ನಮ್ಮ ಪ್ರಧಾನಿಯವರು ಹೇಳಿದಂತೆ ಅಟಕ್ ನಾ, ಲಟ್ ಕಾನಾ, ಬಟ್ ಕಾನಾ….. ಅಂದರೆ, ಒಂದು ಕೆಲಸವನ್ನು ತಡೆಹಿಡಿಯುವುದು, ತ್ರಿಶಂಕುವಿನಲ್ಲಿ ನೇತಾಡಿಸುವುದು, ಫಲಾನುಭವಿಯನ್ನು ಅಲೆದಾಡಿಸುವುದು ಇದು ಸರಕಾರಿ ಕೆಲಸದ ಪೂರೈಕೆಯಲ್ಲಿ ಇರುವ ಅಡೆತಡೆಗಳು. ಅನೇಕ ದಶಕಗಳಿಂದ ಈ ಪದ್ಧತಿ ನಡೆದುಕೊಂಡು ಬಂದಿದೆ.
ಆದರೆ 2016- 2017 ರಿಂದ ಆರಂಭಗೊಂಡ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ರೀತಿಯ ಅನೇಕ ಯೋಜನೆಗಳು ಯಾವುದೇ ಅಡೆ-ತಡೆಗಳು ಇಲ್ಲದೆ ಫಲಾನುಭವಿ ಗೆ ಸುಲಭವಾಗಿ ಲಭ್ಯ ಆಗಿದ್ದವು. ಫಲಾನುಭವಿಯ ಖಾತೆಗೆ ನೇರವಾಗಿ ಹಣದ ವರ್ಗಾವಣೆ ನಡೆಯುತ್ತಿತ್ತು. ಈಗ ಮತ್ತೆ ಹಳೆಯ ಚಾಳಿ ಮರುಕಳಿಸುವ ಲಕ್ಷಣಗಳು ಗೋಚರಿಸುತ್ತಿವೆ. ಕಳೆದ ವರ್ಷವೇ ಬೆಳೆ ದಾಖಲೀಕರಣದ ಹೆಸರಿನಲ್ಲಿ ವಿಮೆ ಸೌಲಭ್ಯವನ್ನು ಕಠಿಣಗೊಳಿಸುವ ಕೆಲಸ ನಡೆದಿತ್ತು. ಈ ವರ್ಷ ಒಂದು ಹೆಜ್ಜೆ ಮುಂದೆ ಹೋಗಿ, ವಿಮೆ ಕಂತು ಕಟ್ಟುವ ಸಂದರ್ಭದಲ್ಲೇ ಅದು ಸ್ವೀಕಾರ ಆಗದೆ ಅನೇಕ ರೈತರಿಗೆ ತಲೆ ನೋವಾಗಿ ಪರಿಣಮಿಸಿದೆ.
ಇಲಾಖೆಯ ಅಧಿಕಾರಿಗಳನ್ನು ಈ ಬಗ್ಗೆ ವಿಚಾರಿಸಿದಾಗ, ಅವರು ಅದರಿಂದ ತಪ್ಪಿಸಿಕೊಂಡು, ಬೇರೆ ಇಲಾಖೆ ಅಥವಾ ಸರಕಾರದ ಮೇಲೆ ಗೂಬೆ ಕೂರಿಸುವ ಮೂಲಕ ತಾವು ತಮ್ಮ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ.
ರೈತರು ಇದನ್ನು ಪ್ರಶ್ನಿಸದೆ, ಸಂಬಂಧಪಟ್ಟ ಇಲಾಖೆಯನ್ನು ಸಂಪರ್ಕಿಸಿ ದೂರು ದಾಖಲಿಸಿ, ಸಮಸ್ಯೆಯನ್ನು ಪರಿಹರಿಸಿಕೊಳ್ಳುವ ಶಿಕ್ಷಣವನ್ನು ಪಡೆಯಬೇಕಿದೆ. ಈ ಎಲ್ಲದರ ಮಧ್ಯೆ ಕಾನೂನು ತಜ್ಞರಿಗೆ ಕೆಲವು ಪ್ರಶ್ನೆಗಳು.
ಮೂಲ : social network
ಕಿಸಾನ್ ಸಮ್ಮಾನ್ ನಿಧಿಯಿಂದ 9 ಕೋಟಿ 50 ಲಕ್ಷ ರೈತರಿಗೆ 21 ಸಾವಿರ…
ತುಮಕೂರು ಜಿಲ್ಲೆಯಲ್ಲಿ 1351 ಹಾಲು ಉತ್ಪಾದಕರ ಸಹಕಾರ ಸಂಘಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರತಿನಿತ್ಯ 9.40…
ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿನ ಜೈವಿಕ ತ್ಯಾಜ್ಯಗಳನ್ನು ನಗರಸಭೆ ಕಸ ಹಾಗೂ ಜನನಿಬಿಡ ಪ್ರದೇಶಗಳಲ್ಲಿ…
ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ 16 ಸಾವಿರದ 114…
ಚಿಕ್ಕಮಗಳೂರು ಜಿಲ್ಲೆಯ ಹೊರನಾಡಿನ ಪ್ರಸಿದ್ದ ಅನ್ನಪೂರ್ಣೇಶ್ವರಿ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿಗೆ ತರಲಾಗಿದೆ…
20.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…