Advertisement
MIRROR FOCUS

ಅಡಿಕೆ ಉಪ ಉತ್ಪನ್ನಗಳ ತಯಾರಿಕೆ ಬೆಂಬಲ ಘೊಷಿಸಿದ ಅಭ್ಯರ್ಥಿ |

Share

ಅಡಿಕೆ ಬೆಳೆ ವಿಸ್ತರಣೆಯಾಗಿದೆ. ಆದರೆ ಭವಿಷ್ಯದಲ್ಲಿ ಅಡಿಕೆ ಧಾರಣೆ, ಅಡಿಕೆ ಮಾರುಕಟ್ಟೆ ಬಗ್ಗೆ ಚರ್ಚೆ ಆರಂಭವಾಗಿದೆ. ಇದಕ್ಕಾಗಿ ಅಡಿಕೆಯ ಪರ್ಯಾಯ ಉಪಯೋಗಗಳಿಗೆ ಆದ್ಯತೆ ಸಿಗಬೇಕು ಎನ್ನುವ ಬೇಡಿಕೆ ಇತ್ತು. ಇದೀಗ  ದಾವಣಗೆರೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರು ಅಡಿಕೆ  ಉಪ ಉತ್ಪನ್ನಗಳ ತಯಾರಿಕಾ ಘಟಕಗಳಿಗೆ ಪ್ರೋತ್ಸಾಹ ನೀಡುವುದಾಗಿ ಹೇಳಿದ್ದಾರೆ.

ಚನ್ನಗಿರಿಯಲ್ಲಿ ಪ್ರಚಾರದ ವೇಳೆ ಮಾತನಾಡಿದ ದಾವಣಗೆರೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ,  ಇದೀಗ ದಾವಣಗೆರೆ, ಚೆನ್ನಗಿರ ಸೇರಿದಂತೆ ಹಲವು ಕಡೆ  ಅತಿ ಹೆಚ್ಚು ಅಡಿಕೆ ಬೆಳೆಯುವುದರಿಂದ ಅಡಿಕೆ ಬೆಳೆಗಾರರ ಹಿತರಕ್ಷಣೆ ಹಾಗೂ ಅಡಿಕೆ ಮೌಲ್ಯವರ್ಧನೆಗೆ ಹೆಚ್ಚಿನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗುವುದು ಎಂದರು.ಚನ್ನಗಿರಿ ತಾಲೂಕಿನಲ್ಲಿ ಅಡಿಕೆ ಉಪ ಉತ್ಪನ್ನಗಳ ತಯಾರಿಕಾ ಘಟಕಗಳಿಗೆ ಪ್ರೋತ್ಸಾಹ ನೀಡಿದರೆ ಉದ್ಯೋಗ ಸೃಜನೆಯ ಜೊತೆಗೆ ಅಡಿಕೆ ಬೆಳೆಗಾರರ ಹಿತ ಕಾಪಾಡಬಹುದು ಎಂದರು. ಅಡಿಕೆ ಉಪ ಉತ್ಪನ್ನ ತಯಾರಿಕಾ ಘಟಕಗಳು ಪ್ರಾರಂಭವಾದರೆ ಯುವಕರಿಗೆ ಉದ್ಯೋಗ ದೊರೆಯಲಿದೆ. ಅಲ್ಲದೆ ಪರೋಕ್ಷವಾಗಿ ಅನೇಕ ಕುಟುಂಬಗಳಿಗೆ ಸಹಾಯ ವಾಗಲಿದೆ ಎಂದರು.

ಇಂದು ಕೃಷಿ ವಲಯದಲ್ಲಿ ಆಗಬೇಕಾದ ಅಗತ್ಯ ಕೆಲಸಗಳಲ್ಲಿ ಇದೂ ಒಂದು. ಒಬ್ಬ ಅಭ್ಯರ್ಥಿಗೆ ಕನಿಷ್ಟ ತನ್ನ ಕ್ಷೇತ್ರದ ಕೃಷಿ ಹಾಗೂ ಅಭಿವೃದ್ಧಿ ಮಾಡಬೇಕಿರುವ ಕ್ಷೇತ್ರಗಳ ಅರಿವು ಇರಬೇಕಿದೆ. ಚುನಾವಣೆಯ ಸಂದರ್ಭ ಅಭ್ಯರ್ಥಿಗಳಿಗೂ ಕೃಷಿಕರು ಹಾಗೂ ಗ್ರಾಮೀಣ ಜನರು ಈ ಬಗ್ಗೆ ಹೆಚ್ಚು ಪ್ರಶ್ನೆ ಮಾಡಬೇಕಿದೆ.

ಅಡಿಕೆ ಬೆಳೆಯುವ ನಾಡು ವಿಸ್ತಾರವಾದಂತೆಯೇ, ಇದೀಗ ಅಡಿಕೆಯ ಪರ್ಯಾಯ ಬಳಕೆಯ ಕಡೆಗೂ ಆದ್ಯತೆ ನೀಡಬೇಕಿದೆ. ಅಡಿಕೆ ಬೆಳೆಯುವ ನಾಡಿನಲ್ಲಿ ಉದ್ಯಮಗಳ ಸ್ಥಾಪನೆ, ಅಡಿಕೆ ಬಳಕೆಯ ಉತ್ಪನ್ನಗಳ ತಯಾರಿಕೆ ಇತ್ಯಾದಿಗಳಿಗೆ ಆದ್ಯತೆ ನೀಡುವ ನೆಲೆಯಲ್ಲಿ ಕೆಲಸಗಳು ನಡೆಯಬೇಕಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆ ಎಚ್ಚರಿಕೆ – ಉಡುಪಿ, ದಕ್ಷಿಣ ಕನ್ನಡ ಸೇರಿ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ, ಗಂಟೆಗೆ 50 ಕಿ.ಮೀ. ವೇಗದ ಗಾಳಿ ಸಾಧ್ಯತೆ

ಮುಂದಿನ 3 ಗಂಟೆಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ…

4 hours ago

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

3 days ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

3 days ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

3 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

4 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

4 days ago