Advertisement
MIRROR FOCUS

ವಿಶ್ವ ಕ್ಯಾನ್ಸರ್‌ ದಿನ | ಪ್ರಾರಂಭದಲ್ಲಿಯೇ ಕ್ಯಾನ್ಸರ್ ಚಿಕಿತ್ಸೆ ಪಡೆದರೆ ಗುಣಮುಖ

Share

ಹಲವು ವಿಧಗಳಲ್ಲಿ ಮನುಷ್ಯನನ್ನು ಬಾಧಿಸುವ ಕ್ಯಾನ್ಸರ್ ಕಾಯಿಲೆಯನ್ನು ಪ್ರಾರಂಭದಲ್ಲಿ ಪತ್ತೆಹಚ್ಚಿ, ಚಿಕಿತ್ಸೆ ಪಡೆದಲ್ಲಿ ಗುಣಮುಖರಾಗಿ ಉತ್ತಮ ಜೀವನ ನಡೆಸಲು ಸಾಧ್ಯ ಎಂದು ವೆನ್‍ಲಾಕ್ ಆಸ್ಪತ್ರೆಯ ಅಧೀಕ್ಷಕ ಡಾ. ಸದಾಶಿವ ಶಾನುಭಾಗ್ ಅವರು ಹೇಳಿದರು.

ಅವರು ಶನಿವಾರ ನಗರದ ವೆನ್‍ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಜಿಲ್ಲಾ ಎನ್‍ಸಿಡಿ ಕೋಶ ಮತ್ತು ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಕ್ಯಾನ್ಸರ್ ಜಾಗೃತಿ ದಿನಕ್ಕೆ ಚಾಲನೆ ನೀಡಿ ಮಾತನಾಡಿದರು.

ಮನೆಯವರು, ಸ್ನೇಹಿತರು, ಆ ಪರಿಸರದಲ್ಲಿರುವವರು ರೋಗಿಗೆ ಆತ್ಮವಿಶ್ವಾಸ ತುಂಬಬೇಕು, ಇದು ಕೂಡ ಕಾನ್ಸರ್ ಗುಣಪಡಿಸುವುದರಲ್ಲಿ ಪ್ರಮುಖ ಪಾತ್ರವಹಿಸುತ್ತದೆ, ಈ ರೋಗಕ್ಕೆ ಬದಲಾಗುತ್ತಿರುವ ಜೀವನ ಶೈಲಿ ಅತ್ಯಂತ ಪ್ರಮುಖ ಕಾರಣವೆನ್ನಬಹುದು, ಅಸಾಂಕ್ರಮಿಕ ರೋಗವಾಗಿದೆ ಕ್ಯಾನ್ಸರ್, ಅಧಿಕ ರಕ್ತದೊತ್ತಡ, ಮಧುಮೇಹ, ಪಾರ್ಶ್ವವಾಯು ಮೊದಲಾದ ಹೃದಯದ ಕಾಯಿಲೆ ಮೊದಲಾದವುಗಳಿಂದ ಜನರು ಸಾವನ್ನಪ್ಪುವ ಪ್ರಮಾಣ ಹೆಚ್ಚಾಗಿದೆ ಎಂದವರು ಹೇಳಿದರು.

ಮಕ್ಕಳಿಗೆ ಎಳವೆಯಿಂದಲೇ ಉತ್ತಮ ಜೀವನದ ಪದ್ಧತಿಗಳನ್ನು ತಿಳಿಸಿಕೊಡಬೇಕು, ಊಟ ಬಲ್ಲವನಿಗೆ ರೋಗವಿಲ್ಲವೆನ್ನುವಂತೆ ಉತ್ತಮ ಆಹಾರ ಶೈಲಿಯನ್ನು ಅವರಿಗೆ ತಿಳಿಸಿಕೊಟ್ಟು, ಅವರಲ್ಲಿ ಆತ್ಮವಿಶ್ವಾಸವನ್ನು ಬೆಳೆಸಬೇಕು, ರೋಗ ಲಕ್ಷಣಗಳನ್ನು ತಿಳಿದುಕೊಳ್ಳುವುದರಿಂದಲೂ ಕ್ಯಾನ್ಸರ್‍ನಿಂದ ಗೆಲ್ಲಲು ಸಾಧ್ಯ ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್ ತಿಳಿಸಿದರು.

ವೆನ್ಲಾಕ್‍ನ ಫಾರ್ಮಸಿ ಅಧಿಕಾರಿ ನಿರ್ಮಲಾ ಜಿ.ಪಾಯಸ್ ಮಾತನಾಡಿ, ಮಹಿಳೆಯರು 40 ವರ್ಷದ ಬಳಿಕ ತಿಂಗಳಿಗೊಮ್ಮೆ ಸ್ವ ಪರೀಕ್ಷೆ ಮಾಡಿಕೊಳ್ಳಬೇಕು. ಬದಲಾವಣೆಗಳು ಕಂಡು ಬಂದಲ್ಲಿ ತಕ್ಷಣ ವೈದ್ಯರನ್ನು ಭೇಟಿಯಾಗಬೇಕು ಎಂದರು.

Advertisement

ವೆನ್ಲಾಕ್ ಆಸ್ಪತ್ರೆಯ ನಿವಾಸಿ ವೈದ್ಯಾಧಿಕಾರಿ ಡಾ. ಸುಧಾಕರ್, ಮಂಗಳೂರು ತಾಲೂಕು ಆರೋಗ್ಯಾಧಿಕಾರಿ ಡಾ. ಸುಜಯ್ ಭಂಡಾರಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾಧ್ಯಕ್ಷ  ಡಾ. ಸಿ.ಎ.ಶಾಂತರಾಮ ಶೆಟ್ಟಿ ಹಾಗೂ ಇತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೆಂಗಿನಕಾಯಿಯಿಂದ Gen-Z ಫೇವರಿಟ್ ಫುಡ್‌…! ವೆಗನ್ ಕುಲ್ಫಿ ಮತ್ತು ಚಾಕೊಲೇಟ್ ಬಿಡುಗಡೆ

ಕಾಸರಗೋಡು CPCRI ತನ್ನ 110ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜನರೇಷನ್‌ Z ಗಾಗಿ…

8 hours ago

ತೆಂಗು ರೈತರಿಗೆ ಹೊಸ ದಾರಿ | ಮೌಲ್ಯವರ್ಧನೆ ಮತ್ತು ಬಹುಬೆಳೆ ಪದ್ಧತಿಗೆ ಉತ್ತೇಜನ

ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…

8 hours ago

ತೆಂಗಿನಕಾಯಿ ಬೆಲೆ ಏಕೆ ಇಳಿಯುತ್ತಿದೆ? ರೈತರಿಗೆ ಮುಂದೇನು?

ತೆಂಗಿನಕಾಯಿ ಬೆಲೆ ಇಳಿಕೆ ಆತಂಕ ಹೆಚ್ಚಾಗಿದೆ. ಉತ್ಪಾದನೆ ಏರಿಕೆ ನಡುವೆಯೇ ರಫ್ತು ಮತ್ತು…

8 hours ago

ಡಿಜಿಟಲ್ ಕೃಷಿ, ಹವಾಮಾನ ಸಹಿಷ್ಣು ಬೆಳೆಗಳಿಗೆ ಬೆಂಬಲ -ಕೃಷಿ ಸಚಿವರಿಂದ ಸಭೆ

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್‌ ಸಿಂಗ್‌ ಚೌಹಾನ್‌ ಅವರು…

8 hours ago

ಚಳಿಗಾಲದಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಎಳ್ಳು ಸೇವನೆ ಉತ್ತಮ

ಚಳಿಗಾಲದಲ್ಲಿ ಆಹಾರ ಪದ್ಥತಿಯಲ್ಲೂ ಬದಲಾವಣೆ ಮಾಡಿಕೊಂಡರೆ ಉತ್ತಮ. ಅದರಲ್ಲಿ ಎಳ್ಳು ಸೇವನೆಯೂ ಒಂದು.…

9 hours ago

ನಗರ ಪ್ರದೇಶದ ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ವಿತರಣೆ ಸಚಿವ ಸಂಪುಟದಲ್ಲಿ ನಿರ್ಣಯ

ರಾಜ್ಯ ಸರ್ಕಾರ, ರಾಜಧಾನಿ ಬೆಂಗಳೂರಿನ ನಂತರ ಇದೀಗ ರಾಜ್ಯಾದ್ಯಂತ ಆಸ್ತಿ ಮಾಲೀಕರಿಗೆ ಸಿಹಿ…

9 hours ago