ಸುದ್ದಿಗಳು

1848 ಕೋಟಿ ರೂ. ವಹಿವಾಟನ್ನು ದಾಖಲಿಸಿದ ರೈತರ ಸಂಸ್ಥೆ ಕ್ಯಾಂಪ್ಕೋ | 32.10 ಕೋಟಿ ರೂ ಲಾಭ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಡಿಕೆ ಬೆಳೆಗಾರರ ಸಹಕಾರಿ ಸಂಸ್ಥೆ ಕ್ಯಾಂಪ್ಕೋ ರೂ.1848 ಕೋಟಿಗಳ ಬೃಹತ್ ವಹಿವಾಟನ್ನು ದಾಖಲಿಸಿ  ಈ ವರೆಗೆ ಒಟ್ಟು 32.10 ಕೋಟಿ ರೂ ಲಾಭ ಗಳಿಸಿದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್‌.ಆರ್ ಸತೀಶ್ಚದ್ರ  ತಿಳಿಸಿದರು.

Advertisement
Advertisement

ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಹಕಾರಿ ಸಂಸ್ಥೆಯು 1,430.43 ಕೋಟಿ ರೂಪಾಯಿ ಮೌಲ್ಯದ 48,294.93 ಮೆ.ಟನ್ ಅಡಿಕೆಯನ್ನು ಖರೀದಿಸಿದೆ. ಇದರಲ್ಲಿ 793.56 ಕೋಟಿ ರೂಪಾಯಿ ಮೌಲ್ಯದ 23,427.93 ಮೆ.ಟನ್ ಕೆಂಪಡಿಕೆ ಮತ್ತು 636.87 ಕೋಟಿ ರೂಪಾಯಿ ಮೌಲ್ಯದ 24,867.00 ಮೆ.ಟನ್ ಬಿಳಿ ಅಡಿಕೆ ಒಳಗೊಂಡಿರುತ್ತದೆ. 1,535.38 ಕೋಟಿ ರೂಪಾಯಿಗಳ ಮೌಲ್ಯದ 51,335.51 ಮೆ.ಟನ್ ಅಡಿಕೆಯನ್ನು ಮಾರಾಟ ಮಾಡಿದೆ. ಇವುಗಳಲ್ಲಿ 844.35 ಲಕ್ಷ ರೂಪಾಯಿ ಮೌಲ್ಯದ 25,163.66 ಮೆ.ಟನ್ ಕೆಂಪಡಿಕೆ ಮತ್ತು 691.03 ಕೋಟಿ ರೂಪಾಯಿ ಮೌಲ್ಯದ 26,171.85 ಮೆ.ಟನ್ ಬಿಳಿ ಅಡಿಕೆ ಒಳಗೊಂಡಿರುತ್ತದೆ. ಒಟ್ಟು ರೂ.1848 ಕೋಟಿಗಳ ಬೃಹತ್ ವಹಿವಾಟನ್ನು ಸಂಸ್ಥೆಯು ದಾಖಲಿಸಿದೆ ಎಂದರು.

ಈಗ ಕ್ಯಾಂಪ್ಕೋದ ಉತ್ಪನ್ನಗಳು ಈಗ ಇ-ಕಾಮರ್ಸ್‌ ತಾಣ ಅಮೆಜಾನ್‌ ನಲ್ಲೂ ಲಭ್ಯವಾಗುತ್ತಿವೆ. ವಿಶೇಷವಾಗಿ ಕ್ಯಾಂಪ್ಕೋದ ಚಾಕಲೇಟ್‌ ಪೇಯ ವಿನ್ನರ್‌ಗೆ ಅಲ್ಲಿ ಬಹಳಷ್ಟು ಬೇಡಿಕೆ ಬರುತ್ತಿದೆ. ತಿಂಗಳಿಗೆ 150 ಟನ್‌ಗಳಷ್ಟು ‘ವಿನ್ನರ್’ ಪೇಯ ವಿದೇಶಗಳಿಗೆ ರಫ್ತಾಗುತ್ತಿದೆ ಎಂದು ಅವರು ತಿಳಿಸಿದರು. ಶೀಘ್ರವೇ ಉತ್ಕೃಷ್ಟ ಗುಣಮಟ್ಟದ ಅಡಿಕೆ ಮತ್ತು ಕಾಳು ಮೆಣಸು ಕೂಡ ಕ್ಯಾಂಪ್ಕೋ ವತಿಯಿಂದ  ಅಮೆಜಾನ್‌ನಲ್ಲಿ ಲಭ್ಯವಾಗಲಿದೆ ಎಂದು ಸತೀಶ್ಚಂದ್ರ ಹೇಳಿದರು.

ಅಡಕೆ ಬೆಳೆಗಾರರ ನೆರವಿಗೆ ಕ್ಯಾಂಪ್ಕೋ ಸದಾ ಧಾವಿಸುತ್ತಿದ್ದು, ಸಾಂಕ್ರಾಮಿಕದ ಅವಧಿಯಲ್ಲೂ ಅಡಿಕೆ ಮಾರುಕಟ್ಟೆ ಕುಸಿಯದಂತೆ ನೋಡಿಕೊಂಡಿದೆ. ಅಲ್ಲದೆ ಅಡಿಕೆ ಬೆಳೆಗಾರರಿಗೆ ಅತಿ ಹೆಚ್ಚಿನ ಪ್ರತಿಫಲವನ್ನು ನೀಡುತ್ತಿದೆ. ಪ್ರಸ್ತುತ ಅಡಿಕೆಯ ಬೆಲೆ ಕೆ.ಜಿಗೆ 400 ರೂ ಗಡಿ ದಾಟಿದೆ. ಅಲ್ಲದೆ ಕೃಷಿಕರ ಮನೆ ಬಾಗಿಲಲ್ಲೇ ಅಡಿಕೆ ಖರೀದಿಗಾಗಿ ‘ಕ್ಯಾಂಪ್ಕೋ ಆನ್ ವೀಲ್‌’ ಸೌಲಭ್ಯ ಜಾರಿಗೊಳಿಸಲಾಗುತ್ತಿದೆ. ಈಗಾಗಲೇ ಪುತ್ತೂರು ತಾಲೂಕಿನಲ್ಲಿ ಪ್ರಾಯೋಗಿಕವಾಗಿ ಚಾಲ್ತಿಯಲ್ಲಿದ್ದು, 5,000 ಕ್ವಿಂಟಾಲ್ ಅಡಿಕೆಯನ್ನು ಈ ಮೂಲಕ ಖರೀದಿಸಲಾಗಿದೆ. ಈ ವ್ಯವಸ್ಥೆಯನ್ನು ಜನವರಿ-ಫೆಬ್ರವರಿ ವೇಳೆಗೆ ಜಿಲ್ಲೆಯ ಉಳಿದ ಕಡೆಗಳಿಗೂ ವಿಸ್ತರಿಸಲಾಗುತ್ತದೆ ಎಂದು ಕ್ಯಾಂಪ್ಕೋ ಅಧ್ಯಕ್ಷರು ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಕ್ಯಾಂಪ್ಕೋ ಉಪಾಧ್ಯಕ್ಷ ಶಂಕರನಾರಾಯಣ ಭಟ್‌ ಖಂಡಿಗೆ, ಪ್ರಭಾರ ವ್ಯವಸ್ಥಾಪಕ ನಿರ್ದೇಶಕ ಎಚ್.ಎಂ. ಕೃಷ್ಣ ಕುಮಾರ್ ಉಪಸ್ಥಿತರಿದ್ದರು.

Advertisement

ಸಂಸ್ಥೆಯು 19.70 ಕೋಟಿ ರೂ. ಮೌಲ್ಯದ 3,534.59 ಮೆ.ಟನ್ ಕೊಕ್ಕೋ ಹಸಿಬೀಜವನ್ನು ಮತ್ತು 71.69 ಕೋಟಿ ರೂ. ಮೌಲ್ಯದ 3,441.36 ಮೆ.ಟನ್ ಒಣಬೀಜವನ್ನು ಖರೀದಿಸಿದೆ. ಈ ಒಣಬೀಜ ಖರೀದಿಯಲ್ಲಿ, ಕಾರ್ಖಾನೆಯಲ್ಲಿ ನೇರವಾಗಿ ಖರೀದಿಸಿದ ರೂ.46.14 ಕೋಟಿ ಮೌಲ್ಯದ 1,995.84 ಮೆ.ಟನ್ ಒಣಬೀಜ ಸಹ ಸೇರಿರುತ್ತದೆ. ಒಟ್ಟು 3,512.42 ಮೆ.ಟನ್ ಒಣಬೀಜವನ್ನು ಕಾರ್ಖಾನೆಯಲ್ಲಿ ಬಳಸಲಾಗಿದೆ.  ಚಾಕಲೇಟ್ ಕಾರ್ಖಾನೆಯ ಒಟ್ಟು ಉತ್ಪಾದನೆ 15,956.06 ಮೆ.ಟನ್‍ಗೆ ಮುಟ್ಟಿರುತ್ತದೆ ಮತ್ತು ಅದರಲ್ಲಿ 11,652.91 ಮೆ.ಟನ್ ಕ್ಯಾಂಪ್ಕೋ ಬ್ರಾಂಡಿನದ್ದೇ ಚಾಕಲೇಟ್ ಉತ್ಪಾದನೆಯಾಗಿರುತ್ತದೆ. ಉಳಿದ 4,303.15 ಮೆ.ಟನ್ ಚಾಕಲೇಟ್ ಜಾಬ್ ವರ್ಕ್ ವ್ಯವಸ್ಥೆಯಲ್ಲಿ ಉತ್ಪಾದಿಸಲಾಗಿದೆ. ನಮ್ಮ ಚಾಕಲೇಟ್ ಮಾರಾಟ ಮತ್ತು ಇತರ ಉತ್ಪನ್ನಗಳ ಮಾರಾಟ ರೂ.220.59 ಕೋಟಿ. ಇದರಲ್ಲಿ ರೂ.44.43 ಕೋಟಿ ಮೌಲ್ಯದ ಚಾಕಲೇಟ್ ಸಿದ್ಧ ಉತ್ಪನ್ನಗಳು ಮತ್ತು ರೂ.152.20 ಕೋಟಿ ಮೌಲ್ಯದ ಕೊಕ್ಕೋ ಕೈಗಾರಿಕ ಉತ್ಪನ್ನಗಳು, ರೂ.22.81 ಕೋಟಿ ಮೌಲ್ಯದ ರಫ್ತು ಮಾರಾಟ ಮತ್ತು ರೂ.1.15 ಕೋಟಿ ಮೌಲ್ಯದ ಇತರ ಉತ್ಪನ್ನಗಳು ಒಳಗೊಂಡಿರುತ್ತದೆ. 10.30 ಕೋಟಿ ರೂ.ಗಳ ಸಂಸ್ಕರಣ ಮೊತ್ತವನ್ನು ಜಾಬ್ ವರ್ಕ್ ಮೂಲಕ ಗಳಿಸುವಲ್ಲಿ ಯಶಸ್ವಿಯಾಗಿದೆ ಎಂದರು.

ಪ್ರಸಕ್ತ ಸಾಲಿನಲ್ಲಿ ತಮ್ಮ ಸಹಕಾರಿ ಸಂಸ್ಥೆಯು 23.37  ಕೋಟಿ ರೂ. ಮೌಲ್ಯದ 1822.95 ಮೆ.ಟನ್ ರಬ್ಬರನ್ನು ಖರೀದಿಸಿರುತ್ತದೆ ಮತ್ತು 22 ಕೋಟಿ ರೂ ಮೌಲ್ಯದ 1,674.42 ಮೆ.ಟನ್ ರಬ್ಬರನ್ನು ಮಾರಾಟ ಮಾಡಿರುತ್ತದೆ.

ಪ್ರಸಕ್ತ ಸಾಲಿನಲ್ಲಿ ತಮ್ಮ ಸಹಕಾರಿ ಸಂಸ್ಥೆಯು 37.77 ಕೋಟಿ ರೂ.  ಮೌಲ್ಯದ 1164.46 ಮೆ.ಟನ್ ಕಾಳುಮೆಣಸನ್ನು ಖರೀದಿಸಿರುತ್ತದೆ ಮತ್ತು 28.07 ಕೋಟಿ ರೂ. ಮೌಲ್ಯದ 836.41 ಮೆ.ಟನ್ ಕಾಳುಮೆಣಸನ್ನು ಮಾರಾಟ ಮಾಡಿರುತ್ತದೆ.

ಭಾರತೀಯ ಆಹಾರ ಸುರಕ್ಷೆ ಮತ್ತು ಗುಣಮಟ್ಟ ಪ್ರಾಧಿಕಾರವು (ಎಫ್.ಎಸ್.ಎಸ್.ಎ.ಐ.) ಕೆಂಪಡಿಕೆಯ ತೇವಾಂಶದ ಮಟ್ಟವನ್ನು ಗರಿಷ್ಠ 7% ಆಗಿ ನಿಗದಿಪಡಿಸಿದ್ದು, ಸಾಮಾನ್ಯವಾಗಿ 40-45 ದಿನಗಳ ಬಿಸಿಲಿನಲ್ಲಿ ಒಣಗಿದ ಅಡಿಕೆಯ ತೇವಾಂಶವು 7% ಗಿಂತ ಹೆಚ್ಚಿರುತ್ತದೆ. ಈ ಬಗ್ಗೆ ಆಹಾರ ಸುರಕ್ಷೆ ಮತ್ತು ಗುಣಮಟ್ಟ ಮಾನದಂಡಗಳ ತಿದ್ದುಪಡಿಗಾಗಿ ಪ್ರಸ್ತಾಪವೊಂದನ್ನು ಪ್ರಾಧಿಕಾರಕ್ಕೆ ಸಲ್ಲಿಸುವ ಪ್ರಕ್ರಿಯೆಯಲ್ಲಿ ಸಂಸ್ಥೆಯು ಈಗಾಗಲೇ ತೊಡಗಿಕೊಂಡಿದೆ. ಈ ಹಿನ್ನೆಲೆಯಲ್ಲಿ ಸಿ.ಪಿ.ಸಿ.ಆರ್.ಐ., ಡಿ.ಎ.ಎಸ್.ಡಿ., ಎಫ್.ಎ.ಓ. ಸಲಹೆಗಾರರು, ವಿಶ್ವವಿದ್ಯಾಲಯಗಳ ಸಂಶೋಧಕರುಗಳು, ಅಡಿಕೆಗೆ ಸಂಬಂಧಪಟ್ಟ ಸಹಕಾರ ಸಂಸ್ಥೆಗಳ ಪ್ರತಿನಿಧಿಗಳು ಮತ್ತು ಅಡಿಕೆ ಬೆಳೆಗಾರರ ಸಭೆ ನಡೆಸಲಾಗಿದ್ದು, ಸಿ.ಪಿ.ಸಿ.ಆರ್.ಐ.ನಲ್ಲಿ ಅಡಿಕೆಯ ತೇವಾಂಶದ ಮಟ್ಟ ಮತ್ತು ವಾಟರ್ ಆಕ್ಟಿವಿಟಿಗಳ ಬಗ್ಗೆ ವಿಶ್ಲೇಷಣೆ ನಡೆಸಿದ ನಂತರ ಸೂಕ್ತ ತಿದ್ದುಪಡಿಗಳನ್ನು ಪ್ರಾಧಿಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ಸತೀಶ್ಚಂದ್ರ ವಿವರಿಸಿದರು.

 

Advertisement

 

 

 

 

 

Advertisement

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪ್ರೋಟಾನ್ ಥೆರಪಿ ಮೂಲಕ ಕ್ಯಾನ್ಸರ್ ಗೆ ಚಿಕಿತ್ಸೆ | ಕಿದ್ವಾಯಿ ಆಸ್ಪತ್ರೆಯಲ್ಲಿ ಸೌಲಭ್ಯ ಜಾರಿಗೆ ಪ್ರಸ್ತಾವನೆ

ಅತ್ಯಾಧುನಿಕವಾದ ಪ್ರೋಟಾನ್ ರೇಡಿಯೋ ಥೆರಪಿ ಮೂಲಕ ಕ್ಯಾನ್ಸರ್ ಶುಶ್ರೂಷೆಗೆ ಅಗತ್ಯ ಆರ್ಥಿಕ ನೆರವು…

7 hours ago

ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರ  | ರಾಜ್ಯದ ವಿವಿದೆಡೆ ಮಳೆ

ರಾಜ್ಯದಲ್ಲಿ ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರವಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಸಕ್ರಿಯವಾಗಿದ್ದು, ಕರಾವಳಿಯಲ್ಲಿ…

7 hours ago

ಹಾವೇರಿ ಜಿಲ್ಲೆಯಲ್ಲಿ 441 ಸಾಕ್ಷರತಾ ಕಲಿಕಾ ಕೇಂದ್ರ ಸ್ಥಾಪನೆ

ಹಾವೇರಿ ಜಿಲ್ಲೆಯಲ್ಲಿರುವ ಅನಕ್ಷರಸ್ಥರನ್ನು ಅಕ್ಷರಸ್ಥರನ್ನಾಗಿ ಮಾಡಲು ನಿರಂತರವಾಗಿ ಪ್ರಯತ್ನಿಸಲಾಗುತ್ತಿದ್ದು, ಸಾಕ್ಷರತಾ ಕಾರ್ಯಕ್ರಮದಡಿ ಜಿಲ್ಲೆಯ…

7 hours ago

ಹವಾಮಾನ ವರದಿ | 09-06-2025 | ಜೂನ್ 10 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ | ಮುಂದಿನ 10 ದಿನಗಳವರೆಗೂ ಉತ್ತಮ ಮಳೆ ಸಾಧ್ಯತೆ|

ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳೀಯು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯಲ್ಲೂ ಸಣ್ಣ…

17 hours ago

ಅಡಿಕೆಯ ಮೌಲ್ಯವರ್ಧಿತ ಉತ್ಪನ್ನಗಳು

ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಒಟ್ಟು ಅಡಿಕೆಯ ಪ್ರಮಾಣ ಸುಮಾರು ಹದಿನಾರು ಲಕ್ಷ ಟನ್,…

18 hours ago

ವಿಶ್ವದ ಅತೀ ಎತ್ತರದ ಚೆನಾಬ್ ರೈಲ್ವೆ ಸೇತುವೆ ನಿರ್ಮಾಣ | ಬೆಂಗಳೂರಿನ ಜಿ.ಮಾಧವಿ ಲತಾ ಪ್ರಮುಖ ಪಾತ್ರ | ಭೂತಾಂತ್ರಿಕ ಸಲಹೆಗಾರರಾಗಿ 17 ವರ್ಷಗಳ ಕಾಲ ಕೊಡುಗೆ

1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು "ಇತ್ತೀಚಿನ ಇತಿಹಾಸದಲ್ಲಿ…

20 hours ago