ನಮ್ಮ ಪ್ರಧಾನಿಯವರು ಹೇಳಿದಂತೆ ಅಟಕ್ ನಾ, ಲಟ್ ಕಾನಾ, ಬಟ್ ಕಾನಾ….. ಅಂದರೆ, ಒಂದು ಕೆಲಸವನ್ನು ತಡೆಹಿಡಿಯುವುದು, ತ್ರಿಶಂಕುವಿನಲ್ಲಿ ನೇತಾಡಿಸುವುದು, ಫಲಾನುಭವಿಯನ್ನು ಅಲೆದಾಡಿಸುವುದು ಇದು ಸರಕಾರಿ ಕೆಲಸದ ಪೂರೈಕೆಯಲ್ಲಿ ಇರುವ ಅಡೆತಡೆಗಳು. ಅನೇಕ ದಶಕಗಳಿಂದ ಈ ಪದ್ಧತಿ ನಡೆದುಕೊಂಡು ಬಂದಿದೆ.
ಆದರೆ 2016- 2017 ರಿಂದ ಆರಂಭಗೊಂಡ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ರೀತಿಯ ಅನೇಕ ಯೋಜನೆಗಳು ಯಾವುದೇ ಅಡೆ-ತಡೆಗಳು ಇಲ್ಲದೆ ಫಲಾನುಭವಿ ಗೆ ಸುಲಭವಾಗಿ ಲಭ್ಯ ಆಗಿದ್ದವು. ಫಲಾನುಭವಿಯ ಖಾತೆಗೆ ನೇರವಾಗಿ ಹಣದ ವರ್ಗಾವಣೆ ನಡೆಯುತ್ತಿತ್ತು. ಈಗ ಮತ್ತೆ ಹಳೆಯ ಚಾಳಿ ಮರುಕಳಿಸುವ ಲಕ್ಷಣಗಳು ಗೋಚರಿಸುತ್ತಿವೆ. ಕಳೆದ ವರ್ಷವೇ ಬೆಳೆ ದಾಖಲೀಕರಣದ ಹೆಸರಿನಲ್ಲಿ ವಿಮೆ ಸೌಲಭ್ಯವನ್ನು ಕಠಿಣಗೊಳಿಸುವ ಕೆಲಸ ನಡೆದಿತ್ತು. ಈ ವರ್ಷ ಒಂದು ಹೆಜ್ಜೆ ಮುಂದೆ ಹೋಗಿ, ವಿಮೆ ಕಂತು ಕಟ್ಟುವ ಸಂದರ್ಭದಲ್ಲೇ ಅದು ಸ್ವೀಕಾರ ಆಗದೆ ಅನೇಕ ರೈತರಿಗೆ ತಲೆ ನೋವಾಗಿ ಪರಿಣಮಿಸಿದೆ.
ಇಲಾಖೆಯ ಅಧಿಕಾರಿಗಳನ್ನು ಈ ಬಗ್ಗೆ ವಿಚಾರಿಸಿದಾಗ, ಅವರು ಅದರಿಂದ ತಪ್ಪಿಸಿಕೊಂಡು, ಬೇರೆ ಇಲಾಖೆ ಅಥವಾ ಸರಕಾರದ ಮೇಲೆ ಗೂಬೆ ಕೂರಿಸುವ ಮೂಲಕ ತಾವು ತಮ್ಮ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ.
ರೈತರು ಇದನ್ನು ಪ್ರಶ್ನಿಸದೆ, ಸಂಬಂಧಪಟ್ಟ ಇಲಾಖೆಯನ್ನು ಸಂಪರ್ಕಿಸಿ ದೂರು ದಾಖಲಿಸಿ, ಸಮಸ್ಯೆಯನ್ನು ಪರಿಹರಿಸಿಕೊಳ್ಳುವ ಶಿಕ್ಷಣವನ್ನು ಪಡೆಯಬೇಕಿದೆ. ಈ ಎಲ್ಲದರ ಮಧ್ಯೆ ಕಾನೂನು ತಜ್ಞರಿಗೆ ಕೆಲವು ಪ್ರಶ್ನೆಗಳು.
ಮೂಲ : social network
ದೆಹಲಿಯಲ್ಲಿ ಆಯೋಜಿಸಿದ್ದ 58ನೇ ಜ್ಞಾನಪೀಠ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ, ರಾಷ್ಟ್ರಪತಿ ದ್ರೌಪದಿ ಮುರ್ಮು…
ಮುಂದಿನ 5 ದಿನಗಳ ಕಾಲ ಕೇರಳದಲ್ಲಿಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆಗೆ ಸಂಬಂಧಿಸಿ ಸುಮಾರು 7 ಸಮಿತಿಗಳು-ವರದಿಗಳು ಆಗಿವೆ. ಎಲ್ಲಾ ಸಂದರ್ಭದಲ್ಲೂ ಅಡಿಕೆಯ ಪರ್ಯಾಯ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಕೆಲ ದೇವಾಲಯಗಳು ತಮ್ಮ ಶಿಲ್ಪಕಲೆ, ಇತಿಹಾಸ, ಸೌಂದರ್ಯಕ್ಕೆ ಹೆಸರಾದರೆ ಮತ್ತೆ ಕೆಲವು ಭಕ್ತರ…