ಪುತ್ತೂರಿನ ಮರೀಲ್ನಲ್ಲಿರುವ ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆ ಉದ್ಯೋಗಿಗಳ ರಿಕ್ರಿಯೇಷನ್ ಸೆಂಟರ್ ವತಿಯಿಂದ ವಿಶ್ವ ಯೋಗ ದಿನದ ಅಂಗವಾಗಿ ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆ ವಸತಿ ನಿಲಯದಲ್ಲಿ ಯೋಗ ಕಾರ್ಯಕ್ರಮ ಹಾಗೂ ಸ್ವಚ್ಛತಾ ಅಭಿಯಾನವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ವಿದ್ಯಾಭಾರತಿ ದಕ್ಷಿಣ ಜಿಲ್ಲಾ ಯೋಗ ಶಿಕ್ಷಣ ಸಂಯೋಜಕ, “ದಿಶಾ” ಯೋಗ ಕೇಂದ್ರದ ಮುಖ್ಯಸ್ಥರು ಹಾಗೂ ರಾಷ್ಟ್ರೀಯ ಸೇವಾಭಾರತಿ ಮಂಗಳೂರು ವಿಭಾಗದ ಸಂಘಟನಾ ಕಾರ್ಯದರ್ಶಿಗಳಾದ ಚಂದ್ರಶೇಖರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದರು.
ವೇದಿಕೆಯಲ್ಲಿ ರಿಕ್ರಿಯೇಷನ್ ಸೆಂಟರಿನ ಮಾಜಿ ಅಧ್ಯಕ್ಷರಾದ ಪ್ರಶಾಂತ್ ಭಟ್, ಪ್ರಶಾಂತ್ ಡಿ.ಎಸ್., ವೀಣಾ ಕುಮಾರಿ ಹಾಗೂ ಪ್ರಸ್ತುತ ಅಧ್ಯಕ್ಷರಾದ ಈಶ್ವರ್ ನಾಯ್ಕ್ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಚಂದ್ರಶೇಖರ್, ಪ್ರಶಾಂತ್ ಭಟ್, ಪ್ರಶಾಂತ್ ಡಿ.ಎಸ್., ವೀಣಾ ಕುಮಾರಿ ಹಾಗೂ ವೃದ್ಧಿ ರೈ ಅವರು ಜಂಟಿಯಾಗಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ರಿಕ್ರಿಯೇಷನ್ ಸೆಂಟರಿನ ಉಪಾಧ್ಯಕ್ಷೆ ಸುಲತಾ ಸತೀಶ್ ಸ್ವಾಗತ ಭಾಷಣ ಮಾಡಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಚಂದ್ರಶೇಖರ್ ಅವರು, ಯೋಗದ ಮಹತ್ವ, ದೈನಂದಿನ ಜೀವನದಲ್ಲಿ ಯೋಗದ ಅಳವಡಿಕೆ ಹಾಗೂ ಅದರ ಆರೋಗ್ಯಕರ ಪ್ರಯೋಜನಗಳ ಕುರಿತು ಮಾಹಿತಿ ನೀಡಿದರು. ಬಳಿಕ ಯೋಗಾಭ್ಯಾಸದ ಪ್ರಾತ್ಯಕ್ಷಿಕೆಯನ್ನು ನಡೆಸಿಕೊಟ್ಟರು.
ಲೋಹಿತ್, ರೂಪೇಶ್, ರಂಗಸ್ವಾಮಿ, ಪಾವನ ಜಗದೀಶ್ ಹಾಗೂ ಪುರುಷೋತ್ತಮ ಅವರು ಮುಖ್ಯ ಅತಿಥಿಗಳನ್ನು ಹೂಗುಚ್ಛ ನೀಡಿ ಗೌರವಿಸಿದರು.
ಯೋಗ ಕಾರ್ಯಕ್ರಮದ ಬಳಿಕ ವಸತಿ ನಿಲಯದ ಸುತ್ತಮುತ್ತ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರಿಗೂ ಪ್ರಮಾಣಪತ್ರ ವಿತರಿಸಲಾಯಿತು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಶಾನ್ವಿ, ಆರ್ವಿ ಹಾಗೂ ಲಿಖಿತ ಪ್ರಾರ್ಥನಾ ಗೀತೆ ಹಾಡಿದರು. ರಮೇಶ್ ನೆಗಳಗುಳಿ ಧನ್ಯವಾದ ಸಮರ್ಪಿಸಿದರು. ವರುಣ್ ಕಾರ್ಯಕ್ರಮ ನಿರೂಪಿಸಿದರು.
ಇದೇ ವೇಳೆ, ಇತ್ತೀಚೆಗೆ ದೈವಾಧೀನರಾದ ಕ್ಯಾಂಪ್ಕೊ ಸಹೋದ್ಯೋಗಿ ತೀರ್ಥಕುಮಾರ್ ಅವರ ಆತ್ಮಕ್ಕೆ ಚಿರಶಾಂತಿ ಕೋರಿ ಒಂದು ನಿಮಿಷದ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.
The Recreation Centre of CAMPCO Chocolate Factory employees at Maril, Puttur, organized a Yoga Day program and cleanliness drive at the factory residential quarters. Yoga expert Chandrashekhar conducted a session on the benefits of yoga, and certificates were distributed to participants. A minute’s silence was also observed in memory of late CAMPCO employee Theerthakumar.
ಕರ್ನಾಟಕದಲ್ಲಿ ಮಳೆ ಕೊರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೂರ್ಣಾವಧಿ ಕೃಷಿ ಸಚಿವರನ್ನು ತಕ್ಷಣ ನೇಮಿಸಬೇಕು…
ದೇಶದಲ್ಲಿ ಮುಂಗಾರು ಮಳೆ ಕೊರತೆ 40%ಕ್ಕೆ ಏರಿಕೆಯಾಗಿದ್ದು, ಪ್ರಮುಖ ಕೃಷಿ ಪ್ರದೇಶಗಳಲ್ಲಿ ಮೋಡಗಳ…
ಕೇರಳ ಸರ್ಕಾರ ರಬ್ಬರ್ ಬೆಂಬಲ ಬೆಲೆಯನ್ನು ₹200ರಿಂದ ₹250ಕ್ಕೆ ಹೆಚ್ಚಿಸಿದೆ. ಮಾರುಕಟ್ಟೆ ಬೆಲೆ…
ಮೂರು ವರ್ಷಗಳಲ್ಲಿ ದೇಶದ ಅರಣ್ಯ ಪ್ರದೇಶಗಳಲ್ಲಿ 28 ಲಕ್ಷಕ್ಕೂ ಹೆಚ್ಚು ಮರಗಳನ್ನು ಕಡಿಯಲು…
ಜೂನ್ 30ರೊಳಗೆ LPG e-KYC ಪೂರ್ಣಗೊಳಿಸುವಂತೆ ಗ್ರಾಹಕರಿಗೆ ಸೂಚನೆ ನೀಡಲಾಗಿದೆ. e-KYC ಬಾಕಿ…
ಮಹಾರಾಷ್ಟ್ರದಲ್ಲಿ ಅಡಿಕೆ ಸಾಗಾಟದ ವಿರುದ್ಧ ಕಠಿಣ ಕ್ರಮಗಳ ಆತಂಕದ ಹಿನ್ನೆಲೆಯಲ್ಲಿ ಕರ್ನಾಟಕ ಅಡಿಕೆ…