Advertisement
MIRROR FOCUS

ಅಡಿಕೆ ಉಪ ಉತ್ಪನ್ನಗಳ ತಯಾರಿಕೆ ಬೆಂಬಲ ಘೊಷಿಸಿದ ಅಭ್ಯರ್ಥಿ |

Share

ಅಡಿಕೆ ಬೆಳೆ ವಿಸ್ತರಣೆಯಾಗಿದೆ. ಆದರೆ ಭವಿಷ್ಯದಲ್ಲಿ ಅಡಿಕೆ ಧಾರಣೆ, ಅಡಿಕೆ ಮಾರುಕಟ್ಟೆ ಬಗ್ಗೆ ಚರ್ಚೆ ಆರಂಭವಾಗಿದೆ. ಇದಕ್ಕಾಗಿ ಅಡಿಕೆಯ ಪರ್ಯಾಯ ಉಪಯೋಗಗಳಿಗೆ ಆದ್ಯತೆ ಸಿಗಬೇಕು ಎನ್ನುವ ಬೇಡಿಕೆ ಇತ್ತು. ಇದೀಗ  ದಾವಣಗೆರೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರು ಅಡಿಕೆ  ಉಪ ಉತ್ಪನ್ನಗಳ ತಯಾರಿಕಾ ಘಟಕಗಳಿಗೆ ಪ್ರೋತ್ಸಾಹ ನೀಡುವುದಾಗಿ ಹೇಳಿದ್ದಾರೆ.

ಚನ್ನಗಿರಿಯಲ್ಲಿ ಪ್ರಚಾರದ ವೇಳೆ ಮಾತನಾಡಿದ ದಾವಣಗೆರೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ,  ಇದೀಗ ದಾವಣಗೆರೆ, ಚೆನ್ನಗಿರ ಸೇರಿದಂತೆ ಹಲವು ಕಡೆ  ಅತಿ ಹೆಚ್ಚು ಅಡಿಕೆ ಬೆಳೆಯುವುದರಿಂದ ಅಡಿಕೆ ಬೆಳೆಗಾರರ ಹಿತರಕ್ಷಣೆ ಹಾಗೂ ಅಡಿಕೆ ಮೌಲ್ಯವರ್ಧನೆಗೆ ಹೆಚ್ಚಿನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗುವುದು ಎಂದರು.ಚನ್ನಗಿರಿ ತಾಲೂಕಿನಲ್ಲಿ ಅಡಿಕೆ ಉಪ ಉತ್ಪನ್ನಗಳ ತಯಾರಿಕಾ ಘಟಕಗಳಿಗೆ ಪ್ರೋತ್ಸಾಹ ನೀಡಿದರೆ ಉದ್ಯೋಗ ಸೃಜನೆಯ ಜೊತೆಗೆ ಅಡಿಕೆ ಬೆಳೆಗಾರರ ಹಿತ ಕಾಪಾಡಬಹುದು ಎಂದರು. ಅಡಿಕೆ ಉಪ ಉತ್ಪನ್ನ ತಯಾರಿಕಾ ಘಟಕಗಳು ಪ್ರಾರಂಭವಾದರೆ ಯುವಕರಿಗೆ ಉದ್ಯೋಗ ದೊರೆಯಲಿದೆ. ಅಲ್ಲದೆ ಪರೋಕ್ಷವಾಗಿ ಅನೇಕ ಕುಟುಂಬಗಳಿಗೆ ಸಹಾಯ ವಾಗಲಿದೆ ಎಂದರು.

ಇಂದು ಕೃಷಿ ವಲಯದಲ್ಲಿ ಆಗಬೇಕಾದ ಅಗತ್ಯ ಕೆಲಸಗಳಲ್ಲಿ ಇದೂ ಒಂದು. ಒಬ್ಬ ಅಭ್ಯರ್ಥಿಗೆ ಕನಿಷ್ಟ ತನ್ನ ಕ್ಷೇತ್ರದ ಕೃಷಿ ಹಾಗೂ ಅಭಿವೃದ್ಧಿ ಮಾಡಬೇಕಿರುವ ಕ್ಷೇತ್ರಗಳ ಅರಿವು ಇರಬೇಕಿದೆ. ಚುನಾವಣೆಯ ಸಂದರ್ಭ ಅಭ್ಯರ್ಥಿಗಳಿಗೂ ಕೃಷಿಕರು ಹಾಗೂ ಗ್ರಾಮೀಣ ಜನರು ಈ ಬಗ್ಗೆ ಹೆಚ್ಚು ಪ್ರಶ್ನೆ ಮಾಡಬೇಕಿದೆ.

ಅಡಿಕೆ ಬೆಳೆಯುವ ನಾಡು ವಿಸ್ತಾರವಾದಂತೆಯೇ, ಇದೀಗ ಅಡಿಕೆಯ ಪರ್ಯಾಯ ಬಳಕೆಯ ಕಡೆಗೂ ಆದ್ಯತೆ ನೀಡಬೇಕಿದೆ. ಅಡಿಕೆ ಬೆಳೆಯುವ ನಾಡಿನಲ್ಲಿ ಉದ್ಯಮಗಳ ಸ್ಥಾಪನೆ, ಅಡಿಕೆ ಬಳಕೆಯ ಉತ್ಪನ್ನಗಳ ತಯಾರಿಕೆ ಇತ್ಯಾದಿಗಳಿಗೆ ಆದ್ಯತೆ ನೀಡುವ ನೆಲೆಯಲ್ಲಿ ಕೆಲಸಗಳು ನಡೆಯಬೇಕಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್‌…

6 hours ago

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

9 hours ago

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

18 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

20 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

21 hours ago