Advertisement
MIRROR FOCUS

ಅಡಿಕೆ ಉಪ ಉತ್ಪನ್ನಗಳ ತಯಾರಿಕೆ ಬೆಂಬಲ ಘೊಷಿಸಿದ ಅಭ್ಯರ್ಥಿ |

Share

ಅಡಿಕೆ ಬೆಳೆ ವಿಸ್ತರಣೆಯಾಗಿದೆ. ಆದರೆ ಭವಿಷ್ಯದಲ್ಲಿ ಅಡಿಕೆ ಧಾರಣೆ, ಅಡಿಕೆ ಮಾರುಕಟ್ಟೆ ಬಗ್ಗೆ ಚರ್ಚೆ ಆರಂಭವಾಗಿದೆ. ಇದಕ್ಕಾಗಿ ಅಡಿಕೆಯ ಪರ್ಯಾಯ ಉಪಯೋಗಗಳಿಗೆ ಆದ್ಯತೆ ಸಿಗಬೇಕು ಎನ್ನುವ ಬೇಡಿಕೆ ಇತ್ತು. ಇದೀಗ  ದಾವಣಗೆರೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರು ಅಡಿಕೆ  ಉಪ ಉತ್ಪನ್ನಗಳ ತಯಾರಿಕಾ ಘಟಕಗಳಿಗೆ ಪ್ರೋತ್ಸಾಹ ನೀಡುವುದಾಗಿ ಹೇಳಿದ್ದಾರೆ.

ಚನ್ನಗಿರಿಯಲ್ಲಿ ಪ್ರಚಾರದ ವೇಳೆ ಮಾತನಾಡಿದ ದಾವಣಗೆರೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ,  ಇದೀಗ ದಾವಣಗೆರೆ, ಚೆನ್ನಗಿರ ಸೇರಿದಂತೆ ಹಲವು ಕಡೆ  ಅತಿ ಹೆಚ್ಚು ಅಡಿಕೆ ಬೆಳೆಯುವುದರಿಂದ ಅಡಿಕೆ ಬೆಳೆಗಾರರ ಹಿತರಕ್ಷಣೆ ಹಾಗೂ ಅಡಿಕೆ ಮೌಲ್ಯವರ್ಧನೆಗೆ ಹೆಚ್ಚಿನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗುವುದು ಎಂದರು.ಚನ್ನಗಿರಿ ತಾಲೂಕಿನಲ್ಲಿ ಅಡಿಕೆ ಉಪ ಉತ್ಪನ್ನಗಳ ತಯಾರಿಕಾ ಘಟಕಗಳಿಗೆ ಪ್ರೋತ್ಸಾಹ ನೀಡಿದರೆ ಉದ್ಯೋಗ ಸೃಜನೆಯ ಜೊತೆಗೆ ಅಡಿಕೆ ಬೆಳೆಗಾರರ ಹಿತ ಕಾಪಾಡಬಹುದು ಎಂದರು. ಅಡಿಕೆ ಉಪ ಉತ್ಪನ್ನ ತಯಾರಿಕಾ ಘಟಕಗಳು ಪ್ರಾರಂಭವಾದರೆ ಯುವಕರಿಗೆ ಉದ್ಯೋಗ ದೊರೆಯಲಿದೆ. ಅಲ್ಲದೆ ಪರೋಕ್ಷವಾಗಿ ಅನೇಕ ಕುಟುಂಬಗಳಿಗೆ ಸಹಾಯ ವಾಗಲಿದೆ ಎಂದರು.

ಇಂದು ಕೃಷಿ ವಲಯದಲ್ಲಿ ಆಗಬೇಕಾದ ಅಗತ್ಯ ಕೆಲಸಗಳಲ್ಲಿ ಇದೂ ಒಂದು. ಒಬ್ಬ ಅಭ್ಯರ್ಥಿಗೆ ಕನಿಷ್ಟ ತನ್ನ ಕ್ಷೇತ್ರದ ಕೃಷಿ ಹಾಗೂ ಅಭಿವೃದ್ಧಿ ಮಾಡಬೇಕಿರುವ ಕ್ಷೇತ್ರಗಳ ಅರಿವು ಇರಬೇಕಿದೆ. ಚುನಾವಣೆಯ ಸಂದರ್ಭ ಅಭ್ಯರ್ಥಿಗಳಿಗೂ ಕೃಷಿಕರು ಹಾಗೂ ಗ್ರಾಮೀಣ ಜನರು ಈ ಬಗ್ಗೆ ಹೆಚ್ಚು ಪ್ರಶ್ನೆ ಮಾಡಬೇಕಿದೆ.

ಅಡಿಕೆ ಬೆಳೆಯುವ ನಾಡು ವಿಸ್ತಾರವಾದಂತೆಯೇ, ಇದೀಗ ಅಡಿಕೆಯ ಪರ್ಯಾಯ ಬಳಕೆಯ ಕಡೆಗೂ ಆದ್ಯತೆ ನೀಡಬೇಕಿದೆ. ಅಡಿಕೆ ಬೆಳೆಯುವ ನಾಡಿನಲ್ಲಿ ಉದ್ಯಮಗಳ ಸ್ಥಾಪನೆ, ಅಡಿಕೆ ಬಳಕೆಯ ಉತ್ಪನ್ನಗಳ ತಯಾರಿಕೆ ಇತ್ಯಾದಿಗಳಿಗೆ ಆದ್ಯತೆ ನೀಡುವ ನೆಲೆಯಲ್ಲಿ ಕೆಲಸಗಳು ನಡೆಯಬೇಕಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

57 minutes ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

9 hours ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

11 hours ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

17 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

18 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

1 day ago