ಹಲವು ವಿಧಗಳಲ್ಲಿ ಮನುಷ್ಯನನ್ನು ಬಾಧಿಸುವ ಕ್ಯಾನ್ಸರ್ ಕಾಯಿಲೆಯನ್ನು ಪ್ರಾರಂಭದಲ್ಲಿ ಪತ್ತೆಹಚ್ಚಿ, ಚಿಕಿತ್ಸೆ ಪಡೆದಲ್ಲಿ ಗುಣಮುಖರಾಗಿ ಉತ್ತಮ ಜೀವನ ನಡೆಸಲು ಸಾಧ್ಯ ಎಂದು ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕ ಡಾ. ಸದಾಶಿವ ಶಾನುಭಾಗ್ ಅವರು ಹೇಳಿದರು.
ಮನೆಯವರು, ಸ್ನೇಹಿತರು, ಆ ಪರಿಸರದಲ್ಲಿರುವವರು ರೋಗಿಗೆ ಆತ್ಮವಿಶ್ವಾಸ ತುಂಬಬೇಕು, ಇದು ಕೂಡ ಕಾನ್ಸರ್ ಗುಣಪಡಿಸುವುದರಲ್ಲಿ ಪ್ರಮುಖ ಪಾತ್ರವಹಿಸುತ್ತದೆ, ಈ ರೋಗಕ್ಕೆ ಬದಲಾಗುತ್ತಿರುವ ಜೀವನ ಶೈಲಿ ಅತ್ಯಂತ ಪ್ರಮುಖ ಕಾರಣವೆನ್ನಬಹುದು, ಅಸಾಂಕ್ರಮಿಕ ರೋಗವಾಗಿದೆ ಕ್ಯಾನ್ಸರ್, ಅಧಿಕ ರಕ್ತದೊತ್ತಡ, ಮಧುಮೇಹ, ಪಾರ್ಶ್ವವಾಯು ಮೊದಲಾದ ಹೃದಯದ ಕಾಯಿಲೆ ಮೊದಲಾದವುಗಳಿಂದ ಜನರು ಸಾವನ್ನಪ್ಪುವ ಪ್ರಮಾಣ ಹೆಚ್ಚಾಗಿದೆ ಎಂದವರು ಹೇಳಿದರು.
ಮಕ್ಕಳಿಗೆ ಎಳವೆಯಿಂದಲೇ ಉತ್ತಮ ಜೀವನದ ಪದ್ಧತಿಗಳನ್ನು ತಿಳಿಸಿಕೊಡಬೇಕು, ಊಟ ಬಲ್ಲವನಿಗೆ ರೋಗವಿಲ್ಲವೆನ್ನುವಂತೆ ಉತ್ತಮ ಆಹಾರ ಶೈಲಿಯನ್ನು ಅವರಿಗೆ ತಿಳಿಸಿಕೊಟ್ಟು, ಅವರಲ್ಲಿ ಆತ್ಮವಿಶ್ವಾಸವನ್ನು ಬೆಳೆಸಬೇಕು, ರೋಗ ಲಕ್ಷಣಗಳನ್ನು ತಿಳಿದುಕೊಳ್ಳುವುದರಿಂದಲೂ ಕ್ಯಾನ್ಸರ್ನಿಂದ ಗೆಲ್ಲಲು ಸಾಧ್ಯ ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್ ತಿಳಿಸಿದರು.
ವೆನ್ಲಾಕ್ನ ಫಾರ್ಮಸಿ ಅಧಿಕಾರಿ ನಿರ್ಮಲಾ ಜಿ.ಪಾಯಸ್ ಮಾತನಾಡಿ, ಮಹಿಳೆಯರು 40 ವರ್ಷದ ಬಳಿಕ ತಿಂಗಳಿಗೊಮ್ಮೆ ಸ್ವ ಪರೀಕ್ಷೆ ಮಾಡಿಕೊಳ್ಳಬೇಕು. ಬದಲಾವಣೆಗಳು ಕಂಡು ಬಂದಲ್ಲಿ ತಕ್ಷಣ ವೈದ್ಯರನ್ನು ಭೇಟಿಯಾಗಬೇಕು ಎಂದರು.
ವೆನ್ಲಾಕ್ ಆಸ್ಪತ್ರೆಯ ನಿವಾಸಿ ವೈದ್ಯಾಧಿಕಾರಿ ಡಾ. ಸುಧಾಕರ್, ಮಂಗಳೂರು ತಾಲೂಕು ಆರೋಗ್ಯಾಧಿಕಾರಿ ಡಾ. ಸುಜಯ್ ಭಂಡಾರಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾಧ್ಯಕ್ಷ ಡಾ. ಸಿ.ಎ.ಶಾಂತರಾಮ ಶೆಟ್ಟಿ ಹಾಗೂ ಇತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…
ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …
ದಿನದಿಂದ ದಿನಕ್ಕೆ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಶಿರಸಿಯ ಕಾಳುಮೆಣಸಿನ ಬೆಲೆಯನ್ನು ಸಂಬಾರ ಮಂಡಳಿಯ ದರಪಟ್ಟಿಯಲ್ಲಿ ನಮೂದಿಸುವಂತೆ ಕೇಂದ್ರ ವಾಣಿಜ್ಯ ಸಚಿವ…
ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ನೀಡಿದ ದಾನಪತ್ರವನ್ನು…