Advertisement
Opinion

ಡಬ್ಬದ ಪ್ರೊಟೀನ್ ಮತ್ತು ಸ್ವಾಭಾವಿಕ ಪ್ರೋಟೀನ್ ಇದರಲ್ಲಿ ಯಾವುದು ಉತ್ತಮ?

Share

 ಜಿಮ್‌ಗೆ(Gym) ಹೋಗುವ ಅನೇಕರು ಮಾಂಸ ಖಂಡ(muscle)ಪುಷ್ಟಿಗಾಗಿ ಅಲ್ಲಿ ದೊರೆಯುವ ಹಾಲಿನ ಪ್ರೋಟೀನ್‌ನನ್ನು(Milk Protein) ಡಬ್ಬಗಟ್ಟಲೆ ಸೇವಿಸುತ್ತಾರೆ! ಜಿಮ್‌ಗಳು ಎರಡನೇ ಆಲೋಚನೆಯಿಲ್ಲದೆ “ಯಾವುದೇ ಅಡ್ಡಪರಿಣಾಮಗಳಿಲ್ಲ(side effect)” ಎಂದು ಹೇಳುತ್ತ ಬೇಕಾಬಿಟ್ಟಿಯಾಗಿ ಈ ಪ್ರೋಟೀನ್ ಡಬ್ಬಗಳನ್ನು ಮಾರಾಟ ಮಾಡುತ್ತವೆ! ಆದರೆ, ಈ ಆಹಾರವು(Food) ಭಾರತೀಯ ಉಪಖಂಡದಲ್ಲಿ ಜೀರ್ಣಿಸಿಕೊಳ್ಳಲು ತುಂಬಾ ಕಷ್ಟಕರವಾಗಿದೆ. ವಾಸ್ತವವಾಗಿ ಇದು ಜೀರ್ಣಾಂಗ ವ್ಯವಸ್ಥೆಯ(Digestion system) ಮೇಲೆ ಹೆಚ್ಚಿನ ಒತ್ತಡವನ್ನು ಉಂಟುಮಾಡುತ್ತದೆ. ಹೆಚ್ಚು ವ್ಯಾಯಾಮ(Exercise) ಮಾಡುವವರು ಈ ಪ್ರೋಟೀನ್ ಅಂದರೆ ಅಮೃತ ಎಂದುಕೊಳ್ಳುತ್ತಾರೆ! ಆದರೆ, ಅದರ ದೂರಗಾಮಿ ಪರಿಣಾಮಗಳ ದೃಷ್ಟಿಯಿಂದ, ಇದನ್ನು ಇಷ್ಟೊಂದು ಅಧಿಕ ಪ್ರಮಾಣದಲ್ಲಿ ಬಳಸುವುದು ಆರೋಗ್ಯಕ್ಕೆ ಒಳ್ಳೆಯದಲ್ಲ.

ನಮ್ಮ ಭಾರತೀಯ ಸ್ವಾಭಾವಿಕ ಹಾಗೂ ಪಾರಂಪರಿಕ ಆಹಾರ ಪದ್ಧತಿಯಲ್ಲಿ ನಮಗೆ ಸಾಕಷ್ಟು ಪ್ರೋಟೀನ್ ಲಭ್ಯವಿರುವ ಪದಾರ್ಥಗಳು ಹೇರಳವಾಗಿವೆ. ಇವು ಆರೋಗ್ಯವನ್ನು ನೀಡುವುದಲ್ಲದೆ ಯಾವುದೇ ದುಷ್ಪರಿಣಾಮ ಕೂಡ ಬೀರುವುದಿಲ್ಲ. ಹೆಚ್ಚು ವ್ಯಾಯಾಮ ಮಾಡುವವರ ಮಾಂಸ ಖಂಡಗಳ ಪುಷ್ಟಿ ಗಾಗಿ ಭಾರತೀಯ ಆಹಾರ ಪದ್ಧತಿಯಲ್ಲಿನ ಕೆಲವು ಉತ್ತಮ ಪದಾರ್ಥಗಳ ಬಗ್ಗೆ ತಿಳಿದುಕೊಳ್ಳೋಣ.

  1. ಅಶ್ವಗಂಧ ಚೂರ್ಣ + ಕಪಿಕಚ್ಚು ಚೂರ್ಣ + ಶ್ವೇತ ಮುಸ್ಲಿ ಚೂರ್ಣ ಇವುಗಳನ್ನು ಸಮಪ್ರಮಾಣದಲ್ಲಿ ತೆಗೆದುಕೊಂಡು ಅದನ್ನು ಹಾಲಿನೊಂದಿಗೆ ಬೆರೆಸಿ ಪ್ರತಿದಿನ ಸೇವಿಸಬೇಕು. ತುಂಬಾ ಪ್ರಯೋಜನಕಾರಿ.
  2. 2 ಚಮಚ ಅಶ್ವಗಂಧಾರಿಷ್ಟ + 2 ಚಮಚ ದ್ರಾಕ್ಷಾರಿಷ್ಟ = ರಾತ್ರಿ ಮಲಗುವಾಗ ಒಂದು ಲೋಟ ತಣ್ಣೀರಿನಲ್ಲಿ ಸೇವಿಸಬೇಕು.
  3. ದೇಹಕ್ಕೆ ಮಸಾಜ್ ಮಾಡಲು ಮಹಾಮಾಶ್ ತೈಲ, ಅಶ್ವಗಂಧ ತೈಲವನ್ನು ಬಳಸುವುದು.
  4. 3 ಕೆಜಿ ಜೋಳ + ಅರ್ಧ ಕೆಜಿ ಸೋಯಾಬೀನ್ + 2 ಕೆಜಿ ರಾಗಿ ಒಟ್ಟಿಗೆ ಹಿಟ್ಟು ಮಾಡಿ ದಿನನಿತ್ಯ ಇದರಿಂದ ರೊಟ್ಟಿ ತಯಾರಿಸಿ ತಿನ್ನಬೇಕು.
  5. ಒಂದು ಕೆಜಿ ಅಕ್ಕಿ + ಅರ್ಧ ಕೆಜಿ ಸೋಯಾಬೀನ್ + ಅರ್ಧ ಕೆಜಿ ಸಂಪೂರ್ಣ ಹೆಸರು ಕಾಳು ಇವುಗಳನ್ನು ಬೇರೆ ಬೇರೆಯಾಗಿ ಹುರಿದು, ರವೆ ತಯಾರಿಸಿಕೊಂಡು ಇಡಬೇಕು. ಪ್ರತಿದಿನ ಈ ರವೆಯಿಂದ ಕೇಸರಿ ಬಾತ್ (ಶಿರಾ) ತಯಾರಿಸಿ ಸೇವಿಸಬೇಕು.
  6. ಹುರಿದ ಕಡಲೆ ಬೇಳೆ (ಪುಟಾಣಿ) 200 ಗ್ರಾಂ + ಹುರಿದ (ನೆಲ)ಕಡಲೆ ಕಾಳು 200 ಗ್ರಾಂ + ಎಳ್ಳು 100 ಗ್ರಾಂ ಪುಡಿ ಮಾಡಿ ಈ ಮಿಶ್ರಣವನ್ನು ದಿನದಲ್ಲಿ ನಿಮಗೆ ಹಸಿವಾದಾಗಲೆಲ್ಲಾ ತಿನ್ನಿ. ಇದು ಉತ್ತಮ ಟಾನಿಕ್!! 7) ಒಣ ಹಣ್ಣುಗಳು (ಡ್ರೈಫ್ರೂಟ್ಸ್) ಮತ್ತು ಒಣದ್ರಾಕ್ಷಿಗಳನ್ನು ತಿನ್ನುವುದು!

ಸಂಕಲನೆ: ಡಾ. ಪ್ರ. ಅ. ಕುಲಕರ್ಣಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…

9 hours ago

ತಕ್ಷಣ ಪೂರ್ಣಾವಧಿ ಕೃಷಿ ಸಚಿವರನ್ನು ನೇಮಿಸಿ – ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆಗ್ರಹ

ಕರ್ನಾಟಕದಲ್ಲಿ ಮಳೆ ಕೊರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೂರ್ಣಾವಧಿ ಕೃಷಿ ಸಚಿವರನ್ನು ತಕ್ಷಣ ನೇಮಿಸಬೇಕು…

15 hours ago

ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆಯಲ್ಲಿ ಯೋಗ ಹಾಗೂ ಸ್ವಚ್ಛತಾ ಅಭಿಯಾನ

ವಿಶ್ವ ಯೋಗ ದಿನದ ಅಂಗವಾಗಿ ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆ ಉದ್ಯೋಗಿಗಳ ರಿಕ್ರಿಯೇಷನ್ ಸೆಂಟರ್…

16 hours ago

ಮುಂಗಾರು ಮಳೆ ಕೊರತೆ 40%ಕ್ಕೆ ಏರಿಕೆ – ದೇಶದ ಕೃಷಿಯ ಹೃದಯಭಾಗದಲ್ಲಿ ಮೋಡಗಳೇ ಇಲ್ಲ..!

ದೇಶದಲ್ಲಿ ಮುಂಗಾರು ಮಳೆ ಕೊರತೆ 40%ಕ್ಕೆ ಏರಿಕೆಯಾಗಿದ್ದು, ಪ್ರಮುಖ ಕೃಷಿ ಪ್ರದೇಶಗಳಲ್ಲಿ ಮೋಡಗಳ…

16 hours ago

ಕೇರಳ ಬಜೆಟ್‌ನಲ್ಲಿ ರಬ್ಬರ್‌ ಬೆಳೆಗಾರರಿಗೆ ಬಂಪರ್‌ ಸಿಹಿ ಸುದ್ದಿ- ಬೆಂಬಲ ಬೆಲೆ ₹250ಕ್ಕೆ ಏರಿಕೆ

ಕೇರಳ ಸರ್ಕಾರ ರಬ್ಬರ್‌ ಬೆಂಬಲ ಬೆಲೆಯನ್ನು ₹200ರಿಂದ ₹250ಕ್ಕೆ ಹೆಚ್ಚಿಸಿದೆ. ಮಾರುಕಟ್ಟೆ ಬೆಲೆ…

23 hours ago