Advertisement
Opinion

ರೈತ ಫಲಾನುಭವಿಗಳನ್ನು ಅಲೆದಾಡಿಸದೇ ಸವಲತ್ತು ನೀಡಬಹುದೇ…? | ರೈತರು ಇಂತಹ ಕಡೆ ಪ್ರಶ್ನಿಸುವಂತಾಗಲು ಸಾಧ್ಯವೇ…?

Share

ನಮ್ಮ ಪ್ರಧಾನಿಯವರು ಹೇಳಿದಂತೆ ಅಟಕ್ ನಾ, ಲಟ್ ಕಾನಾ, ಬಟ್ ಕಾನಾ….. ಅಂದರೆ, ಒಂದು ಕೆಲಸವನ್ನು ತಡೆಹಿಡಿಯುವುದು, ತ್ರಿಶಂಕುವಿನಲ್ಲಿ ನೇತಾಡಿಸುವುದು, ಫಲಾನುಭವಿಯನ್ನು ಅಲೆದಾಡಿಸುವುದು ಇದು ಸರಕಾರಿ ಕೆಲಸದ ಪೂರೈಕೆಯಲ್ಲಿ ಇರುವ ಅಡೆತಡೆಗಳು. ಅನೇಕ ದಶಕಗಳಿಂದ ಈ ಪದ್ಧತಿ  ನಡೆದುಕೊಂಡು ಬಂದಿದೆ.

ಆದರೆ 2016- 2017 ರಿಂದ ಆರಂಭಗೊಂಡ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ರೀತಿಯ ಅನೇಕ ಯೋಜನೆಗಳು ಯಾವುದೇ ಅಡೆ-ತಡೆಗಳು ಇಲ್ಲದೆ ಫಲಾನುಭವಿ ಗೆ ಸುಲಭವಾಗಿ ಲಭ್ಯ ಆಗಿದ್ದವು. ಫಲಾನುಭವಿಯ ಖಾತೆಗೆ ನೇರವಾಗಿ ಹಣದ ವರ್ಗಾವಣೆ ನಡೆಯುತ್ತಿತ್ತು. ಈಗ ಮತ್ತೆ ಹಳೆಯ ಚಾಳಿ ಮರುಕಳಿಸುವ ಲಕ್ಷಣಗಳು ಗೋಚರಿಸುತ್ತಿವೆ. ಕಳೆದ ವರ್ಷವೇ ಬೆಳೆ ದಾಖಲೀಕರಣದ ಹೆಸರಿನಲ್ಲಿ ವಿಮೆ ಸೌಲಭ್ಯವನ್ನು ಕಠಿಣಗೊಳಿಸುವ ಕೆಲಸ ನಡೆದಿತ್ತು. ಈ ವರ್ಷ ಒಂದು ಹೆಜ್ಜೆ ಮುಂದೆ ಹೋಗಿ, ವಿಮೆ ಕಂತು ಕಟ್ಟುವ ಸಂದರ್ಭದಲ್ಲೇ ಅದು ಸ್ವೀಕಾರ ಆಗದೆ ಅನೇಕ ರೈತರಿಗೆ ತಲೆ ನೋವಾಗಿ ಪರಿಣಮಿಸಿದೆ.
ಇಲಾಖೆಯ ಅಧಿಕಾರಿಗಳನ್ನು ಈ ಬಗ್ಗೆ ವಿಚಾರಿಸಿದಾಗ, ಅವರು ಅದರಿಂದ ತಪ್ಪಿಸಿಕೊಂಡು, ಬೇರೆ ಇಲಾಖೆ ಅಥವಾ ಸರಕಾರದ ಮೇಲೆ ಗೂಬೆ ಕೂರಿಸುವ ಮೂಲಕ ತಾವು ತಮ್ಮ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ.

ರೈತರು ಇದನ್ನು ಪ್ರಶ್ನಿಸದೆ, ಸಂಬಂಧಪಟ್ಟ ಇಲಾಖೆಯನ್ನು ಸಂಪರ್ಕಿಸಿ ದೂರು ದಾಖಲಿಸಿ, ಸಮಸ್ಯೆಯನ್ನು ಪರಿಹರಿಸಿಕೊಳ್ಳುವ ಶಿಕ್ಷಣವನ್ನು ಪಡೆಯಬೇಕಿದೆ. ಈ ಎಲ್ಲದರ ಮಧ್ಯೆ ಕಾನೂನು ತಜ್ಞರಿಗೆ  ಕೆಲವು ಪ್ರಶ್ನೆಗಳು.

  1. ಅಡಿಕೆ ಒಂದು ತೋಟಗಾರಿಕಾ ಬಹು ವಾರ್ಷಿಕ ಬೆಳೆ, ಹಾಗಾಗಿ ಹಿಂದಿನ ವರ್ಷಗಳಲ್ಲಿ ವಿಮೆ ನೀಡಿದ ದಾಖಲೆ ಇದ್ದಾಗ ಈ ವರ್ಷ ನಿರಾಕರಿಸಿದರೆ, ಗ್ರಾಹಕ ನ್ಯಾಯಾಲಯದಲ್ಲಿ ಹೋರಾಟ ನಡೆಸಿ ಗೆಲುವು ಪಡೆಯಬಹುದೇ?.
  2. ಈ ವರ್ಷ ಅನೇಕ ರೈತರು ವಿಮೆ ಪಾವತಿಸಲಾಗದೆ ಸೌಲಭ್ಯದಿಂದ ಹೊರಗೆ ಉಳಿಯುತ್ತಿದ್ದು, ಅದರ ಕುರಿತು ವಿಮಾ ಕಂಪನಿಯವಿರುದ್ಧ ಕಾನೂನಾತ್ಮಕ ಹೋರಾಟ ನಡೆಸಲು ಅವಕಾಶ ಇದೆಯೇ?.
  3. ವಿಮೆ ಅರ್ಜಿಯಲ್ಲಿ ಬೆಳೆಯ ದೃಢೀಕರಣ ಕಡ್ಡಾಯ ಎಂದು ಸಹಿ ಹಾಕಿಸಿಕೊಳ್ಳುವುದು ಅಪರಾಧ ಅಲ್ಲವೇ?.
  4. ಪ್ರತ್ಯಕ್ಷ ಜಮೀನಿನಲ್ಲಿ ಬೆಳೆ ಇರುವಾಗ, ಅದನ್ನು ನಂಬದೆ ತಂತ್ರಾಂಶದಲ್ಲಿ ಇರುವ ಮಾಹಿತಿಯನ್ನು ನಂಬುವುದು ರೈತನಿಗೆ ಮಾಡುವ ಅಪಮಾನ ಹಾಗೂ ರೈತನ ಮೂಲಭೂತ ಹಕ್ಕಿನ ಉಲ್ಲಂಘನೆ ಅಲ್ಲವೇ?.
  5. ನ್ಯಾಯಯುತವಾಗಿ ವಿಮೆ ಕಟ್ಟಲು ಮುಂದಾದ ರೈತನಿಗೆ ವಿಮಾ ಸೌಲಭ್ಯವನ್ನು ನಿರಾಕರಿಸುವುದು ದಂಡಾರ್ಹ ಅಪರಾಧ ಅಲ್ಲವೇ?.
  6. ರೈತರು ಈ ಬಗ್ಗೆ ಸ್ವಾಭಿಮಾನದ ಹೋರಾಟ ನಡೆಸಿ, ಈ ರೀತಿಯ ತಾಂತ್ರಿಕ ತೊಂದರೆಗಳನ್ನು ಉಂಟು ಮಾಡಿರುವವರ ವಿರುದ್ಧ ವಿಜಯ ಗಳಿಸುವುದು ಅಪೇಕ್ಷಣೀಯ ಅಲ್ಲವೇ?.
  7. ಈ ವಿಮಾ ಸೌಲಭ್ಯವನ್ನು ಪಡೆಯುವಲ್ಲಿ ಉಂಟಾದ ಸಮಯ, ನೆಮ್ಮದಿ, ಆರ್ಥಿಕ ನಷ್ಟಗಳಿಗೆ ಪರಿಹಾರ ಸಿಗಬೇಕಲ್ಲವೇ?.

ಮೂಲ : social network

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

43 minutes ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

60 minutes ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

1 hour ago

ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್

ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…

1 hour ago

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

1 day ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

1 day ago