Advertisement
ಸುದ್ದಿಗಳು

ಗುತ್ತಿಗಾರು ಕೆನರಾ ಬ್ಯಾಂಕ್‌ ಅವ್ಯವಸ್ಥೆ | ದೂರುಗಳ ನಡುವೆಯೂ 10.30 ರವರೆಗೆ ಬ್ಯಾಂಕ್‌ ಮುಂದೆ ಕಾದ ಗ್ರಾಹಕರು…! |

Share

ಸುಳ್ಯ ತಾಲೂಕಿನ ಗುತ್ತಿಗಾರಿನ ಕೆನರಾ ಬ್ಯಾಂಕ್‌ ಸಿಬಂದಿಗಳಿಂದ ಅಸಮರ್ಪಕ ಸೇವೆಯ ಬಗ್ಗೆ ಗ್ರಾಹಕರಿಂದ ವ್ಯಾಪಕ ದೂರುಗಳು ಬರುತ್ತಿರುವ ಬಗ್ಗೆ ಗುತ್ತಿಗಾರು ವರ್ತಕ ಸಂಘವು ಸಂಬಂಧಿತ ಅಧಿಕಾರಿಗಳನ್ನು ಎಚ್ಚರಿಸಿತ್ತು. ಅದಾದ ಬಳಿಕವೂ ಇಲ್ಲಿನ ವ್ಯವಸ್ಥೆ ಸುಧಾರಣೆಯಾಗಿಲ್ಲ ಎಂದು ಗ್ರಾಹಕರು ದೂರಿದ್ದಾರೆ. ಮಂಗಳವಾರ ಬೆಳಗ್ಗೆ 10.30  ರ ವರೆಗೆ ಬ್ಯಾಂಕ್‌ ಮುಂದೆ ಜನರು ಸರದಿ ಸಾಲಿನಲ್ಲಿ ನಿಲ್ಲಬೇಕಾಯಿತು, ಕಾರಣ, ಬ್ಯಾಂಕ್‌ ಬಾಗಿಲು ತೆರೆಯಲು ವಿಳಂಬ…!. 

ಗುತ್ತಿಗಾರಿನಲ್ಲಿ ಕೆನರಾ ಬ್ಯಾಂಕ್‌ ಅಸಮರ್ಪಕ ಸೇವೆಯ ಬಗ್ಗೆ  ಗ್ರಾಹಕರು ದೂರು ನೀಡುತ್ತಿದ್ದರೂ ಸರಿಯಾದ ಸ್ಪಂದನೆ ಲಭ್ಯವಾಗುತ್ತಿಲ್ಲ. ಇದೀಗ ಈ ಅಸಮಾಧಾನ ಹೋರಾಟದ ಹಾದಿ ತಲುಪಿದೆ. ಗುತ್ತಿಗಾರಿನಲ್ಲಿ ವರ್ತಕ ಸಂಘವು ಇದರ ನೇತೃತ್ವ ವಹಿಸಿಕೊಂಡಿದೆ. ಎರಡು ದಿನಗಳ ಹಿಂದೆ ಸಭೆಯಲ್ಲಿ ಕೂಡಾ ನಿರ್ಧಾರ ಮಾಡಿ ಬ್ಯಾಂಕ್‌ ಅವ್ಯವಸ್ಥೆ ಬಗ್ಗೆ ದೂರು ನೀಡಲು ನಿರ್ಧಾರ ಮಾಡಲಾಗಿತ್ತು. ಅದಾದ ಬಳಿಕವೂ ಇಲ್ಲಿನ ವ್ಯವಸ್ಥೆ ಸುಧಾರಣೆಯಾಗಿಲ್ಲ. ಮಂಗಳವಾರ ಬ್ಯಾಂಕ್‌ ಬಾಗಿಲು ತೆರೆದು ಸೇವೆ ಆರಂಭಕ್ಕೆ 10.30  ಆದರೂ ಆಗಿಲ್ಲ ಎಂದು ಗ್ರಾಹಕರು ದೂರಿದ್ದಾರೆ.

ಗುತ್ತಿಗಾರಿನ ಕೆನರಾ ಬ್ಯಾಂಕ್‌ ಬೆಳಗ್ಗೆ 10.30  ಸಮಯದ ಹೊತ್ತಿನಲ್ಲೂ ಬಾಗಿಲು ತೆರೆಯದೆ , ಸಿಬಂದಿಗಳು ಆಗಮಿಸದೇ ಇರುವ ಕಾರಣದಿಂದ ಗ್ರಾಹಕರು ಬ್ಯಾಂಕ್‌ ಮುಂದೆ ನಿಂತಿರುವ ಬಗ್ಗೆ ಬ್ಯಾಂಕ್‌ ಗೆ ತೆರಳಿದ ಗ್ರಾಹಕರು ತಿಳಿಸಿದ್ದಾರೆ. ಹೀಗಾಗಿ ಮನವಿ ನೀಡಿದ ಬಳಿಕ ಹೋರಾಟದ ರೂಪುರೇಷೆ ತಯಾರಿಸಲಾಗುವುದು
. – ಶಿವರಾಮ ಕರುವಜೆ, ಅಧ್ಯಕ್ಷರು, ವರ್ತಕ ಸಂಘ ಗುತ್ತಿಗಾರು
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

21 minutes ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

36 minutes ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

17 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

20 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

21 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

22 hours ago