Advertisement
MIRROR FOCUS

ಅಡಿಕೆ ಉಪ ಉತ್ಪನ್ನಗಳ ತಯಾರಿಕೆ ಬೆಂಬಲ ಘೊಷಿಸಿದ ಅಭ್ಯರ್ಥಿ |

Share

ಅಡಿಕೆ ಬೆಳೆ ವಿಸ್ತರಣೆಯಾಗಿದೆ. ಆದರೆ ಭವಿಷ್ಯದಲ್ಲಿ ಅಡಿಕೆ ಧಾರಣೆ, ಅಡಿಕೆ ಮಾರುಕಟ್ಟೆ ಬಗ್ಗೆ ಚರ್ಚೆ ಆರಂಭವಾಗಿದೆ. ಇದಕ್ಕಾಗಿ ಅಡಿಕೆಯ ಪರ್ಯಾಯ ಉಪಯೋಗಗಳಿಗೆ ಆದ್ಯತೆ ಸಿಗಬೇಕು ಎನ್ನುವ ಬೇಡಿಕೆ ಇತ್ತು. ಇದೀಗ  ದಾವಣಗೆರೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರು ಅಡಿಕೆ  ಉಪ ಉತ್ಪನ್ನಗಳ ತಯಾರಿಕಾ ಘಟಕಗಳಿಗೆ ಪ್ರೋತ್ಸಾಹ ನೀಡುವುದಾಗಿ ಹೇಳಿದ್ದಾರೆ.

ಚನ್ನಗಿರಿಯಲ್ಲಿ ಪ್ರಚಾರದ ವೇಳೆ ಮಾತನಾಡಿದ ದಾವಣಗೆರೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ,  ಇದೀಗ ದಾವಣಗೆರೆ, ಚೆನ್ನಗಿರ ಸೇರಿದಂತೆ ಹಲವು ಕಡೆ  ಅತಿ ಹೆಚ್ಚು ಅಡಿಕೆ ಬೆಳೆಯುವುದರಿಂದ ಅಡಿಕೆ ಬೆಳೆಗಾರರ ಹಿತರಕ್ಷಣೆ ಹಾಗೂ ಅಡಿಕೆ ಮೌಲ್ಯವರ್ಧನೆಗೆ ಹೆಚ್ಚಿನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗುವುದು ಎಂದರು.ಚನ್ನಗಿರಿ ತಾಲೂಕಿನಲ್ಲಿ ಅಡಿಕೆ ಉಪ ಉತ್ಪನ್ನಗಳ ತಯಾರಿಕಾ ಘಟಕಗಳಿಗೆ ಪ್ರೋತ್ಸಾಹ ನೀಡಿದರೆ ಉದ್ಯೋಗ ಸೃಜನೆಯ ಜೊತೆಗೆ ಅಡಿಕೆ ಬೆಳೆಗಾರರ ಹಿತ ಕಾಪಾಡಬಹುದು ಎಂದರು. ಅಡಿಕೆ ಉಪ ಉತ್ಪನ್ನ ತಯಾರಿಕಾ ಘಟಕಗಳು ಪ್ರಾರಂಭವಾದರೆ ಯುವಕರಿಗೆ ಉದ್ಯೋಗ ದೊರೆಯಲಿದೆ. ಅಲ್ಲದೆ ಪರೋಕ್ಷವಾಗಿ ಅನೇಕ ಕುಟುಂಬಗಳಿಗೆ ಸಹಾಯ ವಾಗಲಿದೆ ಎಂದರು.

ಇಂದು ಕೃಷಿ ವಲಯದಲ್ಲಿ ಆಗಬೇಕಾದ ಅಗತ್ಯ ಕೆಲಸಗಳಲ್ಲಿ ಇದೂ ಒಂದು. ಒಬ್ಬ ಅಭ್ಯರ್ಥಿಗೆ ಕನಿಷ್ಟ ತನ್ನ ಕ್ಷೇತ್ರದ ಕೃಷಿ ಹಾಗೂ ಅಭಿವೃದ್ಧಿ ಮಾಡಬೇಕಿರುವ ಕ್ಷೇತ್ರಗಳ ಅರಿವು ಇರಬೇಕಿದೆ. ಚುನಾವಣೆಯ ಸಂದರ್ಭ ಅಭ್ಯರ್ಥಿಗಳಿಗೂ ಕೃಷಿಕರು ಹಾಗೂ ಗ್ರಾಮೀಣ ಜನರು ಈ ಬಗ್ಗೆ ಹೆಚ್ಚು ಪ್ರಶ್ನೆ ಮಾಡಬೇಕಿದೆ.

ಅಡಿಕೆ ಬೆಳೆಯುವ ನಾಡು ವಿಸ್ತಾರವಾದಂತೆಯೇ, ಇದೀಗ ಅಡಿಕೆಯ ಪರ್ಯಾಯ ಬಳಕೆಯ ಕಡೆಗೂ ಆದ್ಯತೆ ನೀಡಬೇಕಿದೆ. ಅಡಿಕೆ ಬೆಳೆಯುವ ನಾಡಿನಲ್ಲಿ ಉದ್ಯಮಗಳ ಸ್ಥಾಪನೆ, ಅಡಿಕೆ ಬಳಕೆಯ ಉತ್ಪನ್ನಗಳ ತಯಾರಿಕೆ ಇತ್ಯಾದಿಗಳಿಗೆ ಆದ್ಯತೆ ನೀಡುವ ನೆಲೆಯಲ್ಲಿ ಕೆಲಸಗಳು ನಡೆಯಬೇಕಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

1 day ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

1 day ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

2 days ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

3 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

3 days ago