Advertisement
MIRROR FOCUS

ಅಡಿಕೆ ಉಪ ಉತ್ಪನ್ನಗಳ ತಯಾರಿಕೆ ಬೆಂಬಲ ಘೊಷಿಸಿದ ಅಭ್ಯರ್ಥಿ |

Share

ಅಡಿಕೆ ಬೆಳೆ ವಿಸ್ತರಣೆಯಾಗಿದೆ. ಆದರೆ ಭವಿಷ್ಯದಲ್ಲಿ ಅಡಿಕೆ ಧಾರಣೆ, ಅಡಿಕೆ ಮಾರುಕಟ್ಟೆ ಬಗ್ಗೆ ಚರ್ಚೆ ಆರಂಭವಾಗಿದೆ. ಇದಕ್ಕಾಗಿ ಅಡಿಕೆಯ ಪರ್ಯಾಯ ಉಪಯೋಗಗಳಿಗೆ ಆದ್ಯತೆ ಸಿಗಬೇಕು ಎನ್ನುವ ಬೇಡಿಕೆ ಇತ್ತು. ಇದೀಗ  ದಾವಣಗೆರೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರು ಅಡಿಕೆ  ಉಪ ಉತ್ಪನ್ನಗಳ ತಯಾರಿಕಾ ಘಟಕಗಳಿಗೆ ಪ್ರೋತ್ಸಾಹ ನೀಡುವುದಾಗಿ ಹೇಳಿದ್ದಾರೆ.

ಚನ್ನಗಿರಿಯಲ್ಲಿ ಪ್ರಚಾರದ ವೇಳೆ ಮಾತನಾಡಿದ ದಾವಣಗೆರೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ,  ಇದೀಗ ದಾವಣಗೆರೆ, ಚೆನ್ನಗಿರ ಸೇರಿದಂತೆ ಹಲವು ಕಡೆ  ಅತಿ ಹೆಚ್ಚು ಅಡಿಕೆ ಬೆಳೆಯುವುದರಿಂದ ಅಡಿಕೆ ಬೆಳೆಗಾರರ ಹಿತರಕ್ಷಣೆ ಹಾಗೂ ಅಡಿಕೆ ಮೌಲ್ಯವರ್ಧನೆಗೆ ಹೆಚ್ಚಿನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗುವುದು ಎಂದರು.ಚನ್ನಗಿರಿ ತಾಲೂಕಿನಲ್ಲಿ ಅಡಿಕೆ ಉಪ ಉತ್ಪನ್ನಗಳ ತಯಾರಿಕಾ ಘಟಕಗಳಿಗೆ ಪ್ರೋತ್ಸಾಹ ನೀಡಿದರೆ ಉದ್ಯೋಗ ಸೃಜನೆಯ ಜೊತೆಗೆ ಅಡಿಕೆ ಬೆಳೆಗಾರರ ಹಿತ ಕಾಪಾಡಬಹುದು ಎಂದರು. ಅಡಿಕೆ ಉಪ ಉತ್ಪನ್ನ ತಯಾರಿಕಾ ಘಟಕಗಳು ಪ್ರಾರಂಭವಾದರೆ ಯುವಕರಿಗೆ ಉದ್ಯೋಗ ದೊರೆಯಲಿದೆ. ಅಲ್ಲದೆ ಪರೋಕ್ಷವಾಗಿ ಅನೇಕ ಕುಟುಂಬಗಳಿಗೆ ಸಹಾಯ ವಾಗಲಿದೆ ಎಂದರು.

ಇಂದು ಕೃಷಿ ವಲಯದಲ್ಲಿ ಆಗಬೇಕಾದ ಅಗತ್ಯ ಕೆಲಸಗಳಲ್ಲಿ ಇದೂ ಒಂದು. ಒಬ್ಬ ಅಭ್ಯರ್ಥಿಗೆ ಕನಿಷ್ಟ ತನ್ನ ಕ್ಷೇತ್ರದ ಕೃಷಿ ಹಾಗೂ ಅಭಿವೃದ್ಧಿ ಮಾಡಬೇಕಿರುವ ಕ್ಷೇತ್ರಗಳ ಅರಿವು ಇರಬೇಕಿದೆ. ಚುನಾವಣೆಯ ಸಂದರ್ಭ ಅಭ್ಯರ್ಥಿಗಳಿಗೂ ಕೃಷಿಕರು ಹಾಗೂ ಗ್ರಾಮೀಣ ಜನರು ಈ ಬಗ್ಗೆ ಹೆಚ್ಚು ಪ್ರಶ್ನೆ ಮಾಡಬೇಕಿದೆ.

ಅಡಿಕೆ ಬೆಳೆಯುವ ನಾಡು ವಿಸ್ತಾರವಾದಂತೆಯೇ, ಇದೀಗ ಅಡಿಕೆಯ ಪರ್ಯಾಯ ಬಳಕೆಯ ಕಡೆಗೂ ಆದ್ಯತೆ ನೀಡಬೇಕಿದೆ. ಅಡಿಕೆ ಬೆಳೆಯುವ ನಾಡಿನಲ್ಲಿ ಉದ್ಯಮಗಳ ಸ್ಥಾಪನೆ, ಅಡಿಕೆ ಬಳಕೆಯ ಉತ್ಪನ್ನಗಳ ತಯಾರಿಕೆ ಇತ್ಯಾದಿಗಳಿಗೆ ಆದ್ಯತೆ ನೀಡುವ ನೆಲೆಯಲ್ಲಿ ಕೆಲಸಗಳು ನಡೆಯಬೇಕಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಿಸಿ ಆಹಾರ ಪಾರ್ಸೆಲ್‌ಗೆ ಪ್ಲಾಸ್ಟಿಕ್‌, ಪತ್ರಿಕೆ ನಿಷೇಧ…! : ಸಾರ್ವಜನಿಕ ಧೂಮಪಾನಕ್ಕೆ ₹1000 ದಂಡ ಎಚ್ಚರಿಕೆ

ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್‌ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…

5 hours ago

ಅಡಿಕೆ ಬೆಳೆಗಾರರೇ ಗಾಬರಿ ಬೇಡ | ಮಾರುಕಟ್ಟೆಯ ‘ತಾತ್ಕಾಲಿಕ ತಿದ್ದುಪಡಿ’ಯ ಹಿಂದಿದೆ ಆರ್ಥಿಕ ಲೆಕ್ಕಾಚಾರ

ಅಡಿಕೆ ಮಾರುಕಟ್ಟೆಯ ಇತ್ತೀಚಿನ ಕುಸಿತ ಜಾಗತಿಕ ರಾಜಕೀಯ ಅನಿಶ್ಚಿತತೆ ಹಾಗೂ ಹಣದ ಹರಿವು…

8 hours ago

ಕಾಂಪೌಂಡ್ ರಬ್ಬರ್ ಆಮದು ಹೆಚ್ಚಳ : 10 ವರ್ಷಗಳ ವಿವರ ಲೋಕಸಭೆಯಲ್ಲಿ ಬಹಿರಂಗ

ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…

20 hours ago

ದಾಖಲೆಯ ಆಹಾರಧಾನ್ಯ ಉತ್ಪಾದನೆ | 10 ವರ್ಷಗಳಲ್ಲಿ 357 ಮಿಲಿಯನ್ ಟನ್

ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…

20 hours ago

ಒಂದೇ ತೋಟದಲ್ಲಿ ಹಲವು ಬೆಳೆ – ವರ್ಷಪೂರ್ತಿ ಆದಾಯ | ಗದಗದ ರೈತ ಸಹೋದರರ ಸಮಗ್ರ ಕೃಷಿ ಮಾದರಿ

ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…

1 day ago

ಅಡಿಕೆ ಇಳುವರಿ ಕುರಿತು “ದ ರೂರಲ್ ಮಿರರ್.ಕಾಂ” ಸಮೀಕ್ಷೆ | ಬಹುತೇಕ ತೋಟಗಳಲ್ಲಿಅಡಿಕೆ ಇಳುವರಿ ಕುಸಿತ

ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…

1 day ago