ಮುಂದಿನ ವರ್ಷದ ವೇಳೆಗೆ ದೇಶದ ಎಲ್ಲಾ ಜಿಲ್ಲೆಗಳಲ್ಲಿ ಕ್ಯಾನ್ಸರ್ ಆರೈಕೆ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ಆರೋಗ್ಯ ಸಚಿವ ಜೆ.ಪಿ. ನಡ್ಡಾ ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ.
ಪ್ರಶ್ನೋತ್ತರ ವೇಳೆಯಲ್ಲಿ ಅವರು, ಕ್ಯಾನ್ಸರ್ ತಪಾಸಣೆ ಮತ್ತು ಚಿಕಿತ್ಸೆಗೆ ಕೇಂದ್ರ ಸರ್ಕಾರ ದೊಡ್ಡ ಯೋಜನೆಯನ್ನು ರೂಪಿಸಿದೆ. ಒಂದು ಲಕ್ಷಕ್ಕೂ ಅಧಿಕ ಆಯುಷ್ಮಾನ್ ಆರೋಗ್ಯ ಕೇಂದ್ರಗಳಲ್ಲಿ ವಿವಿಧ ರೂಪದ ಕ್ಯಾನ್ಸರ್ ಗೆ ತಪಾಸಣೆ ನಡೆಸಲಾಗುತ್ತಿದೆ. ಈ ಕೇಂದ್ರಗಳಲ್ಲಿ 29 ಕೋಟಿ 32 ಲಕ್ಷ ಬಾಯಿ ಕ್ಯಾನ್ಸರ್ ತಪಾಸಣೆ ನಡೆಸಲಾಗಿದ್ದು, ಈ ಪೈಕಿ 1 ಲಕ್ಷದ 63 ಸಾವಿರ ರೋಗ ಪತ್ತೆಯಾಗಿದೆ. 15 ಕೋಟಿ 60 ಲಕ್ಷ ಮಹಿಳೆಯರಿಗೆ ಸ್ತನ ಕ್ಯಾನ್ಸರ್ ತಪಾಸಣೆ ಮಾಡಲಾಗಿದ್ದು, ಈ ಪೈಕಿ 57 ಸಾವಿರ ರೋಗ ಪತ್ತೆಯಾಗಿದೆ ಎಂದರು. ದೇಶದಲ್ಲಿ ಸದ್ಯ 372 ಕ್ಯಾನ್ಸರ್ ಆರೈಕೆ ಕೇಂದ್ರಗಳಿದ್ದು, ಈ ವರ್ಷ ಇನ್ನೂ 200 ಇಂತಹ ಕೇಂದ್ರಗಳನ್ನು, ಮುಂದಿನ ವರ್ಷ ಎಲ್ಲಾ ಜಿಲ್ಲೆಗಳಲ್ಲಿ ಆರಂಭಿಸಲಾಗುವುದು ಎಂದರು.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…