Advertisement
ಸುದ್ದಿಗಳು

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

Share

ರೈತರ ಆರ್ಥಿಕಾಭಿವೃದ್ಧಿಗೆ ಬೆನ್ನೆಲುಬಾಗಿರುವ ಪ್ರತಿಷ್ಠಿತ ಕ್ಯಾಂಪ್ಕೊ ಸಂಸ್ಥೆ, ವಿಟ್ಲದಲ್ಲಿ ತನ್ನ ನೂತನ ಶಾಖಾ ಕಟ್ಟಡ ನಿರ್ಮಾಣಕ್ಕೆ ಸಜ್ಜಾಗಿದೆ. ಮಾರ್ಚ್ 27, ರಂದು ಬೆಳಿಗ್ಗೆ 9:30 ಗಂಟೆಗೆ ವಿಟ್ಲದ ಶ್ರೀ ಪಂಚಲಿಂಗೇಶ್ವರ ಸನ್ನಿಧಿ ಸಮೀಪ ಶಂಕುಸ್ಥಾಪನೆ ಕಾರ್ಯಕ್ರಮ ನಡೆಯಲಿದೆ.

ವಿಟ್ಲ ಶಾಖೆ 1986ರಲ್ಲಿ ಕೇವಲ 76 ಸೆಂಟ್ಸ್ ಜಾಗದಲ್ಲಿ (19,188 ಚದರ ಅಡಿ ವಿಸ್ತೀರ್ಣ) ಆರಂಭಗೊಂಡು, ಹಲವು ದಶಕಗಳಿಂದ ಸಾವಿರಾರು ರೈತರಿಗೆ ಸೇವೆ ನೀಡುತ್ತಿದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ವಾಹನ ದಟ್ಟಣೆ ಹಾಗೂ ಇಕ್ಕಟ್ಟಾದ ರಸ್ತೆಗಳಿಂದಾಗಿ ಶಾಖೆಯ ಕಾರ್ಯಾಚರಣೆ ಮತ್ತು ರೈತರಿಗೆ ಅನುಕೂಲತೆ ಕಡಿಮೆಯಾಗಿತ್ತು. ಈ ಸಮಸ್ಯೆಗಳಿಗೆ ಪರಿಹಾರವಾಗಿ, ಕ್ಯಾಂಪ್ಕೊ 2024ರಲ್ಲಿ ವಿಟ್ಲ ಕಸಬಾ ಗ್ರಾಮದಲ್ಲಿ 91 ಸೆಂಟ್ಸ್ ಹೊಸ ಜಾಗವನ್ನು ಖರೀದಿಸಿದೆ.

ಈ ಜಾಗದಲ್ಲಿ ಸುಮಾರು ₹12 ಕೋಟಿ ವೆಚ್ಚದಲ್ಲಿ 30,000 ಚದರ ಅಡಿ ವಿಸ್ತೀರ್ಣದ ಅತ್ಯಾಧುನಿಕ ‘ಕಚೇರಿ-ಗೋದಾಮು’ ಸಮುಚ್ಚಯವನ್ನು ನಿರ್ಮಿಸಲು ಯೋಜಿಸಲಾಗಿದೆ.

ಈ ಕಟ್ಟಡದಲ್ಲಿ ಸುಲಭ ಸಂಪರ್ಕ ರಸ್ತೆ, ವಿಶಾಲ ಪಾರ್ಕಿಂಗ್ ವ್ಯವಸ್ಥೆ, ವೇಗವಾದ ವಹಿವಾಟು ವ್ಯವಸ್ಥೆ, ರೈತ ಸ್ನೇಹಿ ಸೌಲಭ್ಯಗಳ ಮೂಲಕ ರೈತರಿಗೆ ಹೆಚ್ಚಿನ ಅನುಕೂಲ ಒದಗಲಿದೆ.

ಈ ಯೋಜನೆಯ ಸಿವಿಲ್ ಕಾಮಗಾರಿಯನ್ನು ವಿಟ್ಲದ ‘ಮೆಸರ್ಸ್ ಗಾನ್ವಿ ಇನ್ಫ್ರಾ ಪ್ರಾಜೆಕ್ಟ್ಸ್’ ಸಂಸ್ಥೆಗೆ ವಹಿಸಲಾಗಿದೆ. ಕಾಮಗಾರಿ ಆರಂಭದಿಂದ 18 ತಿಂಗಳೊಳಗೆ ಕಟ್ಟಡ ಪೂರ್ಣಗೊಳ್ಳುವ ನಿರೀಕ್ಷೆಯಿದೆ.

ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕೆ. ಪ್ರಭಾಕರ್ ಭಟ್ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ಅಶೋಕ್ ಕುಮಾರ್ ರೈ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.ನಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಯಾಂಪ್ಕೊ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ ವಹಿಸಲಿದ್ದಾರೆ. ಹಾಗೂ ಸಂಸ್ಥೆಯ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ವ್ಯವಸ್ಥಾಪಕ ನಿರ್ದೇಶಕರು ಹಾಗೂ ಹಲವು ಗಣ್ಯರು ಉಪಸ್ಥಿತರಿರಲಿದ್ದಾರೆ.

CAMPCO is constructing a new modern office-cum-godown building in Vittla with an investment of ₹12 crore. The foundation stone will be laid on March 27, 2026, aiming to improve infrastructure, ease logistics, and provide better services to arecanut and other crop farmers.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

13 hours ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

1 day ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

2 days ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

3 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago