ಅಡಿಕೆ ಕೃಷಿಕರ ನೆರವಿಗೆ ಅನುದಾನ ಘೋಷಿಸಿದ ಬಜೆಟ್ | ಕ್ಯಾಂಪ್ಕೊ ಸ್ವಾಗತ |

February 17, 2023
10:01 PM

ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಅಡಿಕೆ ಬಗ್ಗೆ ಸಂಶೋಧನೆ ಹಾಗೂ ಅಭಿವೃದ್ಧಿಗೆ  ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನಕ್ಕೆ ಅನುದಾನ ಘೋಷಿಸಬೇಕೆಂಬ ಅಪೇಕ್ಷೆ  ಹೊಂದಿತ್ತು. ಆದರೆ ತೀರ್ಥಹಳ್ಳಿಯ ತೋಟಗಾರಿಕಾ ಇಲಾಖೆಗೆ ಹಳದಿ ಎಲೆರೋಗ ಮತ್ತು ಎಲೆಚುಕ್ಕಿರೋಗದ ಬಗ್ಗೆ ಸಂಶೋಧನೆ ನಡೆಸಲು 10 ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಿರುವುದನ್ನು  ಕ್ಯಾಂಪ್ಕೋ ಸ್ವಾಗತಿಸುತ್ತದೆ ಎಂದು  ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಹೇಳಿದ್ದಾರೆ.

ಕೃಷಿಯಲ್ಲಿ ತಂತ್ರಜ್ಞಾನ ಮತ್ತು ವೈಜ್ಞಾನಿಕ ಪದ್ಧತಿಗಳ ಅಳವಡಿಕೆಗೆ ಉತ್ತೇಜನ ಮತ್ತು ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಹಾಗೂ ರಫ್ತಿಗೆ ಒತ್ತು ನೀಡುವ ಮೂಲಕ ಸಮಗ್ರ ಕೃಷಿ ಪದ್ಧತಿಯ ಉತ್ತೇಜನಕ್ಕೆ ಬಜೆಟಲ್ಲಿ ಪ್ರೋತ್ಸಾಹ ನೀಡಲಾಗಿದೆ. 3 ಲಕ್ಷದಿಂದ 5 ಲಕ್ಷದವರೆಗೆ ಬಡ್ಡಿರಹಿತಸಾಲ, ಉತ್ತರ ಕರ್ನಾಟಕದ ರೈತರಿಗೆ ಸಹಾಯಧನ, ನೀರಾವರಿಗೆ ಅತೀ ಹೆಚ್ಚಿನ ಹಣ ಮಂಜೂರು, ಕೃಷಿ ಯಂತ್ರೋಪಕರಣಗಳ ಖರೀದಿಗೆ ಸಬ್ಸಿಡಿ ಮುಂತಾದ ಯೋಜನೆಗಳ ಮೂಲಕ ಕೃಷಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ  ಬಜೆಟಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ಕಿಶೋರ್‌ ಕುಮಾರ್‌ ಕೊಡ್ಗಿ ಹೇಳಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror