ಈಚೆಗೆ ವಿದೇಶಿ ಅಡಿಕೆಯು ವಿವಿಧ ಮಾರ್ಗಗಳಲ್ಲಿ ಕಳ್ಳಸಾಗಾಣಿಕೆಯ ಮೂಲಕ ಭಾರತದೊಳಕ್ಕೆ ಬರುತ್ತಿದೆ. ಇದರಿಂದ ಸರ್ಕಾರಕ್ಕೂ ನಷ್ಟವಿದೆ ಹಾಗೂ ಅಡಿಕೆ ಬೆಳೆಗಾರರಿಗೂ ಸಂಕಷ್ಟ ಪರಿಸ್ಥಿತಿ ಇದೆ. ಇದಕ್ಕಾಗಿ ತಕ್ಷಣವೇ ಸರ್ಕಾರ ಅಡಿಕೆ ಆಮದು ತಡೆಯಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಒತ್ತಾಯಿಸಿದ್ದಾರೆ.ಮುಂದೆ ಓದಿ
ಮಾಹಿತಿ ಪ್ರಕಾರ ಈಚೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಗೋ ಟರ್ಮಿನಲ್ ಮೂಲಕ ಅಡಿಕೆಯು ವಿವಿಧ ಕಡೆಗಳಿಂದ ಆಗಮನವಾಗಿ ಇಲ್ಲಿಂದ ಬೇರೆ ಬೇರೆ ಕಡೆಗೆ ರವಾನೆಯಾಗುತ್ತಿದೆ.ಅಡಿಕೆ ಬೆಳೆಯುವ ಮಲೆನಾಡು ಹಾಗೂ ಕರಾವಳಿ ಭಾಗಗಳಿಗೂ ಅಡಿಕೆ ರವಾನೆಯಾಗುತ್ತಿರುವುದು ಅಡಿಕೆ ಕಳ್ಳಸಾಗಾಣಿಕೆಯ ಕದಂಬ ಬಾಹು ಹರಡಿಕೊಂಡಿರುವುದರ ಬಗ್ಗೆ ಕ್ಯಾಂಪ್ಕೋ ಕಳವಳ ವ್ಯಕ್ತಪಡಿಸಿದೆ.ಈ ಮಾದರಿಯ ಕಳ್ಳಸಾಗಾಣಿಕೆಯನ್ನು ಸರ್ಕಾರಗಳು ತಡೆದರೆ, ಅಡಿಕೆ ಧಾರಣೆ ಸ್ಥಿರೀಕರಣ ಹಾಗೂ ಬೆಳೆಗಾರರ ಹಿತಕ್ಕಾಗಿ ಸದಾ ದುಡಿಯುತ್ತಿರುವ ಸಹಕಾರಿ ಸಂಸ್ಥೆಗಳಿಗೆ ಮತ್ತು ಅಡಿಕೆ ಬೆಳೆಗಾರರಿಗೂ ನೆರವಾಗುತ್ತದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಹೇಳಿದ್ದಾರೆ.ಮುಂದೆ ಓದಿ
ಈಗಾಗಲೇ ಅಡಿಕೆ ಕಳ್ಳಸಾಗಾಣಿಕೆ ಬಗ್ಗೆ ಕ್ಯಾಂಪ್ಕೋ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಕ್ಕೂ ಕ್ಯಾಂಪ್ಕೋ ಪತ್ರದ ಮೂಲಕ ಅಡಿಕೆ ಕಳ್ಳಸಾಗಾಣಿಕೆ ತಡೆಯಲು ಪತ್ರದ ಮೂಲಕ ಒತ್ತಾಯಿಸಿದೆ.
Imported Arecanuts are entering India through various routes. Thus affecting farmers and Arecanut Market. Thus Campco President Kishore Kumar Kodgi urged the government to take immediate action.
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…