ಅಡಿಕೆ ಬೆಳೆ ವಿಸ್ತರಣೆಯಾಗಿದೆ. ಆದರೆ ಭವಿಷ್ಯದಲ್ಲಿ ಅಡಿಕೆ ಧಾರಣೆ, ಅಡಿಕೆ ಮಾರುಕಟ್ಟೆ ಬಗ್ಗೆ ಚರ್ಚೆ ಆರಂಭವಾಗಿದೆ. ಇದಕ್ಕಾಗಿ ಅಡಿಕೆಯ ಪರ್ಯಾಯ ಉಪಯೋಗಗಳಿಗೆ ಆದ್ಯತೆ ಸಿಗಬೇಕು ಎನ್ನುವ ಬೇಡಿಕೆ ಇತ್ತು. ಇದೀಗ ದಾವಣಗೆರೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರು ಅಡಿಕೆ ಉಪ ಉತ್ಪನ್ನಗಳ ತಯಾರಿಕಾ ಘಟಕಗಳಿಗೆ ಪ್ರೋತ್ಸಾಹ ನೀಡುವುದಾಗಿ ಹೇಳಿದ್ದಾರೆ.
ಚನ್ನಗಿರಿಯಲ್ಲಿ ಪ್ರಚಾರದ ವೇಳೆ ಮಾತನಾಡಿದ ದಾವಣಗೆರೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ, ಇದೀಗ ದಾವಣಗೆರೆ, ಚೆನ್ನಗಿರ ಸೇರಿದಂತೆ ಹಲವು ಕಡೆ ಅತಿ ಹೆಚ್ಚು ಅಡಿಕೆ ಬೆಳೆಯುವುದರಿಂದ ಅಡಿಕೆ ಬೆಳೆಗಾರರ ಹಿತರಕ್ಷಣೆ ಹಾಗೂ ಅಡಿಕೆ ಮೌಲ್ಯವರ್ಧನೆಗೆ ಹೆಚ್ಚಿನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗುವುದು ಎಂದರು.ಚನ್ನಗಿರಿ ತಾಲೂಕಿನಲ್ಲಿ ಅಡಿಕೆ ಉಪ ಉತ್ಪನ್ನಗಳ ತಯಾರಿಕಾ ಘಟಕಗಳಿಗೆ ಪ್ರೋತ್ಸಾಹ ನೀಡಿದರೆ ಉದ್ಯೋಗ ಸೃಜನೆಯ ಜೊತೆಗೆ ಅಡಿಕೆ ಬೆಳೆಗಾರರ ಹಿತ ಕಾಪಾಡಬಹುದು ಎಂದರು. ಅಡಿಕೆ ಉಪ ಉತ್ಪನ್ನ ತಯಾರಿಕಾ ಘಟಕಗಳು ಪ್ರಾರಂಭವಾದರೆ ಯುವಕರಿಗೆ ಉದ್ಯೋಗ ದೊರೆಯಲಿದೆ. ಅಲ್ಲದೆ ಪರೋಕ್ಷವಾಗಿ ಅನೇಕ ಕುಟುಂಬಗಳಿಗೆ ಸಹಾಯ ವಾಗಲಿದೆ ಎಂದರು.
ಇಂದು ಕೃಷಿ ವಲಯದಲ್ಲಿ ಆಗಬೇಕಾದ ಅಗತ್ಯ ಕೆಲಸಗಳಲ್ಲಿ ಇದೂ ಒಂದು. ಒಬ್ಬ ಅಭ್ಯರ್ಥಿಗೆ ಕನಿಷ್ಟ ತನ್ನ ಕ್ಷೇತ್ರದ ಕೃಷಿ ಹಾಗೂ ಅಭಿವೃದ್ಧಿ ಮಾಡಬೇಕಿರುವ ಕ್ಷೇತ್ರಗಳ ಅರಿವು ಇರಬೇಕಿದೆ. ಚುನಾವಣೆಯ ಸಂದರ್ಭ ಅಭ್ಯರ್ಥಿಗಳಿಗೂ ಕೃಷಿಕರು ಹಾಗೂ ಗ್ರಾಮೀಣ ಜನರು ಈ ಬಗ್ಗೆ ಹೆಚ್ಚು ಪ್ರಶ್ನೆ ಮಾಡಬೇಕಿದೆ.
ಅಡಿಕೆ ಬೆಳೆಯುವ ನಾಡು ವಿಸ್ತಾರವಾದಂತೆಯೇ, ಇದೀಗ ಅಡಿಕೆಯ ಪರ್ಯಾಯ ಬಳಕೆಯ ಕಡೆಗೂ ಆದ್ಯತೆ ನೀಡಬೇಕಿದೆ. ಅಡಿಕೆ ಬೆಳೆಯುವ ನಾಡಿನಲ್ಲಿ ಉದ್ಯಮಗಳ ಸ್ಥಾಪನೆ, ಅಡಿಕೆ ಬಳಕೆಯ ಉತ್ಪನ್ನಗಳ ತಯಾರಿಕೆ ಇತ್ಯಾದಿಗಳಿಗೆ ಆದ್ಯತೆ ನೀಡುವ ನೆಲೆಯಲ್ಲಿ ಕೆಲಸಗಳು ನಡೆಯಬೇಕಿದೆ.
ಕೊರೋನಾ ಸಂಬಂಧಿಸಿದ ವದಂತಿಗಳನ್ನು ಜನತೆ ನಂಬಬಾರದು. ಸಾಮಾಜಿಕ ಜಾಲತಾಣದಲ್ಲಿ ಬರುವ ಎಲ್ಲ ಸುದ್ದಿಗಳು…
ಮಾವಿನ ಹಣ್ಣಿನ ಕಾಲದಲ್ಲಿ ನಿತ್ಯ ಏನಾದರೊಂದು ಬಗೆ ಮಾಡಿ ಉಣಬಡಿಸದಿದ್ದರೆ ಮನೆಯಾಕೆಗೆ ಖಂಡಿತಾ…
ಅಡಿಕೆಯನ್ನು ಮುಖ್ಯವಾಗಿ ಬೀಡಾದ ತಯಾರಿಯಲ್ಲಿ ಒಂದು ಮೂಲ ಉತ್ಪನ್ನ ಆಗಿ ಬಳಸಲಾಗುತ್ತಿದೆ.ಇದನ್ನು ವಿವಿಧ…
ಜೂನ್ 11ರಿಂದ ಸ್ವಲ್ಪ ಮಟ್ಟಿಗೆ ಮುಂಗಾರು ಚುರುಕುಗೊಂಡು ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಮುಂಗಾರು ದುರ್ಬಲಗೊಂಡಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ಚಟುವಟಿಕೆಗಳು ಉಂಟಾದರೆ ಮಾತ್ರ ಮುಂಗಾರು ಸ್ವಲ್ಪ…