Advertisement
MIRROR FOCUS

ಬಿಳಿ ಅಕ್ಕಿ ತಿನ್ನುವುದರಿಂದ ದಪ್ಪ ಆಗುತ್ತದೆಯೇ..? ಆಹಾರ ವಿಜ್ಞಾನ ಏನು ಹೇಳುತ್ತದೆ..?

Share

ಭಾರತೀಯ ಆಹಾರ ಪದ್ಧತಿಯಲ್ಲಿ ಬಿಳಿ ಅಕ್ಕಿ ಶತಮಾನಗಳಿಂದ ಪ್ರಮುಖ ಸ್ಥಾನ ಹೊಂದಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಬಿಳಿ ಅಕ್ಕಿ ತೂಕ ಹೆಚ್ಚಿಸುವ ಆಹಾರವೇ ಎಂಬ ಪ್ರಶ್ನೆ ಸಾರ್ವಜನಿಕ ಚರ್ಚೆಯ ಕೇಂದ್ರಬಿಂದುವಾಗಿದೆ. ಈ ಕುರಿತು ಆಹಾರ ತಜ್ಞರು ಮಹತ್ವದ ಸ್ಪಷ್ಟನೆ ನೀಡಿದ್ದಾರೆ.

ಗುರ್ಗಾಂವ್‌ನ ಮರೆಂಗೋ ಏಷ್ಯಾ ಆಸ್ಪತ್ರೆಯ ಆಹಾರ ತಜ್ಞೆ ಡಾ.ಪರ್ಮೀತ್‌ ಕೌರ್‌ ಅವರ ಪ್ರಕಾರ, “ಯಾವುದೇ ಒಂದು ಆಹಾರವನ್ನು ಮಾತ್ರ ತೂಕ ಹೆಚ್ಚಿಸುವುದಕ್ಕೆ ಹೊಣೆ ಮಾಡುವುದು ಸರಿಯಲ್ಲ.” ದೇಹಕ್ಕೆ ಅಗತ್ಯಕ್ಕಿಂತ ಹೆಚ್ಚು ಕ್ಯಾಲೊರಿಗಳನ್ನು ನಿರಂತರವಾಗಿ ಸೇವಿಸಿದಾಗ ತೂಕ ಹೆಚ್ಚಾಗುತ್ತದೆ. ಒಂದೇ ಒಂದು ಆಹಾರವೇ ಇದಕ್ಕೆ ಕಾರಣವಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.

ಕಂದು ಅಕ್ಕಿಗೆ ಹೋಲಿಸಿದರೆ ಬಿಳಿ ಅಕ್ಕಿಯಲ್ಲಿ ಕ್ಯಾಲೊರಿಗಳು ಮತ್ತು ಸಂಸ್ಕರಿತ ಕಾರ್ಬೋಹೈಡ್ರೇಟ್‌ಗಳ ಪ್ರಮಾಣ ಸ್ವಲ್ಪ ಹೆಚ್ಚಿರುತ್ತದೆ. ಇದರಿಂದ ಬಿಳಿ ಅಕ್ಕಿ ವೇಗವಾಗಿ ಜೀರ್ಣವಾಗಿ, ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ತ್ವರಿತವಾಗಿ ಹೆಚ್ಚಿಸಬಹುದು. ವಿಶೇಷವಾಗಿ ದೊಡ್ಡ ಪ್ರಮಾಣದಲ್ಲಿ ಅಥವಾ ಹೆಚ್ಚು ಕೊಬ್ಬಿನ ಗ್ರೇವಿಗಳೊಂದಿಗೆ ಸೇವಿಸಿದರೆ ತೂಕ ಹೆಚ್ಚಾಗುವ ಸಾಧ್ಯತೆ ಇರುತ್ತದೆ ಎಂದು ಡಿಟಿ ಕೌರ್ ವಿವರಿಸಿದ್ದಾರೆ.

ಆದರೆ ಬಿಳಿ ಅಕ್ಕಿಯನ್ನು ಸಂಪೂರ್ಣವಾಗಿ ತ್ಯಜಿಸಬೇಕೆಂಬ ಅಭಿಪ್ರಾಯವನ್ನು ಅವರು ತಳ್ಳಿಹಾಕಿದ್ದಾರೆ. ಭಾರತೀಯ ಆಹಾರ ಸಂಸ್ಕೃತಿಯಲ್ಲಿ ಬಿಳಿ ಅಕ್ಕಿಗೆ ಸಾಂಸ್ಕೃತಿಕ ಹಾಗೂ ಪ್ರಾದೇಶಿಕ ಮಹತ್ವವಿದೆ. ಜೊತೆಗೆ, ಹಲವರಿಗೆ ಇದು ಸುಲಭವಾಗಿ ಜೀರ್ಣವಾಗುವ ಆಹಾರವೂ ಹೌದು. ನಾರಿನಾಂಶ ಹೆಚ್ಚಿರುವ ಕಂದು ಅಕ್ಕಿ ತೂಕ ನಿಯಂತ್ರಣಕ್ಕೆ ಹೆಚ್ಚು ಸಹಕಾರಿ, ಏಕೆಂದರೆ ಅದು ಹೆಚ್ಚು ಸಮಯ ಹೊಟ್ಟೆ ತುಂಬಿರುವ ಭಾವನೆ ನೀಡುತ್ತದೆ.

ಬಿಳಿ ಅಕ್ಕಿ ಸೇವಿಸುವವರು ಪ್ರಮಾಣದ ಬಗ್ಗೆ ಎಚ್ಚರ ವಹಿಸಬೇಕು ಎಂದು ತಜ್ಞರು ಸಲಹೆ ನೀಡುತ್ತಾರೆ. ಬೇಯಿಸಿದ ಅನ್ನವನ್ನು ತಣ್ಣಗಾಗಿಸಿ ನಂತರ ಮತ್ತೆ ಬಿಸಿ ಮಾಡಿದರೆ ‘ನಿರೋಧಕ ಪಿಷ್ಟ’ ಪ್ರಮಾಣ ಹೆಚ್ಚಾಗುತ್ತದೆ. ಇದರಿಂದ ರಕ್ತದಲ್ಲಿನ ಸಕ್ಕರೆಯ ಏರಿಕೆ ಕಡಿಮೆಯಾಗಲು ಸಹಾಯವಾಗುತ್ತದೆ ಎಂಬುದನ್ನು ಇತ್ತೀಚಿನ ಪೌಷ್ಟಿಕಾಂಶ ಅಧ್ಯಯನಗಳು ಸೂಚಿಸುತ್ತವೆ.

ತೂಕ ಹೆಚ್ಚಳಕ್ಕೆ ಒಂದೇ ಆಹಾರ ಕಾರಣವಲ್ಲ. ಒಟ್ಟಾರೆ ಆಹಾರದ ಪ್ರಮಾಣ, ಕ್ಯಾಲೊರಿ ಸಮತೋಲನ, ಜೊತೆಯ ಪದಾರ್ಥಗಳು ಮತ್ತು ಜೀವನಶೈಲಿ ತೂಕದ ಮೇಲೆ ಪರಿಣಾಮ ಬೀರುತ್ತವೆ. ಮಿತವಾಗಿ ಸೇವಿಸಿದರೆ ಬಿಳಿ ಅಕ್ಕಿಯೂ ಸಮತೋಲನಿತ ಭಾರತೀಯ ಆಹಾರಕ್ರಮದ ಭಾಗವಾಗಿಯೇ ಇರಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 19-04-2026 | ಇಂದಿನಿಂದ ಕರಾವಳಿ, ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಆರಂಭ

ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…

8 hours ago

ಜಾಗತಿಕ ಬಿಕ್ಕಟ್ಟಿನ ಪರಿಣಾಮ : ಬೆಂಗಳೂರಿಗೆ ಆಟೋ LPG ಪೂರೈಕೆ 300% ಹೆಚ್ಚಿಸಿದ ಇಂಡಿಯನ್ ಆಯಿಲ್

ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…

12 hours ago

ಕೃಷಿಗೆ ಹೊಸ ಚೈತನ್ಯ- ದೂರದರ್ಶನ ಚಂದನದಿಂದ “ರೈತ ರತ್ನ” ರಿಯಾಲಿಟಿ ಶೋ ಆರಂಭ

“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…

12 hours ago

ಮಿಜೋರಾಂನಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟಕ್ಕೆ ತಡೆ – ₹54.88 ಲಕ್ಷ ಮೌಲ್ಯದ 98 ಚೀಲ ವಶ

ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…

21 hours ago

ಹವಾಮಾನ ವರದಿ | 18-04-2026 | ರಾಜ್ಯದ ಬಹುತೇಕ ಕಡೆ ಸೆಖೆ ಮುಂದುವರಿಕೆ – ಏಪ್ರಿಲ್ 19 ರಿಂದ ಕರಾವಳಿಯಲ್ಲಿ ಮಳೆ ಆರಂಭ!

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…

1 day ago

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

2 days ago