ಹಲವು ವಿಧಗಳಲ್ಲಿ ಮನುಷ್ಯನನ್ನು ಬಾಧಿಸುವ ಕ್ಯಾನ್ಸರ್ ಕಾಯಿಲೆಯನ್ನು ಪ್ರಾರಂಭದಲ್ಲಿ ಪತ್ತೆಹಚ್ಚಿ, ಚಿಕಿತ್ಸೆ ಪಡೆದಲ್ಲಿ ಗುಣಮುಖರಾಗಿ ಉತ್ತಮ ಜೀವನ ನಡೆಸಲು ಸಾಧ್ಯ ಎಂದು ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕ ಡಾ. ಸದಾಶಿವ ಶಾನುಭಾಗ್ ಅವರು ಹೇಳಿದರು.
ಮನೆಯವರು, ಸ್ನೇಹಿತರು, ಆ ಪರಿಸರದಲ್ಲಿರುವವರು ರೋಗಿಗೆ ಆತ್ಮವಿಶ್ವಾಸ ತುಂಬಬೇಕು, ಇದು ಕೂಡ ಕಾನ್ಸರ್ ಗುಣಪಡಿಸುವುದರಲ್ಲಿ ಪ್ರಮುಖ ಪಾತ್ರವಹಿಸುತ್ತದೆ, ಈ ರೋಗಕ್ಕೆ ಬದಲಾಗುತ್ತಿರುವ ಜೀವನ ಶೈಲಿ ಅತ್ಯಂತ ಪ್ರಮುಖ ಕಾರಣವೆನ್ನಬಹುದು, ಅಸಾಂಕ್ರಮಿಕ ರೋಗವಾಗಿದೆ ಕ್ಯಾನ್ಸರ್, ಅಧಿಕ ರಕ್ತದೊತ್ತಡ, ಮಧುಮೇಹ, ಪಾರ್ಶ್ವವಾಯು ಮೊದಲಾದ ಹೃದಯದ ಕಾಯಿಲೆ ಮೊದಲಾದವುಗಳಿಂದ ಜನರು ಸಾವನ್ನಪ್ಪುವ ಪ್ರಮಾಣ ಹೆಚ್ಚಾಗಿದೆ ಎಂದವರು ಹೇಳಿದರು.
ಮಕ್ಕಳಿಗೆ ಎಳವೆಯಿಂದಲೇ ಉತ್ತಮ ಜೀವನದ ಪದ್ಧತಿಗಳನ್ನು ತಿಳಿಸಿಕೊಡಬೇಕು, ಊಟ ಬಲ್ಲವನಿಗೆ ರೋಗವಿಲ್ಲವೆನ್ನುವಂತೆ ಉತ್ತಮ ಆಹಾರ ಶೈಲಿಯನ್ನು ಅವರಿಗೆ ತಿಳಿಸಿಕೊಟ್ಟು, ಅವರಲ್ಲಿ ಆತ್ಮವಿಶ್ವಾಸವನ್ನು ಬೆಳೆಸಬೇಕು, ರೋಗ ಲಕ್ಷಣಗಳನ್ನು ತಿಳಿದುಕೊಳ್ಳುವುದರಿಂದಲೂ ಕ್ಯಾನ್ಸರ್ನಿಂದ ಗೆಲ್ಲಲು ಸಾಧ್ಯ ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್ ತಿಳಿಸಿದರು.
ವೆನ್ಲಾಕ್ನ ಫಾರ್ಮಸಿ ಅಧಿಕಾರಿ ನಿರ್ಮಲಾ ಜಿ.ಪಾಯಸ್ ಮಾತನಾಡಿ, ಮಹಿಳೆಯರು 40 ವರ್ಷದ ಬಳಿಕ ತಿಂಗಳಿಗೊಮ್ಮೆ ಸ್ವ ಪರೀಕ್ಷೆ ಮಾಡಿಕೊಳ್ಳಬೇಕು. ಬದಲಾವಣೆಗಳು ಕಂಡು ಬಂದಲ್ಲಿ ತಕ್ಷಣ ವೈದ್ಯರನ್ನು ಭೇಟಿಯಾಗಬೇಕು ಎಂದರು.
ವೆನ್ಲಾಕ್ ಆಸ್ಪತ್ರೆಯ ನಿವಾಸಿ ವೈದ್ಯಾಧಿಕಾರಿ ಡಾ. ಸುಧಾಕರ್, ಮಂಗಳೂರು ತಾಲೂಕು ಆರೋಗ್ಯಾಧಿಕಾರಿ ಡಾ. ಸುಜಯ್ ಭಂಡಾರಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾಧ್ಯಕ್ಷ ಡಾ. ಸಿ.ಎ.ಶಾಂತರಾಮ ಶೆಟ್ಟಿ ಹಾಗೂ ಇತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…
ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.
ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…
ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…