ವಿಜಯಪುರ ಜಿಲ್ಲೆಯಲ್ಲಿ ಕೃಷಿ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಕೆನಡಾದ ಕೃಷಿ ಉತ್ಪನ್ನ ತಯಾರಿಕಾ ಪ್ರಮುಖ ಕಂಪನಿಯಾಗಿರುವ ವಿಟೆರಾ ₹250 ಕೋಟಿ ಮೊತ್ತದ ಬಂಡವಾಳ ಹೂಡಲಿದೆʼ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.
ವಿಟೆರಾ ಕಂಪನಿಯ ಪ್ರತಿನಿಧಿಗಳ ಜತೆ ಸಚಿವರು ಇಲ್ಲಿನ ಖನಿಜ ಭವನದಲ್ಲಿ ನಡೆಸಿದ ಸಭೆಯಲ್ಲಿ ಈ ಬಂಡವಾಳ ಹೂಡಿಕೆ ನಿರ್ಧಾರ ಕೈಗೊಳ್ಳಲಾಗಿದೆ. ವಿಜಯಪುರ ಜಿಲ್ಲೆಯ ಕೃಷಿ ಸಮುದಾಯದ ಬಳಕೆಗೆ ಅತ್ಯಾಧುನಿಕ ಶೈತ್ಯಾಗಾರಗಳನ್ನು ನಿರ್ಮಿಸಿ ರೈತರು ಸುಗ್ಗಿಯ ನಂತರ ಎದುರಿಸುವ ನಷ್ಟ ತಗ್ಗಿಸಲು ಮತ್ತು ಕೃಷಿ ಉತ್ಪನ್ನಗಳ ಉತ್ಪಾದನೆ, ಪೂರೈಕೆ ಹಾಗೂ ಮಾರಾಟ ಪ್ರಕ್ರಿಯೆಯಲ್ಲಿ ದಕ್ಷತೆ ತರಲು ವಿಟೆರಾ ನೆರವಾಗಲಿದೆ. ವಿಟೆರಾ ಕಂಪನಿಯು ಸುಧಾರಿತ ಉತ್ಪಾದನಾ ತಂತ್ರಜ್ಞಾನ ಬಳಸಲಿದೆ. ರಾಜ್ಯದಲ್ಲಿ ಕೆನಡಾದ ಆಧುನಿಕ ಕೃಷಿ ತಂತ್ರಜ್ಞಾನ ಬಳಕೆ ಹಾಗೂ ಈ ಬಂಡವಾಳ ಹೂಡಿಕೆಯಿಂದ ಕೃಷಿ ಕ್ಷೇತ್ರದ ಉತ್ಪಾದನೆ ಹೆಚ್ಚಲಿದ್ದು, ಅದರಿಂದ ರಾಜ್ಯದ ಒಟ್ಟಾರೆ ಆರ್ಥಿಕತೆಗೂ ಉತ್ತೇಜನ ದೊರೆಯಲಿದೆʼ ಎಂದೂ ಸಚಿವರು ಹೇಳಿದ್ದಾರೆ.
ಸಭೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಡಾ.ಮಹೇಶ ಹಾಗೂ ಇತರ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…