Advertisement
ಸುದ್ದಿಗಳು

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

Share

ರೈತರ ಆರ್ಥಿಕಾಭಿವೃದ್ಧಿಗೆ ಬೆನ್ನೆಲುಬಾಗಿರುವ ಪ್ರತಿಷ್ಠಿತ ಕ್ಯಾಂಪ್ಕೊ ಸಂಸ್ಥೆ, ವಿಟ್ಲದಲ್ಲಿ ತನ್ನ ನೂತನ ಶಾಖಾ ಕಟ್ಟಡ ನಿರ್ಮಾಣಕ್ಕೆ ಸಜ್ಜಾಗಿದೆ. ಮಾರ್ಚ್ 27, ರಂದು ಬೆಳಿಗ್ಗೆ 9:30 ಗಂಟೆಗೆ ವಿಟ್ಲದ ಶ್ರೀ ಪಂಚಲಿಂಗೇಶ್ವರ ಸನ್ನಿಧಿ ಸಮೀಪ ಶಂಕುಸ್ಥಾಪನೆ ಕಾರ್ಯಕ್ರಮ ನಡೆಯಲಿದೆ.

ವಿಟ್ಲ ಶಾಖೆ 1986ರಲ್ಲಿ ಕೇವಲ 76 ಸೆಂಟ್ಸ್ ಜಾಗದಲ್ಲಿ (19,188 ಚದರ ಅಡಿ ವಿಸ್ತೀರ್ಣ) ಆರಂಭಗೊಂಡು, ಹಲವು ದಶಕಗಳಿಂದ ಸಾವಿರಾರು ರೈತರಿಗೆ ಸೇವೆ ನೀಡುತ್ತಿದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ವಾಹನ ದಟ್ಟಣೆ ಹಾಗೂ ಇಕ್ಕಟ್ಟಾದ ರಸ್ತೆಗಳಿಂದಾಗಿ ಶಾಖೆಯ ಕಾರ್ಯಾಚರಣೆ ಮತ್ತು ರೈತರಿಗೆ ಅನುಕೂಲತೆ ಕಡಿಮೆಯಾಗಿತ್ತು. ಈ ಸಮಸ್ಯೆಗಳಿಗೆ ಪರಿಹಾರವಾಗಿ, ಕ್ಯಾಂಪ್ಕೊ 2024ರಲ್ಲಿ ವಿಟ್ಲ ಕಸಬಾ ಗ್ರಾಮದಲ್ಲಿ 91 ಸೆಂಟ್ಸ್ ಹೊಸ ಜಾಗವನ್ನು ಖರೀದಿಸಿದೆ.

ಈ ಜಾಗದಲ್ಲಿ ಸುಮಾರು ₹12 ಕೋಟಿ ವೆಚ್ಚದಲ್ಲಿ 30,000 ಚದರ ಅಡಿ ವಿಸ್ತೀರ್ಣದ ಅತ್ಯಾಧುನಿಕ ‘ಕಚೇರಿ-ಗೋದಾಮು’ ಸಮುಚ್ಚಯವನ್ನು ನಿರ್ಮಿಸಲು ಯೋಜಿಸಲಾಗಿದೆ.

ಈ ಕಟ್ಟಡದಲ್ಲಿ ಸುಲಭ ಸಂಪರ್ಕ ರಸ್ತೆ, ವಿಶಾಲ ಪಾರ್ಕಿಂಗ್ ವ್ಯವಸ್ಥೆ, ವೇಗವಾದ ವಹಿವಾಟು ವ್ಯವಸ್ಥೆ, ರೈತ ಸ್ನೇಹಿ ಸೌಲಭ್ಯಗಳ ಮೂಲಕ ರೈತರಿಗೆ ಹೆಚ್ಚಿನ ಅನುಕೂಲ ಒದಗಲಿದೆ.

ಈ ಯೋಜನೆಯ ಸಿವಿಲ್ ಕಾಮಗಾರಿಯನ್ನು ವಿಟ್ಲದ ‘ಮೆಸರ್ಸ್ ಗಾನ್ವಿ ಇನ್ಫ್ರಾ ಪ್ರಾಜೆಕ್ಟ್ಸ್’ ಸಂಸ್ಥೆಗೆ ವಹಿಸಲಾಗಿದೆ. ಕಾಮಗಾರಿ ಆರಂಭದಿಂದ 18 ತಿಂಗಳೊಳಗೆ ಕಟ್ಟಡ ಪೂರ್ಣಗೊಳ್ಳುವ ನಿರೀಕ್ಷೆಯಿದೆ.

ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕೆ. ಪ್ರಭಾಕರ್ ಭಟ್ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ಅಶೋಕ್ ಕುಮಾರ್ ರೈ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.ನಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಯಾಂಪ್ಕೊ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ ವಹಿಸಲಿದ್ದಾರೆ. ಹಾಗೂ ಸಂಸ್ಥೆಯ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ವ್ಯವಸ್ಥಾಪಕ ನಿರ್ದೇಶಕರು ಹಾಗೂ ಹಲವು ಗಣ್ಯರು ಉಪಸ್ಥಿತರಿರಲಿದ್ದಾರೆ.

CAMPCO is constructing a new modern office-cum-godown building in Vittla with an investment of ₹12 crore. The foundation stone will be laid on March 27, 2026, aiming to improve infrastructure, ease logistics, and provide better services to arecanut and other crop farmers.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

2 days ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

2 days ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

3 days ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

4 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

4 days ago