ಸುಳ್ಯ ತಾಲೂಕಿನ ಗುತ್ತಿಗಾರಿನ ಕೆನರಾ ಬ್ಯಾಂಕ್ ಸಿಬಂದಿಗಳಿಂದ ಅಸಮರ್ಪಕ ಸೇವೆಯ ಬಗ್ಗೆ ಗ್ರಾಹಕರಿಂದ ವ್ಯಾಪಕ ದೂರುಗಳು ಬರುತ್ತಿರುವ ಬಗ್ಗೆ ಗುತ್ತಿಗಾರು ವರ್ತಕ ಸಂಘವು ಸಂಬಂಧಿತ ಅಧಿಕಾರಿಗಳನ್ನು ಎಚ್ಚರಿಸಿತ್ತು. ಅದಾದ ಬಳಿಕವೂ ಇಲ್ಲಿನ ವ್ಯವಸ್ಥೆ ಸುಧಾರಣೆಯಾಗಿಲ್ಲ ಎಂದು ಗ್ರಾಹಕರು ದೂರಿದ್ದಾರೆ. ಮಂಗಳವಾರ ಬೆಳಗ್ಗೆ 10.30 ರ ವರೆಗೆ ಬ್ಯಾಂಕ್ ಮುಂದೆ ಜನರು ಸರದಿ ಸಾಲಿನಲ್ಲಿ ನಿಲ್ಲಬೇಕಾಯಿತು, ಕಾರಣ, ಬ್ಯಾಂಕ್ ಬಾಗಿಲು ತೆರೆಯಲು ವಿಳಂಬ…!.
ಗುತ್ತಿಗಾರಿನಲ್ಲಿ ಕೆನರಾ ಬ್ಯಾಂಕ್ ಅಸಮರ್ಪಕ ಸೇವೆಯ ಬಗ್ಗೆ ಗ್ರಾಹಕರು ದೂರು ನೀಡುತ್ತಿದ್ದರೂ ಸರಿಯಾದ ಸ್ಪಂದನೆ ಲಭ್ಯವಾಗುತ್ತಿಲ್ಲ. ಇದೀಗ ಈ ಅಸಮಾಧಾನ ಹೋರಾಟದ ಹಾದಿ ತಲುಪಿದೆ. ಗುತ್ತಿಗಾರಿನಲ್ಲಿ ವರ್ತಕ ಸಂಘವು ಇದರ ನೇತೃತ್ವ ವಹಿಸಿಕೊಂಡಿದೆ. ಎರಡು ದಿನಗಳ ಹಿಂದೆ ಸಭೆಯಲ್ಲಿ ಕೂಡಾ ನಿರ್ಧಾರ ಮಾಡಿ ಬ್ಯಾಂಕ್ ಅವ್ಯವಸ್ಥೆ ಬಗ್ಗೆ ದೂರು ನೀಡಲು ನಿರ್ಧಾರ ಮಾಡಲಾಗಿತ್ತು. ಅದಾದ ಬಳಿಕವೂ ಇಲ್ಲಿನ ವ್ಯವಸ್ಥೆ ಸುಧಾರಣೆಯಾಗಿಲ್ಲ. ಮಂಗಳವಾರ ಬ್ಯಾಂಕ್ ಬಾಗಿಲು ತೆರೆದು ಸೇವೆ ಆರಂಭಕ್ಕೆ 10.30 ಆದರೂ ಆಗಿಲ್ಲ ಎಂದು ಗ್ರಾಹಕರು ದೂರಿದ್ದಾರೆ.
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…