ವಿಜಯಪುರ ಜಿಲ್ಲೆಯಲ್ಲಿ ಕೃಷಿ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಕೆನಡಾದ ಕೃಷಿ ಉತ್ಪನ್ನ ತಯಾರಿಕಾ ಪ್ರಮುಖ ಕಂಪನಿಯಾಗಿರುವ ವಿಟೆರಾ ₹250 ಕೋಟಿ ಮೊತ್ತದ ಬಂಡವಾಳ ಹೂಡಲಿದೆʼ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.
ವಿಟೆರಾ ಕಂಪನಿಯ ಪ್ರತಿನಿಧಿಗಳ ಜತೆ ಸಚಿವರು ಇಲ್ಲಿನ ಖನಿಜ ಭವನದಲ್ಲಿ ನಡೆಸಿದ ಸಭೆಯಲ್ಲಿ ಈ ಬಂಡವಾಳ ಹೂಡಿಕೆ ನಿರ್ಧಾರ ಕೈಗೊಳ್ಳಲಾಗಿದೆ. ವಿಜಯಪುರ ಜಿಲ್ಲೆಯ ಕೃಷಿ ಸಮುದಾಯದ ಬಳಕೆಗೆ ಅತ್ಯಾಧುನಿಕ ಶೈತ್ಯಾಗಾರಗಳನ್ನು ನಿರ್ಮಿಸಿ ರೈತರು ಸುಗ್ಗಿಯ ನಂತರ ಎದುರಿಸುವ ನಷ್ಟ ತಗ್ಗಿಸಲು ಮತ್ತು ಕೃಷಿ ಉತ್ಪನ್ನಗಳ ಉತ್ಪಾದನೆ, ಪೂರೈಕೆ ಹಾಗೂ ಮಾರಾಟ ಪ್ರಕ್ರಿಯೆಯಲ್ಲಿ ದಕ್ಷತೆ ತರಲು ವಿಟೆರಾ ನೆರವಾಗಲಿದೆ. ವಿಟೆರಾ ಕಂಪನಿಯು ಸುಧಾರಿತ ಉತ್ಪಾದನಾ ತಂತ್ರಜ್ಞಾನ ಬಳಸಲಿದೆ. ರಾಜ್ಯದಲ್ಲಿ ಕೆನಡಾದ ಆಧುನಿಕ ಕೃಷಿ ತಂತ್ರಜ್ಞಾನ ಬಳಕೆ ಹಾಗೂ ಈ ಬಂಡವಾಳ ಹೂಡಿಕೆಯಿಂದ ಕೃಷಿ ಕ್ಷೇತ್ರದ ಉತ್ಪಾದನೆ ಹೆಚ್ಚಲಿದ್ದು, ಅದರಿಂದ ರಾಜ್ಯದ ಒಟ್ಟಾರೆ ಆರ್ಥಿಕತೆಗೂ ಉತ್ತೇಜನ ದೊರೆಯಲಿದೆʼ ಎಂದೂ ಸಚಿವರು ಹೇಳಿದ್ದಾರೆ.
ಸಭೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಡಾ.ಮಹೇಶ ಹಾಗೂ ಇತರ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.
ಕ್ಯಾಲಿಬರ್ ಕಂಪೆನಿ ವತಿಯಿಂದ ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗಳಿಗೆ ಜುಲೈ…
ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಾರರಿಗೆ ಹವಾಮಾನ ಆಧಾರಿತ ಬೆಳೆವಿಮೆ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಮಳೆ ಮುಂದುವರಿಯುವ…
ಮುಂದಿನ 3 ಗಂಟೆಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ…
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…