Advertisement
ಸುದ್ದಿಗಳು

ಗುತ್ತಿಗಾರು ಕೆನರಾ ಬ್ಯಾಂಕ್‌ ಅವ್ಯವಸ್ಥೆ | ದೂರುಗಳ ನಡುವೆಯೂ 10.30 ರವರೆಗೆ ಬ್ಯಾಂಕ್‌ ಮುಂದೆ ಕಾದ ಗ್ರಾಹಕರು…! |

Share

ಸುಳ್ಯ ತಾಲೂಕಿನ ಗುತ್ತಿಗಾರಿನ ಕೆನರಾ ಬ್ಯಾಂಕ್‌ ಸಿಬಂದಿಗಳಿಂದ ಅಸಮರ್ಪಕ ಸೇವೆಯ ಬಗ್ಗೆ ಗ್ರಾಹಕರಿಂದ ವ್ಯಾಪಕ ದೂರುಗಳು ಬರುತ್ತಿರುವ ಬಗ್ಗೆ ಗುತ್ತಿಗಾರು ವರ್ತಕ ಸಂಘವು ಸಂಬಂಧಿತ ಅಧಿಕಾರಿಗಳನ್ನು ಎಚ್ಚರಿಸಿತ್ತು. ಅದಾದ ಬಳಿಕವೂ ಇಲ್ಲಿನ ವ್ಯವಸ್ಥೆ ಸುಧಾರಣೆಯಾಗಿಲ್ಲ ಎಂದು ಗ್ರಾಹಕರು ದೂರಿದ್ದಾರೆ. ಮಂಗಳವಾರ ಬೆಳಗ್ಗೆ 10.30  ರ ವರೆಗೆ ಬ್ಯಾಂಕ್‌ ಮುಂದೆ ಜನರು ಸರದಿ ಸಾಲಿನಲ್ಲಿ ನಿಲ್ಲಬೇಕಾಯಿತು, ಕಾರಣ, ಬ್ಯಾಂಕ್‌ ಬಾಗಿಲು ತೆರೆಯಲು ವಿಳಂಬ…!. 

ಗುತ್ತಿಗಾರಿನಲ್ಲಿ ಕೆನರಾ ಬ್ಯಾಂಕ್‌ ಅಸಮರ್ಪಕ ಸೇವೆಯ ಬಗ್ಗೆ  ಗ್ರಾಹಕರು ದೂರು ನೀಡುತ್ತಿದ್ದರೂ ಸರಿಯಾದ ಸ್ಪಂದನೆ ಲಭ್ಯವಾಗುತ್ತಿಲ್ಲ. ಇದೀಗ ಈ ಅಸಮಾಧಾನ ಹೋರಾಟದ ಹಾದಿ ತಲುಪಿದೆ. ಗುತ್ತಿಗಾರಿನಲ್ಲಿ ವರ್ತಕ ಸಂಘವು ಇದರ ನೇತೃತ್ವ ವಹಿಸಿಕೊಂಡಿದೆ. ಎರಡು ದಿನಗಳ ಹಿಂದೆ ಸಭೆಯಲ್ಲಿ ಕೂಡಾ ನಿರ್ಧಾರ ಮಾಡಿ ಬ್ಯಾಂಕ್‌ ಅವ್ಯವಸ್ಥೆ ಬಗ್ಗೆ ದೂರು ನೀಡಲು ನಿರ್ಧಾರ ಮಾಡಲಾಗಿತ್ತು. ಅದಾದ ಬಳಿಕವೂ ಇಲ್ಲಿನ ವ್ಯವಸ್ಥೆ ಸುಧಾರಣೆಯಾಗಿಲ್ಲ. ಮಂಗಳವಾರ ಬ್ಯಾಂಕ್‌ ಬಾಗಿಲು ತೆರೆದು ಸೇವೆ ಆರಂಭಕ್ಕೆ 10.30  ಆದರೂ ಆಗಿಲ್ಲ ಎಂದು ಗ್ರಾಹಕರು ದೂರಿದ್ದಾರೆ.

ಗುತ್ತಿಗಾರಿನ ಕೆನರಾ ಬ್ಯಾಂಕ್‌ ಬೆಳಗ್ಗೆ 10.30  ಸಮಯದ ಹೊತ್ತಿನಲ್ಲೂ ಬಾಗಿಲು ತೆರೆಯದೆ , ಸಿಬಂದಿಗಳು ಆಗಮಿಸದೇ ಇರುವ ಕಾರಣದಿಂದ ಗ್ರಾಹಕರು ಬ್ಯಾಂಕ್‌ ಮುಂದೆ ನಿಂತಿರುವ ಬಗ್ಗೆ ಬ್ಯಾಂಕ್‌ ಗೆ ತೆರಳಿದ ಗ್ರಾಹಕರು ತಿಳಿಸಿದ್ದಾರೆ. ಹೀಗಾಗಿ ಮನವಿ ನೀಡಿದ ಬಳಿಕ ಹೋರಾಟದ ರೂಪುರೇಷೆ ತಯಾರಿಸಲಾಗುವುದು
. – ಶಿವರಾಮ ಕರುವಜೆ, ಅಧ್ಯಕ್ಷರು, ವರ್ತಕ ಸಂಘ ಗುತ್ತಿಗಾರು
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

17 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

22 hours ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

3 days ago