ಸುಳ್ಯ ತಾಲೂಕಿನ ಗುತ್ತಿಗಾರಿನ ಕೆನರಾ ಬ್ಯಾಂಕ್ ಸಿಬಂದಿಗಳಿಂದ ಅಸಮರ್ಪಕ ಸೇವೆಯ ಬಗ್ಗೆ ಗ್ರಾಹಕರಿಂದ ವ್ಯಾಪಕ ದೂರುಗಳು ಬರುತ್ತಿರುವ ಬಗ್ಗೆ ಗುತ್ತಿಗಾರು ವರ್ತಕ ಸಂಘವು ಸಂಬಂಧಿತ ಅಧಿಕಾರಿಗಳನ್ನು ಎಚ್ಚರಿಸಿತ್ತು. ಅದಾದ ಬಳಿಕವೂ ಇಲ್ಲಿನ ವ್ಯವಸ್ಥೆ ಸುಧಾರಣೆಯಾಗಿಲ್ಲ ಎಂದು ಗ್ರಾಹಕರು ದೂರಿದ್ದಾರೆ. ಮಂಗಳವಾರ ಬೆಳಗ್ಗೆ 10.30 ರ ವರೆಗೆ ಬ್ಯಾಂಕ್ ಮುಂದೆ ಜನರು ಸರದಿ ಸಾಲಿನಲ್ಲಿ ನಿಲ್ಲಬೇಕಾಯಿತು, ಕಾರಣ, ಬ್ಯಾಂಕ್ ಬಾಗಿಲು ತೆರೆಯಲು ವಿಳಂಬ…!.
ಗುತ್ತಿಗಾರಿನಲ್ಲಿ ಕೆನರಾ ಬ್ಯಾಂಕ್ ಅಸಮರ್ಪಕ ಸೇವೆಯ ಬಗ್ಗೆ ಗ್ರಾಹಕರು ದೂರು ನೀಡುತ್ತಿದ್ದರೂ ಸರಿಯಾದ ಸ್ಪಂದನೆ ಲಭ್ಯವಾಗುತ್ತಿಲ್ಲ. ಇದೀಗ ಈ ಅಸಮಾಧಾನ ಹೋರಾಟದ ಹಾದಿ ತಲುಪಿದೆ. ಗುತ್ತಿಗಾರಿನಲ್ಲಿ ವರ್ತಕ ಸಂಘವು ಇದರ ನೇತೃತ್ವ ವಹಿಸಿಕೊಂಡಿದೆ. ಎರಡು ದಿನಗಳ ಹಿಂದೆ ಸಭೆಯಲ್ಲಿ ಕೂಡಾ ನಿರ್ಧಾರ ಮಾಡಿ ಬ್ಯಾಂಕ್ ಅವ್ಯವಸ್ಥೆ ಬಗ್ಗೆ ದೂರು ನೀಡಲು ನಿರ್ಧಾರ ಮಾಡಲಾಗಿತ್ತು. ಅದಾದ ಬಳಿಕವೂ ಇಲ್ಲಿನ ವ್ಯವಸ್ಥೆ ಸುಧಾರಣೆಯಾಗಿಲ್ಲ. ಮಂಗಳವಾರ ಬ್ಯಾಂಕ್ ಬಾಗಿಲು ತೆರೆದು ಸೇವೆ ಆರಂಭಕ್ಕೆ 10.30 ಆದರೂ ಆಗಿಲ್ಲ ಎಂದು ಗ್ರಾಹಕರು ದೂರಿದ್ದಾರೆ.
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…