Advertisement
ಸುದ್ದಿಗಳು

ಕ್ಯಾಂಪ್ಕೋ ಚಾಕಲೇಟು ಕಾರ್ಖಾನೆಯ ಉದ್ಯೋಗಿಗಳ ರಿಕ್ರಿಯೇಷನ್ ಸೆಂಟರಿನಲ್ಲಿ ಮಹಿಳಾ ದಿನಾಚರಣೆ | ಸ್ವಾಸ್ಥ್ಯ ಎಂದರೆ ಆರೋಗ್ಯ – ಮಹಿಳಾ ಸ್ವಾಸ್ಥ್ಯಕ್ಕೆ ಆದ್ಯತೆ ಇರಲಿ |

Share

ಕ್ಯಾಂಪ್ಕೋ ಚಾಕಲೇಟು ಕಾರ್ಖಾನೆಯ ಉದ್ಯೋಗಿಗಳ ರಿಕ್ರಿಯೇಷನ್ ಸೆಂಟರಿನ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯನ್ನು ರಿಕ್ರಿಯೇಷನ್ ಸೆಂಟರಿನ ವಸತಿ ನಿಲಯದಲ್ಲಿ ಆಚರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಯೋಗ ಶಿಕ್ಷಕಿ ,ಬಿಜೆಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಶರಾವತಿ ರವಿ ನಾರಾಯಣ ಮಾತನಾಡಿ, ಸ್ವಾಸ್ಥ್ಯ ಎಂದರೆ ಆರೋಗ್ಯ, ವಿಶ್ವ ಸಂಸ್ಥೆಯ ವರ್ಲ್ಡ್ ಹೆಲ್ತ್ ಆರ್ಗನೈಸೇಷನ್ ಸ್ವಾಸ್ಥ್ಯ ಎಂದರೆ ದೈಹಿಕ, ಮಾನಸಿಕ, ಸಾಮಾಜಿಕ, ಆರ್ಥಿಕ ಮತ್ತು ಆಧ್ಯಾತ್ಮಿಕತೆ ಇದು ಎಲ್ಲಾ ರೀತಿಯಲ್ಲಿ ಚೆನ್ನಾಗಿದ್ದರೆ ಅದು ಸ್ವಾಸ್ಥ್ಯ ಎಂದು ಹೇಳುತ್ತದೆ. ಹೀಗಾಗಿ ಮಹಿಳಾ ಸ್ವಾಸ್ಥ್ಯಕ್ಕೆ ಆದ್ಯತೆ ಇರಲಿ ಎಂದರು.

ಮುಖ್ಯ ಅತಿಥಿಗಳಾಗಿ ಎಸ್. ಡಿ. ಪಿ ರೆಮೆಡಿಸ್ ಮತ್ತು ರಿಸರ್ಚ್ ಸೆಂಟರಿನ ವ್ಯವಸ್ಥಾನಾ ಪಾಲುದಾರರೂ, ವಿವೇಕಾನಂದ ವಿದ್ಯಾವರ್ಧಕ ಸಂಘದ ಸಂಘದ ಜತೆ ಕಾರ್ಯದರ್ಶಿ ರೂಪಲೇಖಾ ಪಾಣಾಜೆ ಉಪಸ್ಥಿತರಿದ್ದರು.  ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಿಕ್ರಿಯೇಷನ್ ಸೆಂಟರಿನ ಉಪಾಧ್ಯಕ್ಷರಾದ ಸುಲತಾ ಸತೀಶ್ ವಹಿಸಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಸುಲತಾ ಸತೀಶ್ ಮಾತನಾಡಿ ಸಿದ್ಧ ಉಡುಪು ಕಾರ್ಖಾನೆ ಒಂದರಲ್ಲಿ ಮಹಿಳೆಯರು, ಗಂಡಸರು ದುಡಿಯುತ್ತಿದ್ದ ಷ್ಟು ಸಮಯ ದುಡಿಯುತ್ತಿದ್ದರೂ,ಗಂಡಸರಿಗೆ ಸಿಗುವಷ್ಟು ವೇತನ ಮಹಿಳೆಯರಿಗೆ ಸಿಗುತ್ತಿರಲಿಲ್ಲ.ಇದಕ್ಕಾಗಿ ಮಹಿಳೆಯರು ಪ್ರತಿಭಟನೆಯನ್ನು ಮಾಡಿದರು ಜಗ್ಗದ ಆಡಳಿತ ಮಂಡಳಿ ಹಿಂಸೆಯನ್ನು ನೀಡಿತು, ಆದರೆ ಹೋರಾಟ ನಿಲ್ಲಲಿಲ್ಲ ಇದೆಲ್ಲದರ ಪರಿಣಾಮದಿಂದಾಗಿ 1975 ರ ಮಾರ್ಚ್ 8 ರಂದು ವಿಶ್ವಸಂಸ್ಥೆ ವಿಶ್ವ ಮಹಿಳಾ ದಿನವನ್ನಾಗಿ ಆಚರಿಸಲು ಪ್ರಾರಂಭಿಸಿತು ಎಂದರು.

ವಾಣಿ ಪ್ರಶಾಂತ್ ಭಟ್ ಮತ್ತು ಬಿಂದು ಪ್ರಶಾಂತ್ ಡಿ. ಎಸ್ ಪ್ರಾರ್ಥನೆಯನ್ನು ಹಾಡಿದರು. ಅತಿಥಿಗಳ ಪರಿಚಯವನ್ನು ಬಿಂದು ಪ್ರಶಾಂತ್ ಡಿ. ಎಸ್ ಮತ್ತು ಕವಿತಾ ತೀರ್ಥರಾಮ್ ಮಾಡಿದರು. ವಾಣಿ ಪ್ರಶಾಂತ್ ಭಟ್ ಧನ್ಯವಾದ ಸಮರ್ಪಿಸಿದರು, ಕಾರ್ಯಕ್ರಮದ ನಿರೂಪಣೆಯನ್ನು ಉಷಾ ಕಿರಣ್ ನೆರವೇರಿಸಿದರು.

ಮಹಿಳಾ ದಿನಾಚರಣೆಯ ಪ್ರಯುಕ್ತ ಮಹಿಳೆಯರಿಗೆ ಬೇಲ್ ಪುರಿ ತಯಾರಿ ಮತ್ತು ಪ್ರಸ್ತುತಿಯನ್ನು ಹಾಗೂ ಒನ್ ಮಿನಿಟ್ ಸ್ಪರ್ಧೆಯನ್ನು ಏರ್ಪಡಿಸಲಾಯಿತು.ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆಯನ್ನು ಶರಾವತಿ ರವಿ ನಾರಾಯಣ್ ಮತ್ತು ರೂಪಲೇಖಾ ಪಾಣಾಜೆ ಯವರು ಮಾಡಿದರು. ಕಾರ್ಯಕ್ರಮದಲ್ಲಿ ಕ್ಯಾಂಪ್ಕೋ ಉದ್ಯೋಗಿಗಳ ಕುಟುಂಬಸ್ಥರು ಮತ್ತು ರಿಕ್ರಿಯೇಷನ್ ಸೆಂಟರಿನ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

2 days ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

2 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

3 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago