Advertisement
ಸುದ್ದಿಗಳು

ಕೃಷಿಕರ ಸಂಸ್ಥೆ ಕ್ಯಾಂಪ್ಕೊ ವತಿಯಿಂದ ರಾಷ್ಟ್ರೀಯ ರಕ್ಷಣಾ ನಿಧಿಗೆ 5 ಕೋಟಿ ರೂಪಾಯಿ ದೇಣಿಗೆ

Share

ಪೆಹಲ್ಗಾಮ್ ಭಯೋತ್ಪಾದಕರ ವಿರುದ್ಧ ಪ್ರಧಾನಿ ನರೇಂದ್ರಮೋದಿಯವರು ತೆಗೆದುಕೊಂಡಿರುವ ಕಠಿಣ ಕ್ರಮವನ್ನು ಸಂಪೂರ್ಣ ಬೆಂಬಲಿಸುವುದಾಗಿ ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್‌  ಕೊಡಿಯವರು ತಿಳಿಸಿದ್ದಾರೆ.

ಪ್ರಸ್ತುತ ಸಂದಿಗ್ಥ ಪರಿಸ್ಥಿತಿಯಲ್ಲಿ ದೇಶದ ಗಡಿ ರಕ್ಷಣೆಗಾಗಿ ಹೋರಾಡುತ್ತಿರುವ ಯೋಧರಿಗೆ ನೆರವಾಗಲು ಕ್ಯಾಂಪ್ಕೊ ರಾಷ್ಟ್ರೀಯ ರಕ್ಷಣಾನಿಧಿಗೆ  5.00 ಕೋಟಿ (ಐದುಕೋಟಿರೂಪಾಯಿ) ಕೊಡುಗೆ ನೀಡುವ ಮೂಲಕ ರಾಷ್ಟ್ರದ ಹಿತ ಕಾಪಾಡುವಲ್ಲಿ ತನ್ನ ಬದ್ಧತೆಯನ್ನು ತೋರಿಸಿದೆ.

“ಕ್ಯಾಂಪ್ಕೋ ಯಾವಾಗಲೂ ರಾಷ್ಟ್ರೀಯ ಹಿತ ಮತ್ತು ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯುವಲ್ಲಿ ಮುಂಚೂಣಿಯಲ್ಲಿರುವ ರೈತರ ಸಹಕಾರಿ ಸಂಸ್ಥೆಯಾಗಿದೆ. ಈ ಹಿಂದೆಯೂ, ನೈಸರ್ಗಿಕ ವಿಕೋಪಗಳು ಮತ್ತು ರಾಷ್ಟ್ರೀಯ ತುರ್ತುಪರಿಸ್ಥಿತಿಗಳ ಸಮಯದಲ್ಲಿ ನಾವು ಪ್ರಧಾನಮಂತ್ರಿಗಳ ಪರಿಹಾರ ನಿಧಿಗೆ ಆರ್ಥಿಕ ಬೆಂಬಲವನ್ನು ನೀಡಿದ್ದೇವೆ. ಈ ನಿರ್ಣಾಯಕ ಹಂತದಲ್ಲಿ, ನಮ್ಮ ಸಶಸ್ತ್ರ ಪಡೆಗಳು ಭಯೋತ್ಪಾದನೆ ಮತ್ತು ಬಾಹ್ಯಬೆದರಿಕೆಗಳ ವಿರುದ್ಧ ಧೈರ್ಯದಿಂದ ದೇಶವನ್ನು ರಕ್ಷಿಸುತ್ತಿರುವಾಗ,  ಅವರೊಂದಿಗೆ ನಿಲ್ಲುವುದು ನಮ್ಮ ನೈತಿಕ ಕರ್ತವ್ಯ. ಕ್ಯಾಂಪ್ಕೋ ಮತ್ತು ನಾವು ಪ್ರತಿನಿಧಿಸುವ ಇಡೀ ರೈತ ಸಮುದಾಯದ ಪರವಾಗಿ, ರಾಷ್ಟ್ರೀಯ ರಕ್ಷಣಾನಿಧಿಗೆ 5 ಕೋಟಿ ಕೊಡುಗೆ ನೀಡಲು ನಾವು ಹೆಮ್ಮೆಪಡುತ್ತೇವೆ.” ಎಂದು ಕ್ಯಾಂಪ್ಕೊಅಧ್ಯಕ್ಷರು ತಿಳಿಸಿದ್ದಾರೆ.

ಭಾರತ ಸರ್ಕಾರದಿಂದ  ನಿರ್ವಹಿಸಲ್ಪಡುವ ರಾಷ್ಟ್ರೀಯ ರಕ್ಷಣಾ ನಿಧಿಯು ಸಶಸ್ತ್ರಪಡೆಗಳು ಮತ್ತು ಪ್ಯಾರಾ-ಮಿಲಿಟರಿ ಸಿಬ್ಬಂದಿ ಹಾಗೂ ಅವರ ಅವಲಂಬಿತರ ಕಲ್ಯಾಣಕ್ಕಾಗಿ ಸಮರ್ಪಿತವಾಗಿದೆ. ಕ್ಯಾಂಪ್ಕೊ ದೇಣಿಗೆಯನ್ನು ಬ್ಯಾಂಕ್ ಮೂಲಕ ರಾಷ್ಟ್ರೀಯ ರಕ್ಷಣಾನಿ ಧಿಗೆ ನೀಡಿದೆ.

ಇಂತಹ ಕಠಿಣ ಸನ್ನಿವೇಶದಲ್ಲಿ ದೇಶದ ಸಮಸ್ತ ರೈತರು ಒಗ್ಗಟ್ಟನ್ನು ಪ್ರ ದರ್ಶಿಸಿ, ಕೇಂದ್ರ ಸರಕಾರಕ್ಕೆ ಬೆಂಬಲ ವ್ಯಕ್ತಪಡಿಸುವಂತೆ ಎಲ್ಲಾ ರೈತರಲ್ಲಿ ಕ್ಯಾಂಪ್ಕೊ ಅಧ್ಯಕ್ಷರು ವಿನಂತಿ ಮಾಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರತದ ಕೃಷಿ ರಫ್ತಿನಲ್ಲಿ ದೊಡ್ಡ ಬದಲಾವಣೆ – ಎಮ್ಮೆ ಮಾಂಸ ರಫ್ತು 5 ಬಿಲಿಯನ್ ಡಾಲರ್ ಗುರಿಯತ್ತ..!

ಭಾರತದ ಎಮ್ಮೆ ಮಾಂಸ ರಫ್ತು 2025-26ರಲ್ಲಿ 5.1 ಬಿಲಿಯನ್ ಡಾಲರ್ ತಲುಪಿದ್ದು, 2026-27ರಲ್ಲಿ…

5 hours ago

ಹಬ್ಬದ ಬೇಡಿಕೆಯನ್ನೇ ಕೃಷಿ ಅವಕಾಶವನ್ನಾಗಿ ಮಾಡಿದ ಕೇರಳ : 2.52 ಲಕ್ಷ ಟನ್ ತರಕಾರಿ ಉತ್ಪಾದನೆ

ಓಣಂ ಹಬ್ಬದ ಸಂದರ್ಭದ ಹೆಚ್ಚಿದ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಕೇರಳ ಕೃಷಿ ಇಲಾಖೆ ನಡೆಸಿದ…

12 hours ago

ಹವಾಮಾನ ವರದಿ | 20-08-2026 | ಕರಾವಳಿಗೆ ಇನ್ನೂ ಮಳೆ ವಿರಾಮವಿಲ್ಲ…! ಆ.23–25 ಕ್ಕೆ ಮತ್ತೆ ಮಳೆ ಹೆಚ್ಚಾಗುವ ಸೂಚನೆ

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನವೂ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದ್ದು,…

14 hours ago

ಅಡಿಕೆ ತೋಟಗಳು ಹೆಚ್ಚುತ್ತಿವೆ… ಹಾಗಿದ್ದರೆ ಕರ್ನಾಟಕದಲ್ಲಿ ಇಳುವರಿ ಏಕೆ ಕುಸಿಯುತ್ತಿದೆ?

ಕರ್ನಾಟಕದಲ್ಲಿ ಅಡಿಕೆ ಬೆಳೆಯುವ ಪ್ರದೇಶ ಕಳೆದ ಐದು ವರ್ಷಗಳಲ್ಲಿ ಶೇ.32.42ರಷ್ಟು ಹೆಚ್ಚಾದರೂ, ಉತ್ಪಾದನೆ…

14 hours ago

ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯವೇ ದೊಡ್ಡ ಶಕ್ತಿಮೂಲ

ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…

1 day ago