ವಿಜಯಪುರ ಜಿಲ್ಲೆಯಲ್ಲಿ ಕೃಷಿ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಕೆನಡಾದ ಕೃಷಿ ಉತ್ಪನ್ನ ತಯಾರಿಕಾ ಪ್ರಮುಖ ಕಂಪನಿಯಾಗಿರುವ ವಿಟೆರಾ ₹250 ಕೋಟಿ ಮೊತ್ತದ ಬಂಡವಾಳ ಹೂಡಲಿದೆʼ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.
ವಿಟೆರಾ ಕಂಪನಿಯ ಪ್ರತಿನಿಧಿಗಳ ಜತೆ ಸಚಿವರು ಇಲ್ಲಿನ ಖನಿಜ ಭವನದಲ್ಲಿ ನಡೆಸಿದ ಸಭೆಯಲ್ಲಿ ಈ ಬಂಡವಾಳ ಹೂಡಿಕೆ ನಿರ್ಧಾರ ಕೈಗೊಳ್ಳಲಾಗಿದೆ. ವಿಜಯಪುರ ಜಿಲ್ಲೆಯ ಕೃಷಿ ಸಮುದಾಯದ ಬಳಕೆಗೆ ಅತ್ಯಾಧುನಿಕ ಶೈತ್ಯಾಗಾರಗಳನ್ನು ನಿರ್ಮಿಸಿ ರೈತರು ಸುಗ್ಗಿಯ ನಂತರ ಎದುರಿಸುವ ನಷ್ಟ ತಗ್ಗಿಸಲು ಮತ್ತು ಕೃಷಿ ಉತ್ಪನ್ನಗಳ ಉತ್ಪಾದನೆ, ಪೂರೈಕೆ ಹಾಗೂ ಮಾರಾಟ ಪ್ರಕ್ರಿಯೆಯಲ್ಲಿ ದಕ್ಷತೆ ತರಲು ವಿಟೆರಾ ನೆರವಾಗಲಿದೆ. ವಿಟೆರಾ ಕಂಪನಿಯು ಸುಧಾರಿತ ಉತ್ಪಾದನಾ ತಂತ್ರಜ್ಞಾನ ಬಳಸಲಿದೆ. ರಾಜ್ಯದಲ್ಲಿ ಕೆನಡಾದ ಆಧುನಿಕ ಕೃಷಿ ತಂತ್ರಜ್ಞಾನ ಬಳಕೆ ಹಾಗೂ ಈ ಬಂಡವಾಳ ಹೂಡಿಕೆಯಿಂದ ಕೃಷಿ ಕ್ಷೇತ್ರದ ಉತ್ಪಾದನೆ ಹೆಚ್ಚಲಿದ್ದು, ಅದರಿಂದ ರಾಜ್ಯದ ಒಟ್ಟಾರೆ ಆರ್ಥಿಕತೆಗೂ ಉತ್ತೇಜನ ದೊರೆಯಲಿದೆʼ ಎಂದೂ ಸಚಿವರು ಹೇಳಿದ್ದಾರೆ.
ಸಭೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಡಾ.ಮಹೇಶ ಹಾಗೂ ಇತರ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಸಾಧ್ಯತೆ ಇದ್ದು,…
ಸಿರಿಧಾನ್ಯಗಳ ಬೇಡಿಕೆ ಹೆಚ್ಚಿದರೂ, ರೈತರಿಗೆ ಅದರ ಸಂಪೂರ್ಣ ಆರ್ಥಿಕ ಲಾಭ ಇನ್ನೂ ತಲುಪಿಲ್ಲ…
ಚಂಡಮಾರುತದ ಗಾಳಿಗೆ ಮುರಿಯದೆ ಬಾಗಿಕೊಂಡು ಉಳಿಯುವ ಮೊಹಿತ್ನಗರ ಅಡಿಕೆ ತಳಿಗೆ ಒಡಿಶಾ ಸೇರಿದಂತೆ…
ಭಾರೀ ಮಳೆಯ ಹಿನ್ನೆಲೆಯಲ್ಲಿ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಶಾಲಾ-ಕಾಲೇಜುಗಳಿಗೆ…
ಸ್ವಾತಂತ್ರ್ಯ ದಿನಾಚರಣೆ ಸೇರಿದಂತೆ ಪ್ರಮುಖ ರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ನಿಂದ ತಯಾರಿಸಿದ ರಾಷ್ಟ್ರಧ್ವಜಗಳನ್ನು ಬಳಸದಂತೆ…
ಮಂಗಳೂರು, ಉಡುಪಿ ಹಾಗೂ ಪುತ್ತೂರಿನಲ್ಲಿ ವಿವಿಧ ಹುದ್ದೆಗಳಿಗೆ ಒಟ್ಟು 22 ಉದ್ಯೋಗಾವಕಾಶಗಳಿದ್ದು, ಆಗಸ್ಟ್…