Advertisement
MIRROR FOCUS

ಅಡಿಕೆ ಕಳ್ಳಸಾಗಾಣಿಕೆ ತಡೆಯಲು ಕ್ಯಾಂಪ್ಕೋ ಆಗ್ರಹ |

Share

ಈಚೆಗೆ ವಿದೇಶಿ ಅಡಿಕೆಯು ವಿವಿಧ ಮಾರ್ಗಗಳಲ್ಲಿ ಕಳ್ಳಸಾಗಾಣಿಕೆಯ ಮೂಲಕ ಭಾರತದೊಳಕ್ಕೆ ಬರುತ್ತಿದೆ. ಇದರಿಂದ ಸರ್ಕಾರಕ್ಕೂ ನಷ್ಟವಿದೆ ಹಾಗೂ ಅಡಿಕೆ ಬೆಳೆಗಾರರಿಗೂ ಸಂಕಷ್ಟ ಪರಿಸ್ಥಿತಿ ಇದೆ. ಇದಕ್ಕಾಗಿ ತಕ್ಷಣವೇ ಸರ್ಕಾರ ಅಡಿಕೆ ಆಮದು ತಡೆಯಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಒತ್ತಾಯಿಸಿದ್ದಾರೆ.ಮುಂದೆ ಓದಿ

ಕಿಶೋರ್‌ ಕುಮಾರ್‌ ಕೊಡ್ಗಿ

ಮಾಹಿತಿ ಪ್ರಕಾರ ಈಚೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಗೋ ಟರ್ಮಿನಲ್‌ ಮೂಲಕ ಅಡಿಕೆಯು ವಿವಿಧ ಕಡೆಗಳಿಂದ ಆಗಮನವಾಗಿ ಇಲ್ಲಿಂದ ಬೇರೆ ಬೇರೆ ಕಡೆಗೆ ರವಾನೆಯಾಗುತ್ತಿದೆ.ಅಡಿಕೆ ಬೆಳೆಯುವ ಮಲೆನಾಡು ಹಾಗೂ ಕರಾವಳಿ ಭಾಗಗಳಿಗೂ ಅಡಿಕೆ ರವಾನೆಯಾಗುತ್ತಿರುವುದು ಅಡಿಕೆ ಕಳ್ಳಸಾಗಾಣಿಕೆಯ ಕದಂಬ ಬಾಹು ಹರಡಿಕೊಂಡಿರುವುದರ ಬಗ್ಗೆ ಕ್ಯಾಂಪ್ಕೋ ಕಳವಳ ವ್ಯಕ್ತಪಡಿಸಿದೆ.ಈ ಮಾದರಿಯ ಕಳ್ಳಸಾಗಾಣಿಕೆಯನ್ನು ಸರ್ಕಾರಗಳು ತಡೆದರೆ, ಅಡಿಕೆ ಧಾರಣೆ ಸ್ಥಿರೀಕರಣ ಹಾಗೂ ಬೆಳೆಗಾರರ ಹಿತಕ್ಕಾಗಿ ಸದಾ ದುಡಿಯುತ್ತಿರುವ ಸಹಕಾರಿ ಸಂಸ್ಥೆಗಳಿಗೆ  ಮತ್ತು ಅಡಿಕೆ ಬೆಳೆಗಾರರಿಗೂ ನೆರವಾಗುತ್ತದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಹೇಳಿದ್ದಾರೆ.ಮುಂದೆ ಓದಿ

ಈಗಾಗಲೇ ಅಡಿಕೆ ಕಳ್ಳಸಾಗಾಣಿಕೆ ಬಗ್ಗೆ ಕ್ಯಾಂಪ್ಕೋ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಕ್ಕೂ ಕ್ಯಾಂಪ್ಕೋ ಪತ್ರದ ಮೂಲಕ ಅಡಿಕೆ ಕಳ್ಳಸಾಗಾಣಿಕೆ ತಡೆಯಲು ಪತ್ರದ ಮೂಲಕ ಒತ್ತಾಯಿಸಿದೆ.

Imported Arecanuts are entering India through various routes. Thus affecting farmers and Arecanut Market. Thus Campco President Kishore Kumar Kodgi urged the government to take immediate action.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ

ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"

1 hour ago

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ

ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…

10 hours ago

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?

ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…

11 hours ago

ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!

ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…

17 hours ago

ಅಡಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ಪರಿಹಾರ ತೀರಾ ಕಡಿಮೆ…! ಪ್ರಕೃತಿ ವಿಕೋಪದಲ್ಲಿ ರೈತರಿಗೆ ಅನ್ಯಾಯ?

ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್‌ಡಿಆರ್‌ಎಫ್ ಪರಿಹಾರ ಮೊತ್ತ…

18 hours ago

ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಲ್ಲಿದೆ ಗೊತ್ತಾ..?

ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…

20 hours ago