ಸುಳ್ಯ ತಾಲೂಕಿನ ಗುತ್ತಿಗಾರಿನ ಕೆನರಾ ಬ್ಯಾಂಕ್ ಸಿಬಂದಿಗಳಿಂದ ಅಸಮರ್ಪಕ ಸೇವೆಯ ಬಗ್ಗೆ ಗ್ರಾಹಕರಿಂದ ವ್ಯಾಪಕ ದೂರುಗಳು ಬರುತ್ತಿರುವ ಬಗ್ಗೆ ಗುತ್ತಿಗಾರು ವರ್ತಕ ಸಂಘವು ಸಂಬಂಧಿತ ಅಧಿಕಾರಿಗಳನ್ನು ಎಚ್ಚರಿಸಿತ್ತು. ಅದಾದ ಬಳಿಕವೂ ಇಲ್ಲಿನ ವ್ಯವಸ್ಥೆ ಸುಧಾರಣೆಯಾಗಿಲ್ಲ ಎಂದು ಗ್ರಾಹಕರು ದೂರಿದ್ದಾರೆ. ಮಂಗಳವಾರ ಬೆಳಗ್ಗೆ 10.30 ರ ವರೆಗೆ ಬ್ಯಾಂಕ್ ಮುಂದೆ ಜನರು ಸರದಿ ಸಾಲಿನಲ್ಲಿ ನಿಲ್ಲಬೇಕಾಯಿತು, ಕಾರಣ, ಬ್ಯಾಂಕ್ ಬಾಗಿಲು ತೆರೆಯಲು ವಿಳಂಬ…!.
ಗುತ್ತಿಗಾರಿನಲ್ಲಿ ಕೆನರಾ ಬ್ಯಾಂಕ್ ಅಸಮರ್ಪಕ ಸೇವೆಯ ಬಗ್ಗೆ ಗ್ರಾಹಕರು ದೂರು ನೀಡುತ್ತಿದ್ದರೂ ಸರಿಯಾದ ಸ್ಪಂದನೆ ಲಭ್ಯವಾಗುತ್ತಿಲ್ಲ. ಇದೀಗ ಈ ಅಸಮಾಧಾನ ಹೋರಾಟದ ಹಾದಿ ತಲುಪಿದೆ. ಗುತ್ತಿಗಾರಿನಲ್ಲಿ ವರ್ತಕ ಸಂಘವು ಇದರ ನೇತೃತ್ವ ವಹಿಸಿಕೊಂಡಿದೆ. ಎರಡು ದಿನಗಳ ಹಿಂದೆ ಸಭೆಯಲ್ಲಿ ಕೂಡಾ ನಿರ್ಧಾರ ಮಾಡಿ ಬ್ಯಾಂಕ್ ಅವ್ಯವಸ್ಥೆ ಬಗ್ಗೆ ದೂರು ನೀಡಲು ನಿರ್ಧಾರ ಮಾಡಲಾಗಿತ್ತು. ಅದಾದ ಬಳಿಕವೂ ಇಲ್ಲಿನ ವ್ಯವಸ್ಥೆ ಸುಧಾರಣೆಯಾಗಿಲ್ಲ. ಮಂಗಳವಾರ ಬ್ಯಾಂಕ್ ಬಾಗಿಲು ತೆರೆದು ಸೇವೆ ಆರಂಭಕ್ಕೆ 10.30 ಆದರೂ ಆಗಿಲ್ಲ ಎಂದು ಗ್ರಾಹಕರು ದೂರಿದ್ದಾರೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…