ವಿಜಯಪುರ ಜಿಲ್ಲೆಯಲ್ಲಿ ಕೆನಡಾದ ವಿಟೆರಾದಿಂದ ₹250 ಕೋಟಿ ಹೂಡಿಕೆ | ಸಚಿವ ಎಂ. ಬಿ. ಪಾಟೀಲ

August 30, 2024
10:30 PM

ವಿಜಯಪುರ ಜಿಲ್ಲೆಯಲ್ಲಿ ಕೃಷಿ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಕೆನಡಾದ ಕೃಷಿ ಉತ್ಪನ್ನ ತಯಾರಿಕಾ ಪ್ರಮುಖ ಕಂಪನಿಯಾಗಿರುವ ವಿಟೆರಾ ₹250 ಕೋಟಿ ಮೊತ್ತದ ಬಂಡವಾಳ ಹೂಡಲಿದೆʼ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.

ವಿಟೆರಾ ಕಂಪನಿಯ ಪ್ರತಿನಿಧಿಗಳ ಜತೆ ಸಚಿವರು ಇಲ್ಲಿನ ಖನಿಜ ಭವನದಲ್ಲಿ ನಡೆಸಿದ ಸಭೆಯಲ್ಲಿ ಈ ಬಂಡವಾಳ ಹೂಡಿಕೆ ನಿರ್ಧಾರ ಕೈಗೊಳ್ಳಲಾಗಿದೆ. ವಿಜಯಪುರ ಜಿಲ್ಲೆಯ ಕೃಷಿ ಸಮುದಾಯದ ಬಳಕೆಗೆ ಅತ್ಯಾಧುನಿಕ ಶೈತ್ಯಾಗಾರಗಳನ್ನು ನಿರ್ಮಿಸಿ ರೈತರು ಸುಗ್ಗಿಯ ನಂತರ ಎದುರಿಸುವ ನಷ್ಟ ತಗ್ಗಿಸಲು ಮತ್ತು ಕೃಷಿ ಉತ್ಪನ್ನಗಳ ಉತ್ಪಾದನೆ, ಪೂರೈಕೆ ಹಾಗೂ ಮಾರಾಟ ಪ್ರಕ್ರಿಯೆಯಲ್ಲಿ ದಕ್ಷತೆ ತರಲು ವಿಟೆರಾ ನೆರವಾಗಲಿದೆ. ವಿಟೆರಾ ಕಂಪನಿಯು ಸುಧಾರಿತ ಉತ್ಪಾದನಾ ತಂತ್ರಜ್ಞಾನ ಬಳಸಲಿದೆ. ರಾಜ್ಯದಲ್ಲಿ ಕೆನಡಾದ ಆಧುನಿಕ ಕೃಷಿ ತಂತ್ರಜ್ಞಾನ ಬಳಕೆ ಹಾಗೂ ಈ ಬಂಡವಾಳ ಹೂಡಿಕೆಯಿಂದ ಕೃಷಿ ಕ್ಷೇತ್ರದ ಉತ್ಪಾದನೆ ಹೆಚ್ಚಲಿದ್ದು, ಅದರಿಂದ ರಾಜ್ಯದ ಒಟ್ಟಾರೆ ಆರ್ಥಿಕತೆಗೂ ಉತ್ತೇಜನ ದೊರೆಯಲಿದೆʼ ಎಂದೂ ಸಚಿವರು ಹೇಳಿದ್ದಾರೆ.

ಸಭೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಡಾ.ಮಹೇಶ ಹಾಗೂ ಇತರ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 16-12-2025 | ಮೋಡ ಮಾತ್ರವೇ ಮಳೆ ಇದೆಯೇ…? | ಮುಂದೆ ಚಳಿಯ ಪ್ರಭಾವ ಹೇಗಿರಬಹುದು..?
December 16, 2025
1:47 PM
by: ಸಾಯಿಶೇಖರ್ ಕರಿಕಳ
ಕೂದಲಿಗೆ ಬಳಸುವ ಎಣ್ಣೆಯ ಪ್ರಯೋಜನ
December 16, 2025
7:22 AM
by: ರೂರಲ್‌ ಮಿರರ್ ಸುದ್ದಿಜಾಲ
ಚಳಿಗಾಲದಲ್ಲಿ ಹೃದಯದ ಕಾಳಜಿಯ ಬಗ್ಗೆ ನಿರ್ಲಕ್ಷ್ಯ ಬೇಡ- ಎಚ್ಚರಿಕೆ ಇರಲಿ
December 16, 2025
7:20 AM
by: ರೂರಲ್‌ ಮಿರರ್ ಸುದ್ದಿಜಾಲ
ಮಹಿಳೆಯರಿಗಾಗಿ ಉಚಿತ ಆರಿ ವರ್ಕ್ಸ್ ತರಬೇತಿ
December 16, 2025
7:17 AM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror