ಹಲವು ವಿಧಗಳಲ್ಲಿ ಮನುಷ್ಯನನ್ನು ಬಾಧಿಸುವ ಕ್ಯಾನ್ಸರ್ ಕಾಯಿಲೆಯನ್ನು ಪ್ರಾರಂಭದಲ್ಲಿ ಪತ್ತೆಹಚ್ಚಿ, ಚಿಕಿತ್ಸೆ ಪಡೆದಲ್ಲಿ ಗುಣಮುಖರಾಗಿ ಉತ್ತಮ ಜೀವನ ನಡೆಸಲು ಸಾಧ್ಯ ಎಂದು ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕ ಡಾ. ಸದಾಶಿವ ಶಾನುಭಾಗ್ ಅವರು ಹೇಳಿದರು.
ಅವರು ಶನಿವಾರ ನಗರದ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಜಿಲ್ಲಾ ಎನ್ಸಿಡಿ ಕೋಶ ಮತ್ತು ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಕ್ಯಾನ್ಸರ್ ಜಾಗೃತಿ ದಿನಕ್ಕೆ ಚಾಲನೆ ನೀಡಿ ಮಾತನಾಡಿದರು.ಮನೆಯವರು, ಸ್ನೇಹಿತರು, ಆ ಪರಿಸರದಲ್ಲಿರುವವರು ರೋಗಿಗೆ ಆತ್ಮವಿಶ್ವಾಸ ತುಂಬಬೇಕು, ಇದು ಕೂಡ ಕಾನ್ಸರ್ ಗುಣಪಡಿಸುವುದರಲ್ಲಿ ಪ್ರಮುಖ ಪಾತ್ರವಹಿಸುತ್ತದೆ, ಈ ರೋಗಕ್ಕೆ ಬದಲಾಗುತ್ತಿರುವ ಜೀವನ ಶೈಲಿ ಅತ್ಯಂತ ಪ್ರಮುಖ ಕಾರಣವೆನ್ನಬಹುದು, ಅಸಾಂಕ್ರಮಿಕ ರೋಗವಾಗಿದೆ ಕ್ಯಾನ್ಸರ್, ಅಧಿಕ ರಕ್ತದೊತ್ತಡ, ಮಧುಮೇಹ, ಪಾರ್ಶ್ವವಾಯು ಮೊದಲಾದ ಹೃದಯದ ಕಾಯಿಲೆ ಮೊದಲಾದವುಗಳಿಂದ ಜನರು ಸಾವನ್ನಪ್ಪುವ ಪ್ರಮಾಣ ಹೆಚ್ಚಾಗಿದೆ ಎಂದವರು ಹೇಳಿದರು.
ಮಕ್ಕಳಿಗೆ ಎಳವೆಯಿಂದಲೇ ಉತ್ತಮ ಜೀವನದ ಪದ್ಧತಿಗಳನ್ನು ತಿಳಿಸಿಕೊಡಬೇಕು, ಊಟ ಬಲ್ಲವನಿಗೆ ರೋಗವಿಲ್ಲವೆನ್ನುವಂತೆ ಉತ್ತಮ ಆಹಾರ ಶೈಲಿಯನ್ನು ಅವರಿಗೆ ತಿಳಿಸಿಕೊಟ್ಟು, ಅವರಲ್ಲಿ ಆತ್ಮವಿಶ್ವಾಸವನ್ನು ಬೆಳೆಸಬೇಕು, ರೋಗ ಲಕ್ಷಣಗಳನ್ನು ತಿಳಿದುಕೊಳ್ಳುವುದರಿಂದಲೂ ಕ್ಯಾನ್ಸರ್ನಿಂದ ಗೆಲ್ಲಲು ಸಾಧ್ಯ ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್ ತಿಳಿಸಿದರು.
ವೆನ್ಲಾಕ್ನ ಫಾರ್ಮಸಿ ಅಧಿಕಾರಿ ನಿರ್ಮಲಾ ಜಿ.ಪಾಯಸ್ ಮಾತನಾಡಿ, ಮಹಿಳೆಯರು 40 ವರ್ಷದ ಬಳಿಕ ತಿಂಗಳಿಗೊಮ್ಮೆ ಸ್ವ ಪರೀಕ್ಷೆ ಮಾಡಿಕೊಳ್ಳಬೇಕು. ಬದಲಾವಣೆಗಳು ಕಂಡು ಬಂದಲ್ಲಿ ತಕ್ಷಣ ವೈದ್ಯರನ್ನು ಭೇಟಿಯಾಗಬೇಕು ಎಂದರು.
ವೆನ್ಲಾಕ್ ಆಸ್ಪತ್ರೆಯ ನಿವಾಸಿ ವೈದ್ಯಾಧಿಕಾರಿ ಡಾ. ಸುಧಾಕರ್, ಮಂಗಳೂರು ತಾಲೂಕು ಆರೋಗ್ಯಾಧಿಕಾರಿ ಡಾ. ಸುಜಯ್ ಭಂಡಾರಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾಧ್ಯಕ್ಷ ಡಾ. ಸಿ.ಎ.ಶಾಂತರಾಮ ಶೆಟ್ಟಿ ಹಾಗೂ ಇತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…