ನಮ್ಮ ಪ್ರಧಾನಿಯವರು ಹೇಳಿದಂತೆ ಅಟಕ್ ನಾ, ಲಟ್ ಕಾನಾ, ಬಟ್ ಕಾನಾ….. ಅಂದರೆ, ಒಂದು ಕೆಲಸವನ್ನು ತಡೆಹಿಡಿಯುವುದು, ತ್ರಿಶಂಕುವಿನಲ್ಲಿ ನೇತಾಡಿಸುವುದು, ಫಲಾನುಭವಿಯನ್ನು ಅಲೆದಾಡಿಸುವುದು ಇದು ಸರಕಾರಿ ಕೆಲಸದ ಪೂರೈಕೆಯಲ್ಲಿ ಇರುವ ಅಡೆತಡೆಗಳು. ಅನೇಕ ದಶಕಗಳಿಂದ ಈ ಪದ್ಧತಿ ನಡೆದುಕೊಂಡು ಬಂದಿದೆ.
ಆದರೆ 2016- 2017 ರಿಂದ ಆರಂಭಗೊಂಡ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ರೀತಿಯ ಅನೇಕ ಯೋಜನೆಗಳು ಯಾವುದೇ ಅಡೆ-ತಡೆಗಳು ಇಲ್ಲದೆ ಫಲಾನುಭವಿ ಗೆ ಸುಲಭವಾಗಿ ಲಭ್ಯ ಆಗಿದ್ದವು. ಫಲಾನುಭವಿಯ ಖಾತೆಗೆ ನೇರವಾಗಿ ಹಣದ ವರ್ಗಾವಣೆ ನಡೆಯುತ್ತಿತ್ತು. ಈಗ ಮತ್ತೆ ಹಳೆಯ ಚಾಳಿ ಮರುಕಳಿಸುವ ಲಕ್ಷಣಗಳು ಗೋಚರಿಸುತ್ತಿವೆ. ಕಳೆದ ವರ್ಷವೇ ಬೆಳೆ ದಾಖಲೀಕರಣದ ಹೆಸರಿನಲ್ಲಿ ವಿಮೆ ಸೌಲಭ್ಯವನ್ನು ಕಠಿಣಗೊಳಿಸುವ ಕೆಲಸ ನಡೆದಿತ್ತು. ಈ ವರ್ಷ ಒಂದು ಹೆಜ್ಜೆ ಮುಂದೆ ಹೋಗಿ, ವಿಮೆ ಕಂತು ಕಟ್ಟುವ ಸಂದರ್ಭದಲ್ಲೇ ಅದು ಸ್ವೀಕಾರ ಆಗದೆ ಅನೇಕ ರೈತರಿಗೆ ತಲೆ ನೋವಾಗಿ ಪರಿಣಮಿಸಿದೆ.
ಇಲಾಖೆಯ ಅಧಿಕಾರಿಗಳನ್ನು ಈ ಬಗ್ಗೆ ವಿಚಾರಿಸಿದಾಗ, ಅವರು ಅದರಿಂದ ತಪ್ಪಿಸಿಕೊಂಡು, ಬೇರೆ ಇಲಾಖೆ ಅಥವಾ ಸರಕಾರದ ಮೇಲೆ ಗೂಬೆ ಕೂರಿಸುವ ಮೂಲಕ ತಾವು ತಮ್ಮ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ.
ರೈತರು ಇದನ್ನು ಪ್ರಶ್ನಿಸದೆ, ಸಂಬಂಧಪಟ್ಟ ಇಲಾಖೆಯನ್ನು ಸಂಪರ್ಕಿಸಿ ದೂರು ದಾಖಲಿಸಿ, ಸಮಸ್ಯೆಯನ್ನು ಪರಿಹರಿಸಿಕೊಳ್ಳುವ ಶಿಕ್ಷಣವನ್ನು ಪಡೆಯಬೇಕಿದೆ. ಈ ಎಲ್ಲದರ ಮಧ್ಯೆ ಕಾನೂನು ತಜ್ಞರಿಗೆ ಕೆಲವು ಪ್ರಶ್ನೆಗಳು.
ಮೂಲ : social network
ಹೋಟೆಲ್ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…
ಅಡಿಕೆ ಮಾರುಕಟ್ಟೆಯ ಇತ್ತೀಚಿನ ಕುಸಿತ ಜಾಗತಿಕ ರಾಜಕೀಯ ಅನಿಶ್ಚಿತತೆ ಹಾಗೂ ಹಣದ ಹರಿವು…
ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…
ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…
ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…
ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…