ಡಬ್ಬದ ಪ್ರೊಟೀನ್ ಮತ್ತು ಸ್ವಾಭಾವಿಕ ಪ್ರೋಟೀನ್ ಇದರಲ್ಲಿ ಯಾವುದು ಉತ್ತಮ?

July 18, 2024
2:05 PM

 ಜಿಮ್‌ಗೆ(Gym) ಹೋಗುವ ಅನೇಕರು ಮಾಂಸ ಖಂಡ(muscle)ಪುಷ್ಟಿಗಾಗಿ ಅಲ್ಲಿ ದೊರೆಯುವ ಹಾಲಿನ ಪ್ರೋಟೀನ್‌ನನ್ನು(Milk Protein) ಡಬ್ಬಗಟ್ಟಲೆ ಸೇವಿಸುತ್ತಾರೆ! ಜಿಮ್‌ಗಳು ಎರಡನೇ ಆಲೋಚನೆಯಿಲ್ಲದೆ “ಯಾವುದೇ ಅಡ್ಡಪರಿಣಾಮಗಳಿಲ್ಲ(side effect)” ಎಂದು ಹೇಳುತ್ತ ಬೇಕಾಬಿಟ್ಟಿಯಾಗಿ ಈ ಪ್ರೋಟೀನ್ ಡಬ್ಬಗಳನ್ನು ಮಾರಾಟ ಮಾಡುತ್ತವೆ! ಆದರೆ, ಈ ಆಹಾರವು(Food) ಭಾರತೀಯ ಉಪಖಂಡದಲ್ಲಿ ಜೀರ್ಣಿಸಿಕೊಳ್ಳಲು ತುಂಬಾ ಕಷ್ಟಕರವಾಗಿದೆ. ವಾಸ್ತವವಾಗಿ ಇದು ಜೀರ್ಣಾಂಗ ವ್ಯವಸ್ಥೆಯ(Digestion system) ಮೇಲೆ ಹೆಚ್ಚಿನ ಒತ್ತಡವನ್ನು ಉಂಟುಮಾಡುತ್ತದೆ. ಹೆಚ್ಚು ವ್ಯಾಯಾಮ(Exercise) ಮಾಡುವವರು ಈ ಪ್ರೋಟೀನ್ ಅಂದರೆ ಅಮೃತ ಎಂದುಕೊಳ್ಳುತ್ತಾರೆ! ಆದರೆ, ಅದರ ದೂರಗಾಮಿ ಪರಿಣಾಮಗಳ ದೃಷ್ಟಿಯಿಂದ, ಇದನ್ನು ಇಷ್ಟೊಂದು ಅಧಿಕ ಪ್ರಮಾಣದಲ್ಲಿ ಬಳಸುವುದು ಆರೋಗ್ಯಕ್ಕೆ ಒಳ್ಳೆಯದಲ್ಲ.

ನಮ್ಮ ಭಾರತೀಯ ಸ್ವಾಭಾವಿಕ ಹಾಗೂ ಪಾರಂಪರಿಕ ಆಹಾರ ಪದ್ಧತಿಯಲ್ಲಿ ನಮಗೆ ಸಾಕಷ್ಟು ಪ್ರೋಟೀನ್ ಲಭ್ಯವಿರುವ ಪದಾರ್ಥಗಳು ಹೇರಳವಾಗಿವೆ. ಇವು ಆರೋಗ್ಯವನ್ನು ನೀಡುವುದಲ್ಲದೆ ಯಾವುದೇ ದುಷ್ಪರಿಣಾಮ ಕೂಡ ಬೀರುವುದಿಲ್ಲ. ಹೆಚ್ಚು ವ್ಯಾಯಾಮ ಮಾಡುವವರ ಮಾಂಸ ಖಂಡಗಳ ಪುಷ್ಟಿ ಗಾಗಿ ಭಾರತೀಯ ಆಹಾರ ಪದ್ಧತಿಯಲ್ಲಿನ ಕೆಲವು ಉತ್ತಮ ಪದಾರ್ಥಗಳ ಬಗ್ಗೆ ತಿಳಿದುಕೊಳ್ಳೋಣ.

  1.  ಅಶ್ವಗಂಧ ಚೂರ್ಣ + ಕಪಿಕಚ್ಚು ಚೂರ್ಣ + ಶ್ವೇತ ಮುಸ್ಲಿ ಚೂರ್ಣ ಇವುಗಳನ್ನು ಸಮಪ್ರಮಾಣದಲ್ಲಿ ತೆಗೆದುಕೊಂಡು ಅದನ್ನು ಹಾಲಿನೊಂದಿಗೆ ಬೆರೆಸಿ ಪ್ರತಿದಿನ ಸೇವಿಸಬೇಕು. ತುಂಬಾ ಪ್ರಯೋಜನಕಾರಿ.
  2. 2 ಚಮಚ ಅಶ್ವಗಂಧಾರಿಷ್ಟ + 2 ಚಮಚ ದ್ರಾಕ್ಷಾರಿಷ್ಟ = ರಾತ್ರಿ ಮಲಗುವಾಗ ಒಂದು ಲೋಟ ತಣ್ಣೀರಿನಲ್ಲಿ ಸೇವಿಸಬೇಕು.
  3.  ದೇಹಕ್ಕೆ ಮಸಾಜ್ ಮಾಡಲು ಮಹಾಮಾಶ್ ತೈಲ, ಅಶ್ವಗಂಧ ತೈಲವನ್ನು ಬಳಸುವುದು.
  4.  3 ಕೆಜಿ ಜೋಳ + ಅರ್ಧ ಕೆಜಿ ಸೋಯಾಬೀನ್ + 2 ಕೆಜಿ ರಾಗಿ ಒಟ್ಟಿಗೆ ಹಿಟ್ಟು ಮಾಡಿ ದಿನನಿತ್ಯ ಇದರಿಂದ ರೊಟ್ಟಿ ತಯಾರಿಸಿ ತಿನ್ನಬೇಕು.
  5.  ಒಂದು ಕೆಜಿ ಅಕ್ಕಿ + ಅರ್ಧ ಕೆಜಿ ಸೋಯಾಬೀನ್ + ಅರ್ಧ ಕೆಜಿ ಸಂಪೂರ್ಣ ಹೆಸರು ಕಾಳು ಇವುಗಳನ್ನು ಬೇರೆ ಬೇರೆಯಾಗಿ ಹುರಿದು, ರವೆ ತಯಾರಿಸಿಕೊಂಡು ಇಡಬೇಕು. ಪ್ರತಿದಿನ ಈ ರವೆಯಿಂದ ಕೇಸರಿ ಬಾತ್ (ಶಿರಾ) ತಯಾರಿಸಿ ಸೇವಿಸಬೇಕು.
  6.  ಹುರಿದ ಕಡಲೆ ಬೇಳೆ (ಪುಟಾಣಿ) 200 ಗ್ರಾಂ + ಹುರಿದ (ನೆಲ)ಕಡಲೆ ಕಾಳು 200 ಗ್ರಾಂ + ಎಳ್ಳು 100 ಗ್ರಾಂ ಪುಡಿ ಮಾಡಿ ಈ ಮಿಶ್ರಣವನ್ನು ದಿನದಲ್ಲಿ ನಿಮಗೆ ಹಸಿವಾದಾಗಲೆಲ್ಲಾ ತಿನ್ನಿ. ಇದು ಉತ್ತಮ ಟಾನಿಕ್!! 7) ಒಣ ಹಣ್ಣುಗಳು (ಡ್ರೈಫ್ರೂಟ್ಸ್) ಮತ್ತು ಒಣದ್ರಾಕ್ಷಿಗಳನ್ನು ತಿನ್ನುವುದು!

ಸಂಕಲನೆ: ಡಾ. ಪ್ರ. ಅ. ಕುಲಕರ್ಣಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ
August 23, 2026
7:58 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ
August 23, 2026
3:24 PM
by: ಸಾಯಿಶೇಖರ್ ಕರಿಕಳ
ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ
August 23, 2026
2:16 PM
by: ದ ರೂರಲ್ ಮಿರರ್.ಕಾಂ
ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ
August 23, 2026
12:18 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror