ಮುಂದಿನ ವರ್ಷದ ವೇಳೆಗೆ ದೇಶದ ಎಲ್ಲಾ ಜಿಲ್ಲೆಗಳಲ್ಲಿ ಕ್ಯಾನ್ಸರ್ ಆರೈಕೆ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ಆರೋಗ್ಯ ಸಚಿವ ಜೆ.ಪಿ. ನಡ್ಡಾ ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ.
ಪ್ರಶ್ನೋತ್ತರ ವೇಳೆಯಲ್ಲಿ ಅವರು, ಕ್ಯಾನ್ಸರ್ ತಪಾಸಣೆ ಮತ್ತು ಚಿಕಿತ್ಸೆಗೆ ಕೇಂದ್ರ ಸರ್ಕಾರ ದೊಡ್ಡ ಯೋಜನೆಯನ್ನು ರೂಪಿಸಿದೆ. ಒಂದು ಲಕ್ಷಕ್ಕೂ ಅಧಿಕ ಆಯುಷ್ಮಾನ್ ಆರೋಗ್ಯ ಕೇಂದ್ರಗಳಲ್ಲಿ ವಿವಿಧ ರೂಪದ ಕ್ಯಾನ್ಸರ್ ಗೆ ತಪಾಸಣೆ ನಡೆಸಲಾಗುತ್ತಿದೆ. ಈ ಕೇಂದ್ರಗಳಲ್ಲಿ 29 ಕೋಟಿ 32 ಲಕ್ಷ ಬಾಯಿ ಕ್ಯಾನ್ಸರ್ ತಪಾಸಣೆ ನಡೆಸಲಾಗಿದ್ದು, ಈ ಪೈಕಿ 1 ಲಕ್ಷದ 63 ಸಾವಿರ ರೋಗ ಪತ್ತೆಯಾಗಿದೆ. 15 ಕೋಟಿ 60 ಲಕ್ಷ ಮಹಿಳೆಯರಿಗೆ ಸ್ತನ ಕ್ಯಾನ್ಸರ್ ತಪಾಸಣೆ ಮಾಡಲಾಗಿದ್ದು, ಈ ಪೈಕಿ 57 ಸಾವಿರ ರೋಗ ಪತ್ತೆಯಾಗಿದೆ ಎಂದರು. ದೇಶದಲ್ಲಿ ಸದ್ಯ 372 ಕ್ಯಾನ್ಸರ್ ಆರೈಕೆ ಕೇಂದ್ರಗಳಿದ್ದು, ಈ ವರ್ಷ ಇನ್ನೂ 200 ಇಂತಹ ಕೇಂದ್ರಗಳನ್ನು, ಮುಂದಿನ ವರ್ಷ ಎಲ್ಲಾ ಜಿಲ್ಲೆಗಳಲ್ಲಿ ಆರಂಭಿಸಲಾಗುವುದು ಎಂದರು.
970 ರ ದಶಕದಿಂದ ಹಿಡಿದು ಈ ತನಕ ಇಲಾಖೆಗಳು,ಸರಕಾರಗಳು,ಹಿರಿಯರು ಹೇಳುತ್ತಾ ಬಂದದ್ದು ವಿಸ್ತರಣೆ…
ಹಲಸಿನ ಬೀಜದ ಚಟ್ಟಂಬಡೆ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : …
ವಾಸ್ತು ಶಾಸ್ತ್ರ ಮತ್ತು ಜ್ಯೋತಿಷ್ಯಶಾಸ್ತ್ರದಲ್ಲಿ, ಮನೆಯ ಗೋಡೆಗಳ ಬಣ್ಣವು ಕೇವಲ ಸೌಂದರ್ಯಕ್ಕೆ ಸೀಮಿತವಾಗಿಲ್ಲ,…
ನೀರು ಕಲ್ಲಿಗಿಂತ ಮೆದುವಾದರೂ, ನಿರಂತರತೆಯಿಂದ ಕಲ್ಲನ್ನೂ ಕೊರೆಯಬಲ್ಲದು. ನಿರಂತರತೆಗೆ ಇರುವ ಶಕ್ತಿ ಅಪಾರ.…
ಸುಚನ್ಯ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ ಶಾಲೆ, ಕಡಬ , | ಕ್ರಿಯೇಟಿವ್…
ಪೃಥ್ವಿ ಜಿ ಎಂ, 6 ನೇ ತರಗತಿ, ಕುಮಾರಸ್ವಾಮಿ ವಿದ್ಯಾಲಯ, ಸುಬ್ರಹ್ಮಣ್ಯ |…