪ ಹೊಸಬಾಳೆ ಹಾಗೂ ಸಹಕಾರ ಭಾರತೀಯ ರಾಷ್ಟ್ರೀಯ ನಾಯಕರಾದ ಮಾನ್ಯ ರಮೇಶ್‌ ವೈದ್ಯ  ಮುಂತಾದ ಸದಸ್ಯರನ್ನೊಳಗೊಂಡ ನಿಯೋಗವು ದೆಹಲಿಗೆ ತೆರಳಿ ಆಮದು ಕನಿಷ್ಠ ಬೆಲೆಯನ್ನು ಹೆಚ್ಚಿಸುವಂತೆ ಕೃಷಿ ಮತ್ತು ವಾಣಿಜ್ಯ ಸಚಿವರಲ್ಲಿ ಮನವಿಯನ್ನು ಮಾಡಿತ್ತು. ನಂತರದ ದಿನಗಳಲ್ಲಿ ಕ್ಯಾಂಪ್ಕೊದ ನಿರಂತರ ಸಂಪರ್ಕ ಮತ್ತು ಒತ್ತಡದ ಪರಿಣಾಮ ಕೇಂದ್ರ ಸರಕಾರ ಸ್ಪಂದಿಸಿ ಆದೇಶ ಹೊರಡಿಸಿದೆ. ಕನಿಷ್ಠ ಆಮದು ಬೆಲೆಯನ್ನು ಹೆಚ್ಚಿಸುವ ಬಗ್ಗೆ ಕೇಂದ್ರ ಕೃಷಿ ಇಲಾಖೆಯ ರಾಜ್ಯ ಸಚಿವೆ ಶೋಭ ಕರಂದ್ಲಾಜೆಯವರು ಪುತ್ತೂರಿನಲ್ಲಿ ಕ್ಯಾಂಪ್ಕೊದ ಕೃಷಿಯಂತ್ರ ಮೇಳ ಉದ್ಘಾಟನಾ ಸಮಾರಂಭದಲ್ಲಿ ಘೋಷಣೆ ಮಾಡಿದ್ದರು ಎಂದು ಕ್ಯಾಂಪ್ಕೋ ನೆನಪಿಸಿದೆ.

ಅಡಿಕೆಯ ಕನಿಷ್ಠ ಆಮದು ಬೆಲೆಯ ಹೆಚ್ಚಳದಿಂದ ಅಡಿಕೆ ಮಾರುಕಟ್ಟೆ ಚೇತರಿಕೆಯಾಗಲಿದ್ದು ರೈತರು ಸುಳ್ಳು ಸುದ್ಧಿಗಳಿಗೆ ಕಿವಿಗೊಡದೆ ಅಗತ್ಯಕ್ಕೆ ತಕ್ಕಂತೆ ಮಾರಾಟ ಮಾಡಿ ಅಡಿಕೆ ಧಾರಣೆಯ ಸ್ಥಿರತೆಗೆ ಸಹಕಾರ ನೀಡುವಂತೆ ಕ್ಯಾಂಪ್ಕೊ ಆಡಳಿತ ಮಂಡಳಿ ಮನವಿ ಮಾಡುತ್ತದೆ ಎಂದು ಕಿಶೋರ್‌ ಕುಮಾರ್‌ ಕೊಡ್ಗಿ ಹೇಳಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

1 hour ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

17 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

1 day ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago