Advertisement
MIRROR FOCUS

ರೈತರಿಗೆ ಶಾಕಿಂಗ್ ನ್ಯೂಸ್ | ಕೃಷಿ ಪಂಪ್‌ಸೆಟ್‌ಗಳಿಗೆ ಟ್ರಾನ್ಸ್‌ಫಾರ್ಮರ್ ಸಹಿತ ಉಚಿತ ಮೂಲಸೌಕರ್ಯ ಯೋಜನೆ ರದ್ದು |

Share

ಸೆಪ್ಟೆಂಬರ್ 22, 2023 ರ ಬಳಿಕ ಕೊರೆದ ಅಥವಾ ನೋಂದಣಿಯಾದ ಹೊಸ ಕೊಳವೆ ಬಾವಿಗಳ(Bore well) ರೈತರಿಗೆ(Farmer) ತಾವೇ ಖರ್ಚು ಮಾಡಿ ವಿದ್ಯುತ್ ಸಂಪರ್ಕ ಪಡೆಯಬೇಕಾಗಿದೆ. ಇದರಿಂದ ಕನಿಷ್ಠವೆಂದರೂ ರೈತರಿಗೆ 2 ಲಕ್ಷದಷ್ಟು ಹೊರೆಯಾಗಲಿದೆ. ಕೃಷಿ ಪಂಪ್‌ಸೆಟ್‌ಗಳಿಗೆ ಉಚಿತ ಟ್ರಾನ್ಸ್‌ಫಾರ್ಮ್ ಗಳ ಮೂಲಕ ವಿದ್ಯುತ್ ನೀಡುತ್ತಿದ್ದದ್ದು, ಸರ್ಕಾರದ ಬೊಕ್ಕಸಕ್ಕೆ ಹೊರೆಯಾದ ಕಾರಣ ಈ ನಿರ್ಧಾರಕ್ಕೆ ಬಂದಿದೆ. ಹೀಗಾಗಿ ಸರಕಾರ ಅಕ್ರಮ ಸಕ್ರಮ ಮತ್ತು ಶೀಘ್ರ ವಿದ್ಯುತ್ ಯೋಜನೆ ಸವಲತ್ತು ಸ್ಥಗಿತಗೊಳಿಸಿದೆ.

ರಾಜ್ಯ ಸರ್ಕಾರ ಈ ಹಿಂದೆ ಕೃಷಿ ಪಂಪ್ ಸೆಟ್ ಗಳಿಗೆ ಟ್ರಾನ್ಸ್ ಫಾರ್ಮರ್ ಸಮೇತ ಉಚಿತವಾಗಿ ಮೂಲ ಸೌಕರ್ಯವನ್ನು ಒದಗಿಸುವ ಯೋಜನೆಯನ್ನು ಜಾರಿಗೊಳಿಸುವುದಾಗಿ ರಾಜ್ಯ ಸರ್ಕಾರ ಘೋಷಿಸಿತ್ತು. ಆದರೆ ಸದ್ಯ ಸರ್ಕಾರ ಈ ಯೋಜನೆಯ ಕುರಿತು ರೈತರಿಗೆ ಶಾಕ್ ನೀಡಿದೆ. ಅಕ್ರಮ ಸಕ್ರಮ(Illegal is legal) ಯೋಜನೆಯಡಿ ಕೃಷಿ ಪಂಪ್ ಸೆಟ್ ಗಳಿಗೆ ಉಚಿತ ಟ್ರಾನ್ಸ್ ಫಾರ್ಮರ್(Transformer) ಸಹಿತ ಮೂಲ ಸೌಕರ್ಯ ನೀಡುವುದನ್ನು ಸರ್ಕಾರ ಕಡಿತಗೊಳಿಸಿದೆ, ಕೃಷಿ ಪಂಪ್ ಸೆಟ್(Agricultural pump set) ಗಳಿಗೆ ವಿದ್ಯುತ್ ಸಂಪರ್ಕ ಸಹಿತ ಟ್ರಾನ್ಸ್ ಫಾರ್ಮರ್ (TC) ಅನ್ನು ಸ್ವಂತ ಖರ್ಚಿನಲ್ಲೇ ಪಡೆಯಬೇಕಿದೆ. ಈ ಮೊದಲು ಅಕ್ರಮ ಸಕ್ರಮ ವಿದ್ಯುತ್ ಯೋಜನೆಯಡಿ ರೈತರಿಂದ ಪ್ರತಿ ಕೊಳವೆ ಬಾವಿಗೆ ಶುಲ್ಕದ ರೂಪದಲ್ಲಿ 24000 ರೂ. ಮಾತ್ರ ಕಟ್ಟಿಸಿಕೊಳ್ಳುತ್ತಿತ್ತು. ಸದ್ಯ ರಾಜ್ಯ ಸರ್ಕಾರ ಈ ಯೋಜನೆಯನ್ನು ರದ್ದು ಮಾಡಿದೆ. ಇಂಧನ ಇಲಾಖೆ ಆದೇಶ ಪ್ರಕಾರ 2023ರ ಸೆ.22ಕ್ಕೂ ಮುನ್ನ ವಿದ್ಯುತ್‌ ಸಂಪರ್ಕಕ್ಕಾಗಿ ನೋಂದಣಿ ಮಾಡಿಸಿರುವ ರೈತರಿಗೆ ಯಾವುದೇ ರೀತಿಯ ಸಮಸ್ಯೆ ಆಗಲ್ಲ. ಸೆ.22ರ ನಂತರ ನೋಂದಣಿಯಾದ ರೈತರಿಗೆ ವಿದ್ಯುತ್‌ ಸಂಪರ್ಕವು ದುಬಾರಿಯಾಗಲಿದೆ.

ಇದಕ್ಕೂ ಮೊದಲು ರಾಜ್ಯ ಸರ್ಕಾರದ ಶೀಘ್ರ ವಿದ್ಯುತ್ ಮತ್ತು ಅಕ್ರಮ ಸಕ್ರಮ ಯೋಜನೆ ರೂಪಿಸಿತ್ತು. ಕೃಷಿ ಪಂಪ್‌ಸೆಟ್‌ಗಳಿಗೆ ಫ್ರೀ ಟ್ರಾನ್ಸ್‌ಫಾರ್ಮರ್‌ ಜೊತೆಗೆ ಮೂಲಸೌಕರ್ಯ ಒದಗಿಸುವುದು ಸರಕಾರದ ಖಜಾನೆಗೆ ದೊಡ್ಡ ಆರ್ಥಿಕ ಹೊರೆಯಾಗಿತ್ತು. ಟ್ರಾನ್ಸ್‌ಫಾರ್ಮರ್‌ಗಳ ಖರೀದಿ, ದುರಸ್ತಿ, ನಿರ್ವಹಣೆ ಮತ್ತು ಬದಲಾವಣೆಗೆ ಇಂಧನ ಇಲಾಖೆಯು ಕೋಟ್ಯಂತರ ರೂಪಾಯಿ ಖರ್ಚು ಮಾಡುತ್ತಿದೆ. ಈ ಆರ್ಥಿಕ ಹೊರೆ ತಪ್ಪಿಸಲು ಸರಕಾರ, ಅಕ್ರಮ ಸಕ್ರಮ ಮತ್ತು ಶೀಘ್ರ ವಿದ್ಯುತ್‌ ಯೋಜನೆಯ ಸೌಕರ್ಯ ನಿಲ್ಲಿಸಲು ಮುಂದಾಗಿದೆ. ರಾಜ್ಯ ಸರ್ಕಾರ ಉಚಿತ ಟಿಸಿ‌ ನೀಡುವ ಯೋಜನೆಯನ್ನು ರದ್ದುಗೊಳಿಸಿದೆ. ರೈತರು ಹೊಸದಾಗಿ ಕೊಳವೆ ಬಾವಿ ಕೊರೆದ್ರೆ, ಸ್ವಂತ ಖರ್ಚಿನಲ್ಲಿಯೇ ಟಿಸಿ ವ್ಯವಸ್ಥೆ ಮಾಡಿಕೊಳ್ಳಬೇಕಿದೆ. ಈಗ ಇದ್ದಕ್ಕಿದ್ದಂತೆ ಈ ಎರಡೂ ಯೋಜನೆಗಳನ್ನು ನಿಲ್ಲಿಸಲು ಹೊರಟಿರುವ ಸರಕಾರ ರೈತರನ್ನು ಆರ್ಥಿಕ ಇಕ್ಕಟ್ಟಿಗೆ ದೂಡಿದೆ.

– ಅಂತರ್ಜಾಲ ಮಾಹಿತಿ

Farmers of new bore wells drilled or registered after September 22, 2023 need to get electricity connection at their own expense. This will burden the farmers at least 2 lakhs. This decision has been taken because the government was burdened by providing power to agricultural pumpsets through free transformers. Therefore, the government has suspended the privilege of illegal, regular and fast electricity projects.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

18 hours ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

1 day ago

ಹವಾಮಾನ ವರದಿ | 21-05-2026 | ಮೇ ಅಂತ್ಯದವರೆಗೂ ಜೋರು ಮಳೆಯ ಲಕ್ಷಣವಿಲ್ಲ..! ಕರ್ನಾಟಕದಲ್ಲಿ ಮುಂಗಾರು ಮತ್ತಷ್ಟು ವಿಳಂಬ ಸಾಧ್ಯತೆ

ರಾಜ್ಯದಲ್ಲಿ ಮಳೆಯ ಚಟುವಟಿಕೆ ಕಡಿಮೆಯಾಗಿದ್ದು, ಮೇ ಅಂತ್ಯದವರೆಗೂ ಜೋರು ಮಳೆಯ ಸಾಧ್ಯತೆ ಕಡಿಮೆ…

1 day ago

“ಕಾಕ್ರೋಚ್‌ ಜನತಾ ಪಾರ್ಟಿ” ಸದ್ದು | 60 ಲಕ್ಷ ಫಾಲೋವರ್ಸ್‌ ದಾಟಿದ ರಾಜಕೀಯ ಚಳವಳಿ..!

ಕಾಕ್ರೋಚ್‌ ಜನತಾ ಪಾರ್ಟಿ ಎಂಬ ವ್ಯಂಗ್ಯಾತ್ಮಕ ಸಾಮಾಜಿಕ ಜಾಲತಾಣ ಚಳವಳಿ 60 ಲಕ್ಷಕ್ಕೂ…

2 days ago

ಹವಾಮಾನ ವರದಿ | 20.05.2026 | ಮೇ 26 ಬಳಿಕ ಕರ್ನಾಟಕಕ್ಕೆ ಮುಂಗಾರು ಎಂಟ್ರಿ ಸಾಧ್ಯತೆ| ಕರಾವಳಿಯಲ್ಲಿ ಮಳೆ ಕುಂಠಿತ, ಉತ್ತರ ಭಾರತಕ್ಕೆ ಮಳೆ ಸೂಚನೆ

ಕರ್ನಾಟಕದಲ್ಲಿ ಮುಂಗಾರು ಪೂರ್ವ ಚಟುವಟಿಕೆಗಳು ನಿಧಾನಗೊಂಡಿರುವ ನಡುವೆ, 21.05.2026ರ ಬೆಳಿಗ್ಗೆ 8 ಗಂಟೆವರೆಗಿನ…

2 days ago

ಉತ್ತರ ಭಾರತ ಉರಿಯುತ್ತಿದೆ – ಮೇ 25ರವರೆಗೆ ತೀವ್ರ ಬಿಸಿಗಾಳಿ ಎಚ್ಚರಿಕೆ

ಉತ್ತರ ಭಾರತದಲ್ಲಿ ಮೇ 25ರವರೆಗೆ ತೀವ್ರ ಬಿಸಿಗಾಳಿ ಮುಂದುವರಿಯುವ ಸಾಧ್ಯತೆ ಇದೆ. ಹಗಲು…

2 days ago