ವಿಜಯಪುರ ಜಿಲ್ಲೆಯಲ್ಲಿ ಕೃಷಿ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಕೆನಡಾದ ಕೃಷಿ ಉತ್ಪನ್ನ ತಯಾರಿಕಾ ಪ್ರಮುಖ ಕಂಪನಿಯಾಗಿರುವ ವಿಟೆರಾ ₹250 ಕೋಟಿ ಮೊತ್ತದ ಬಂಡವಾಳ ಹೂಡಲಿದೆʼ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.
ವಿಟೆರಾ ಕಂಪನಿಯ ಪ್ರತಿನಿಧಿಗಳ ಜತೆ ಸಚಿವರು ಇಲ್ಲಿನ ಖನಿಜ ಭವನದಲ್ಲಿ ನಡೆಸಿದ ಸಭೆಯಲ್ಲಿ ಈ ಬಂಡವಾಳ ಹೂಡಿಕೆ ನಿರ್ಧಾರ ಕೈಗೊಳ್ಳಲಾಗಿದೆ. ವಿಜಯಪುರ ಜಿಲ್ಲೆಯ ಕೃಷಿ ಸಮುದಾಯದ ಬಳಕೆಗೆ ಅತ್ಯಾಧುನಿಕ ಶೈತ್ಯಾಗಾರಗಳನ್ನು ನಿರ್ಮಿಸಿ ರೈತರು ಸುಗ್ಗಿಯ ನಂತರ ಎದುರಿಸುವ ನಷ್ಟ ತಗ್ಗಿಸಲು ಮತ್ತು ಕೃಷಿ ಉತ್ಪನ್ನಗಳ ಉತ್ಪಾದನೆ, ಪೂರೈಕೆ ಹಾಗೂ ಮಾರಾಟ ಪ್ರಕ್ರಿಯೆಯಲ್ಲಿ ದಕ್ಷತೆ ತರಲು ವಿಟೆರಾ ನೆರವಾಗಲಿದೆ. ವಿಟೆರಾ ಕಂಪನಿಯು ಸುಧಾರಿತ ಉತ್ಪಾದನಾ ತಂತ್ರಜ್ಞಾನ ಬಳಸಲಿದೆ. ರಾಜ್ಯದಲ್ಲಿ ಕೆನಡಾದ ಆಧುನಿಕ ಕೃಷಿ ತಂತ್ರಜ್ಞಾನ ಬಳಕೆ ಹಾಗೂ ಈ ಬಂಡವಾಳ ಹೂಡಿಕೆಯಿಂದ ಕೃಷಿ ಕ್ಷೇತ್ರದ ಉತ್ಪಾದನೆ ಹೆಚ್ಚಲಿದ್ದು, ಅದರಿಂದ ರಾಜ್ಯದ ಒಟ್ಟಾರೆ ಆರ್ಥಿಕತೆಗೂ ಉತ್ತೇಜನ ದೊರೆಯಲಿದೆʼ ಎಂದೂ ಸಚಿವರು ಹೇಳಿದ್ದಾರೆ.
ಸಭೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಡಾ.ಮಹೇಶ ಹಾಗೂ ಇತರ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.
ಕರ್ನಾಟಕ–ತಮಿಳುನಾಡು ಗಡಿಯಲ್ಲಿ ಆನೆಗಳ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗುವಂತೆ ತಮಿಳುನಾಡು ಮೂರು ಹೊಸ ಆನೆ…
ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿ ಭಾಗದಲ್ಲಿ ಮಧ್ಯಮ ಸ್ತರದ ತಿರುವಿಕೆ ಉಂಟಾಗಿದ್ದು, ಇದರ ಪ್ರಭಾವದಿಂದ…
ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…
ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 89 ತೀವ್ರ ಹಾಗೂ 12…
ರಾಜ್ಯದ 101 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮೀಣ ಜನರ ಬೇಡಿಕೆಗೆ ಅನುಗುಣವಾಗಿ…
ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…